Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಳಾಯಿ ಬಂದರು ಕಾಮಗಾರಿ ಶೀಘ್ರ ಆರಂಭ:...

ಕುಳಾಯಿ ಬಂದರು ಕಾಮಗಾರಿ ಶೀಘ್ರ ಆರಂಭ: ರಾಮಚಂದರ್ ಬೈಕಂಪಾಡಿ

ವಾರ್ತಾಭಾರತಿವಾರ್ತಾಭಾರತಿ19 July 2016 6:55 PM IST
share
ಕುಳಾಯಿ ಬಂದರು ಕಾಮಗಾರಿ ಶೀಘ್ರ ಆರಂಭ: ರಾಮಚಂದರ್ ಬೈಕಂಪಾಡಿ

ಮಂಗಳೂರು, ಜು, 19: ಮೀನುಗಾರರು ಇತ್ತೀಚೆಗೆ ನಡೆಸಿದ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕುಳಾಯಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರ್ವ ಋತು ಮೀನುಗಾರಿಕೆ ಬಂದರು ಪ್ರಸ್ತಾವನೆಯನ್ನು ರಾಜ್ಯ ಸರಕಾರ ಮಂಜೂರಾತಿಗಾಗಿ ಕೇಂದ್ರಕ್ಕೆ ಕಳುಹಿಸಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ರಾಮಚಂದರ್ ಬೈಕಂಪಾಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಬಂದರಿನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಕಳೆದ 20 ವರ್ಷಗಳಿಂದ ಸಾಂಪ್ರದಾಯಿಕ ಮೀನುಗಾರಿಕೆ ನಡೆಸಲು ನವಮಂಗಳೂರು ಬಂದರು ಮೂಲಕ ಸುಮಾರು 300 ಜನರಿಗೆ ಅವಕಾಶ ನೀಡಲಾಗಿದೆ. ನವಮಂಗಳೂರು ಬಂದರಿನ ಸುರಕ್ಷತಾ ದೃಷ್ಟಿಯಿಂದ ಕುಳಾಯಿಯಲ್ಲಿ ಪ್ರತ್ಯೇಕ ಸರ್ವ ಋತು ಮೀನುಗಾರಿಕೆ ಬಂದರು ನಿರ್ಮಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನವಮಂಗಳೂರು ಬಂದರು ಸುಮಾರು 70 ಕೋಟಿ ರೂ. ದೇಣಿಗೆ ನೀಡಿದೆ. ಮೀನುಗಾರರ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸಾಗರ ಮಾಲ ಯೋಜನೆಯಡಿ 70 ಕೋಟಿ ರೂ. ಹಾಗೂ ಕೃಷಿ ಸಚಿವರಾದ ರಾಧಾ ಮೋಹನ್ ಸಿಂಗ್ ಅವರನ್ನು ಭೇಟಿಯಾಗಿ 90 ಕೋಟಿ ರೂ. ಮಂಜೂರು ಮಾಡಿಸಿದೆ. ಮೀನುಗಾರರ ನಿಯೋಗ ಶೀಘ್ರದಲ್ಲೇ ದಿಲ್ಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿಲಾನ್ಯಾಸ ಮಾಡಲು ವಿನಂತಿಸಲಿದೆ ಎಂದು ಅವರು ನುಡಿದರು.
   
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಾಂಪ್ರದಾಯಿಕ ಮೀನುಗಾರ ಮಹಿಳೆಯರಿಗೆ ಶೇ.3 ಬಡ್ಡಿ ದರದಲ್ಲಿ 50 ಸಾವಿರ ರೂ. ಜಾಮೀನು ರಹಿತ ಸಾಲ ಯೋಜನೆ ಜಾರಿಗೊಳಿಸಿದ್ದರು. ಈ ಯೋಜನೆಯಡಿ ಮೊದಲ ವರ್ಷ ಶೇ.9 ಸಬ್ಸಿಡಿ ಹಣ ನೀಡಿದನ್ನು ಬಿಟ್ಟರೆ ಕಳೆದ ಎರಡು ವರ್ಷಗಳಿಂದ ಸಬ್ಸಿಡಿ ಜಮಾ ಮಾಡದೆ ಮೀನುಗಾರ ಮಹಿಳೆಯರನ್ನು ಸತಾಯಿಸಲಾಗುತ್ತಿದೆ. ಇದೀಗ ಜಿಲ್ಲಾಧಿಕಾರಿಯವರು ಸಬ್ಸಿಡಿ ಹಣವನ್ನು ತಕ್ಷಣ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ನಾಡದೋಣಿಗೆ ನೀಡುತ್ತಿದ್ದ ಸೀಮೆ ಎಣ್ಣೆಯನ್ನು 275 ಲೀಟರ್‌ಗೆ ಏರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಿಖಿತ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಹೇಳಿದ ಅವರು, ಬಂದರು ನಿರ್ಮಾಣದ ಕುರಿತು ವಿಶೇಷ ಮುತುವರ್ಜಿ ವಹಿಸಿದ ಬಂದರು ಅಧ್ಯಕ್ಷ ಪಿ.ಸಿ. ಫರೀದಾರರಿಗೆ ಅಭಿನಂದನೆ ಸಲ್ಲಿಸಿದರು.

2012ರಲ್ಲಿ ಎಂಎಸ್‌ಇಝಡ್ ಸಮುದ್ರದಲ್ಲಿ ತಾಜ್ಯ ವಿಲೇವಾರಿಗೆ ಬೃಹತ್ ಪೈಪ್‌ಲೈನ್ ಅಳವಡಿಸಿರುವುದರಿಂದ ಸಾಂಪ್ರದಾಯಿಕ ಮೀನುಗಾರರಿಗೆ ಆದ ತೊಂದರೆಗೆ 1 ಕೋಟಿ ರೂ. ಪರಿಹಾರ ನೀಡಿತ್ತು. ಆದರೆ ಮೂರು ವರ್ಷ ಕಳೆದರೂ ಪರಿಹಾರ ವಿತರಣೆಯಾಗಲಿಲ್ಲ. ಇದೀಗ ಜು.18ರಂದು ಪರಿಹಾರದ ವಿತರಣೆಯಾಗಿದೆ. ಮೂರು ವರ್ಷ ವಿಳಂಬವಾದ ಹಿನ್ನೆಲೆಯಲ್ಲಿ 14 ಲಕ್ಷ ರೂ. ಬಡ್ಡಿ ಸೇರಿಸಿ ಪರಿಹಾರ ದೊರೆತಿದೆ ಎಂದು 14 ಪಟ್ಣ ಮೊಗವೀರ ಸಭಾ ಅಧ್ಯಕ್ಷ ರಾಜೀವ್ ಕಾಂಚನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ 14 ಪಟ್ಣ ಮೊಗವೀರ ಸಭೆ ಅಧ್ಯಕ್ಷ ರಾಜೀವ್ ಕಾಂಚನ್, ವಾಮನ್ ಅಮೀನ್ ಬೈಕಂಪಾಡಿ ಹಾಗೂ ಧರ್ಮ ಕೋಟ್ಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X