Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನಹಾನಿ ಹಾಗೂ ರಾಜದ್ರೋಹ ಕಾಯ್ದೆ...

ಮಾನಹಾನಿ ಹಾಗೂ ರಾಜದ್ರೋಹ ಕಾಯ್ದೆ ತಿದ್ದುಪಡಿ ಅಗತ್ಯ: ಎಂ.ಎಸ್.ಮಣಿ

ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ -ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ19 July 2016 7:31 PM IST
share
ಮಾನಹಾನಿ ಹಾಗೂ ರಾಜದ್ರೋಹ ಕಾಯ್ದೆ ತಿದ್ದುಪಡಿ ಅಗತ್ಯ: ಎಂ.ಎಸ್.ಮಣಿ

ಸುಳ್ಯ, ಜು.19: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಣಿ ಕಾರ್ಯಕ್ರಮ ಉದ್ಘಾಟಿಸಿದರು.

ಮಾಧ್ಯಮಗಳು ವಿರೋಧ ಪಕ್ಷಗಳಂತೆ ಲೋಪಗಳನ್ನೇ ಹೆಚ್ಚು ವೈಭವೀಕರಿಸುತ್ತಿವೆ. ತುರ್ತು ಪರಿಸ್ಥಿತಿ, ಬೋಪೋರ್ಸ್ ಹಗರಣ ಸೇರಿದಂತೆ ಸರಕಾರಗಳ ಲೋಪದೋಷಗಳನ್ನು ಅನಾವರಣ ಮಾಡಿದ್ದರಿಂದ ಪ್ರಜಾಪ್ರಭುತ್ವದ ಉಳಿವಿಗೆ ಕಾರಣವಾಗಿವೆ. ಕಾನೂನು ನಿಯಂತ್ರಣ ಮಾಡುವವರ ವಿರುದ್ಧ ಸಾರ್ವತ್ರಿಕ ಅಭಿಪ್ರಾಯ ರೂಪಿಸುವುದು ಮತ್ತು ಅದನ್ನು ನಿಯಂತ್ರಿಸುವ ಮಾಧ್ಯಮಗಳ ಮೇಲೆ ಹಿಡಿತ ಸಾಧಿಸಲು ಆಡಳಿತರಲ್ಲಿರುವವರು ಮಾನಹಾನಿ ಕಾಯ್ದೆ ಹಾಗೂ ರಾಜದ್ರೋಹ ಕಾಯ್ದೆ ಬಳಕೆ ಮಾಡುತ್ತಿದ್ದಾರೆ. ಹಾಗಾಗಿ ಪತ್ರಕರ್ತರು ಐಪಿಸಿ 499 ಹಾಗೂ 500 ಮತ್ತು 124 ಹಾಗೂ 124ಎ ಕಾಯ್ದೆಯನ್ನು ತಿದ್ದುಪಡಿಗೆ ಒತ್ತಾಯ ಮಾಡಬೇಕಾಗಿದೆ ಎಂದರು. ಸಮಾಜದಲ್ಲಿ ಬಡತನದೊಂದಿಗೆ ಜಾತೀಯತೆಯೂ ಇಂದು ತೀವ್ರವಾಗಿದೆ. ವರದಿಗಳನ್ನು ಮಾಡುವಾಗ ಸೂಕ್ಷ್ಮವಾಗಿ ಗಮನಿಸಬೇಕು. ಎಷ್ಟು ಸಮಾಜಕ್ಕೆ ನೀಡಬೇಕು, ಯಾವುದಕ್ಕೆ ಕತ್ತರಿ ಹಾಕಬೇಕು ಎಂದು ಗಂಭೀರವಾಗಿ ಚಿಂತಿಸಬೇಕು ಎಂದವರು ಹೇಳಿದರು.

ಜನಪರವಾಗಿರುವ ಪತ್ರಿಕೆಗಳು ಮತ್ತು ಪತ್ರಕರ್ತರು ಮಾತ್ರ ಸಮಾಜ ಕಟ್ಟಲು ಸಾಧ್ಯ ಎಂದು ಉಪನ್ಯಾಸ ನೀಡಿದ ಪುತ್ತೂರಿನ ಪತ್ರಕರ್ತ ಮೇಘ ಪಾಲೆತ್ತಾಡಿ ಹೇಳಿದರು. ಮಾಧ್ಯಮಗಳು ಇಂದು ಉದ್ಯಮಗಳಾಗಿವೆ. ಪತ್ರಕರ್ತರನ್ನು ಸಮಾಜ ಕನ್ನಡಿಯಾಗಿರಬೇಕು ಹೊರತು ಒಡೆದ ಕನ್ನಡಿಯಾಗಬಾರದು. ಕೇವಲ ಪತ್ರಿಕೋದ್ಯಮ ಪದವಿ ಪಡೆದರೆ ಸಾಲದು ಸಂವೇದನಾಶಿಲತೆಯೂ ಪತ್ರಕರ್ತರಿಗೆ ಇರಬೇಕು ಎಂದವರು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಮಾತನಾಡಿ, ಪತ್ರಕರ್ತರಿಗೆ ಒತ್ತಡದಲ್ಲಿ ಕೆಲಸ ಮಾಡುವ ಅನಿವಾರ್ಯತೆ ಇದ್ದರೂ ಸತ್ಯಾಸತ್ಯತೆಯನ್ನು ಪರಿಶೀಲಿಸಿಯೇ ಕೆಲಸ ಮಾಡಬೇಕು ಎಂದರು.

ಹಿರಿಯ ಪತ್ರಿಕಾ ವಿತರಕ ಅರಂತೋಡಿನ ಎಂ.ಪಿ.ಸುಮಿತ್ರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಶಿವಪ್ರಸಾದ್ ಕೇರ್ಪಳ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ  ವರದಿಗಾರ ಮೇಘ ಪಾಲೆತ್ತಾಡಿ ವಿಶೇಷ ಉಪನ್ಯಾಸ ನೀಡಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಲಯನ್ಸ್ ಕ್ಲಬ್ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಅತಿಥಿಗಳಾಗಿದ್ದರು. ಸಂಘದ ಕಾರ್ಯದರ್ಶಿ ಲೋಕೇಶ್ ಗುಡ್ಡೆಮನೆ, ಗೌರವಾಧ್ಯಕ್ಷ ಗಿರೀಶ್ ಅಡ್ಪಂಗಾಯ ವೇದಿಕೆಯಲ್ಲಿದ್ದರು. ರಾಜ್ಯ ಸಂಘದ ಸದಸ್ಯ ಹರೀಶ್ ಬಂಟ್ವಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಪ್ರಕಾಶ್ ಕುಕ್ಕೇಟಿ ಸ್ವಾಗತಿಸಿ, ಗಣೇಶ್ ಕುಕ್ಕುತಡಿ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X