Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರದಲ್ಲಿ 1 ಅಡುಗೆ ಅನಿಲ ಸಿಲಿಂಡರ್...

ನಗರದಲ್ಲಿ 1 ಅಡುಗೆ ಅನಿಲ ಸಿಲಿಂಡರ್ ಹೊಂದಿರುವವರಿಗೆ ಮತ್ತೊಂದು ಉಚಿತ!

ಸಚಿವ ಸಂಪುಟದಲ್ಲಿ ಒಪ್ಪಿಗೆ ಬಳಿಕ ವಿತರಣೆ: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ19 July 2016 5:53 PM IST
share
ನಗರದಲ್ಲಿ 1 ಅಡುಗೆ ಅನಿಲ ಸಿಲಿಂಡರ್ ಹೊಂದಿರುವವರಿಗೆ ಮತ್ತೊಂದು ಉಚಿತ!

ಮಂಗಳೂರು,ಜು.19: ನಗರ ಪ್ರದೇಶದಲ್ಲಿ ಒಂದು ಅಡುಗೆ ಅನಿಲ ಸಿಲಿಂಡರ್ ಹೊಂದಿರುವವರಿಗೆ ಮತ್ತೊಂದು ಸಿಲಿಂಡರನ್ನು ರಾಜ್ಯ ಸರಕಾರದಿಂದ ಉಚಿತವಾಗಿ ನೀಡುವ ವಿನೂತನ ಕಾರ್ಯಕ್ರಮವನ್ನು ಇಲಾಖೆ ರೂಪಿಸಿದ್ದು, ಈ ಬಗ್ಗೆ ಸರಕಾರದ ಮುಂದೆ ಪ್ರಸ್ತಾವನೆ ಇರಿಸಲಾಗಿದ್ದು, ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಾಕ್ಷಣ ವಿತರಣೆ ಕಾರ್ಯ ಆರಂಭಗೊಳ್ಳಲಿದೆ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರದಲ್ಲಿ ಒಂದು ಸಿಲಿಂಡರ್ ಹೊಂದಿರುವವರು ಅದು ಖಾಲಿಯಾದ ಬಳಿಕ ಮತ್ತೊಂದು ಸಿಲಿಂಡರ್ ದೊರೆಯುವವರೆಗೆ ಅಡುಗೆಗೆ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಕ್ಕೆ ಸರಕಾರ ಮುಂದಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಗೆ ಪೂರಕವಾಗಿ, ಒಂದು ಸಿಲಿಂಡರ್ ಹೊಂದಿರುವವರು ಮತ್ತೊಂದು ಸಿಲಿಂಡರ್ ಬದಲಿಗೆ ಎರಡು ಸೋಲಾರ್ ದೀಪಗಳನ್ನು ಪಡೆಯಬಹುದಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅನುಮೋದನೆ ದೊರಕಿದ ಬಳಿಕ ಸಾರ್ವಜನಿಕರಿಗೆ ವಿತರಣೆ ಕಾರ್ಯ ನಡೆಯಲಿದೆ ಎಂದು ಸಚಿವ ಖಾದರ್ ತಿಳಿಸಿದರು.

ಪಡಿತರ ವ್ಯವಸ್ಥೆಯಡಿ ಅಡುಗೆ ಅನಿಲ ಹೊಂದಿದವರಿಗೆ ಪ್ರಸ್ತುತ ಸೀಮೆಎಣ್ಣೆ ಸಿಗುತ್ತಿಲ್ಲ. ಆದರೆ ಮಲೆನಾಡು ಪ್ರದೇಶಗಳಲ್ಲಿ ಮಳೆಗಾಲದಲ್ಲಿ ವಿದ್ಯುತ್‌ನ ವ್ಯವಸ್ಥೆಯೂ ಇಲ್ಲದೆ ಕತ್ತಲಲ್ಲಿ ಬದುಕುವಂತಹ ಪರಿಸ್ಥಿತಿ ಇದೆ. ಹಾಗಾಗಿ ಮಲೆನಾಡು ಪ್ರದೇಶಗಳಲ್ಲಿ ಜೂನ್‌ನಿಂದ ಆಗಸ್ಟ್‌ವರೆಗೆ ಮೂರು ತಿಂಗಳ ಅವಧಿಗೆ ಸೀಮೆಎಣ್ಣೆ ಪೂರೈಕೆಗೆ ಕ್ರಮ ಕೈಗೊಳ್ಳುವ ಬಗ್ಗೆಯೂ ಚಿಂತನೆ ಇದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X