Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಕ್ಯಾಸಿನೊಗೆ 25 ಲಕ್ಷ ರೂ....

ಒಂದು ಕ್ಯಾಸಿನೊಗೆ 25 ಲಕ್ಷ ರೂ. ಲೆಕ್ಕದಲ್ಲಿ ಮಾಮೂಲಿ ಕೊಡಿ, ಇಲ್ಲದಿದ್ದರೆ ...

ಈ ಬೆದರಿಕೆ ಹಾಕಿದ್ದು ಗೂಂಡಾ ಅಲ್ಲ, ಒಂದು ಪ್ರತಿಷ್ಠಿತ ಪತ್ರಿಕೆ !

ವಾರ್ತಾಭಾರತಿವಾರ್ತಾಭಾರತಿ19 July 2016 1:11 PM IST
share
ಒಂದು ಕ್ಯಾಸಿನೊಗೆ 25 ಲಕ್ಷ ರೂ. ಲೆಕ್ಕದಲ್ಲಿ ಮಾಮೂಲಿ ಕೊಡಿ, ಇಲ್ಲದಿದ್ದರೆ ...

ಪಣಜಿ, ಜು.19 ಗೋವಾದ ಪ್ರತಿಷ್ಠಿತ ಆಂಗ್ಲ ದೈನಿಕ ‘ಹೆರಾಲ್ಡ್’ ತನ್ನ ನಿರ್ಭೀತ ಪತ್ರಿಕೋದ್ಯಮಕ್ಕೆ ಒಂದು ಕಾಲದಲ್ಲಿ ಹೆಸರುವಾಸಿಯಾಗಿದ್ದರೂ ಕುಟುಕು ಕಾರ್ಯಾಚರಣೆಯೊಂದರಲ್ಲಿ ಚಿತ್ರೀಕರಿಸಲ್ಪಟ್ಟ ವೀಡಿಯೊವೊಂದರಲ್ಲಿ ಪತ್ರಿಕೆಯ ಮಾರಾಟ ವಿಭಾಗದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಒಬ್ಬರು ತನ್ನ ಬಾಸ್ ಆದೇಶದಂತೆ ಕ್ಯಾಸಿನೊ ಮಾಲಕನೊಬ್ಬನಿಗೆ ಪ್ರತೀ ತಿಂಗಳು 25 ಲಕ್ಷ ರೂ. ನೀಡಬೇಕು ಇಲ್ಲವೇ ಅದರ ವಿರುದ್ಧದ ಅಪಪ್ರಚಾರ ಮುಂದುವರಿಯುವುದು ಎಂದು ಧಮ್ಕಿ ಹಾಕಿರುವುದು ತಿಳಿದು ಬಂದಿದೆ. ಈ ವೀಡಿಯೊವನ್ನು ಪತ್ರಕರ್ತ ಮಾಯಾಭೂಷಣ್ ನಾಗ್ವೆನ್ಕರ್ ಬಿಡುಗಡೆ ಮಾಡಿದ್ದಾರೆ.

ಕ್ಯಾಸಿನೋ ಮ್ಯಾನೇಜರ್ ಅಥವಾ ಅದರ ಪ್ರತಿನಿಧಿ ಕಳೆದ ವರ್ಷ ರಹಸ್ಯ ಕ್ಯಾಮರಾ ಮೂಲಕ ಈ ಸಂಭಾಷಣೆಯನ್ನು ದಾಖಲಿಸಿದ್ದಿರಬೇಕೆಂದು ಅಂದಾಜಿಸಲಾಗಿದ್ದು ಅದಕ್ಕೆ ಸಬ್ ಟೈಟಲ್ ಗಳನ್ನು ಸೇರಿಸಿ ನಾಗ್ವೆನ್ಕರ್ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಗೋವಾದಲ್ಲಿ ಐದು ಕ್ಯಾಸಿನೊಗಳು ಕಾರ್ಯಾಚರಿಸುತ್ತಿದ್ದು ಅವುಗಳ ಸುತ್ತವಿರುವ ವಿವಾದಗಳು ಹಾಗೂ ಅವುಗಳನ್ನು ಸೂಕ್ತವಾಗಿ ನಿಯಂತ್ರಿಸಲು ಕ್ರಮಗಳ ಕೊರತೆಯಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ.

ಆದರೆ ಅವುಗಳಿರುವ ಪರಿಸ್ಥಿತಿಯ ಲಾಭ ಪಡೆಯಲು ಹೆರಾಲ್ಡ್‌ನಂತಹ ಪತ್ರಿಕಾ ಸಂಸ್ಥೆ ಪ್ರಯತ್ನ ನಡೆಸಿ ತನ್ನ ಜಾಹೀರಾತು ಆದಾಯವನ್ನು ಹೆಚ್ಚಿಸಲು ಯತ್ನಿಸಿರುವುದು ನಿಜಕ್ಕೂ ಆತಂಕಕಾರಿಯೆಂದು ‘ದಿ ಹೂಟ್’ ವರದಿಯೊಂದು ತಿಳಿಸಿದೆ.

ಈ ಬಹಿರಂಗಗೊಂಡಿರುವ ವೀಡಿಯೊ ವಿಚಾರವಾಗಿ ಹೆರಾಲ್ಡ್ ಪತ್ರಿಕೆಯ ಸಂಪಾದಕ ಸುಜಯ್ ಗುಪ್ತಾ ತಮ್ಮ ಮುಖಪುಟ ಸಂಪಾದಕೀಯದಲ್ಲಿ ಪತ್ರಿಕೆಗಾದ ಮಾನಹಾನಿಯನ್ನು ತಡೆಯಲು ಪ್ರಯತ್ನ ನಡೆಸಿರುವುದು ಕಾಣಿಸುತ್ತಿದೆಯಾದರೂ ಅದು ತಮ್ಮದೇ ಪತ್ರಿಕೆಯ ರಹಸ್ಯ ವ್ಯವಹಾರಗಳಿಂದ ತಮ್ಮನ್ನು ದೂರಗೊಳಿಸುವ ಒಂದು ಕ್ಷೀಣ ಯತ್ನವೆಂದೇ ಹೇಳಬಹುದು ಎಂದು ವರದಿ ಹೇಳಿದೆ.

ಪತ್ರಿಕೆಯ ಹಲವಾರು ಮಾಜಿ ಉದ್ಯೋಗಿಗಳು ಈ ವೀಡಿಯೊ ನೋಡಿ ಆಘಾತ ವ್ಯಕ್ತಪಡಿಸಿದರೆ, ಅದರ ಈಗಿನ ಯುವ ಉದ್ಯೋಗಿಗಳು ಈ ಬೆಳವಣಿಗೆಯಿಂದ ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆಂಬುದು ನಿರ್ವಿವಾದವೆಂದು, ದಿ ಹೂಟ್ ವರದಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. 


ವೀಡಿಯೊ ನೋಡಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X