Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 476.30 ಲಕ್ಷ ರೂ. ವೆಚ್ಚದ ಕ್ರಿಯಾ...

476.30 ಲಕ್ಷ ರೂ. ವೆಚ್ಚದ ಕ್ರಿಯಾ ಯೋಜನೆಗೆ ಜಿಪಂ ಅಸ್ತು

ಜಿಪಂ ಕೃಷಿ-ಕೈಗಾರಿಕಾ ಸ್ಥಾಯಿ ಸಮಿತಿ ಸಭೆಯಲ್ಲಿ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ19 July 2016 11:08 PM IST
share
476.30 ಲಕ್ಷ ರೂ. ವೆಚ್ಚದ ಕ್ರಿಯಾ ಯೋಜನೆಗೆ ಜಿಪಂ ಅಸ್ತು

ಶಿವಮೊಗ್ಗ, ಜು. 19: ಜಿಲ್ಲಾ ಪಂಚಾಯತ್‌ನ ವೃತ್ತಿ ಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ವಿತರಿಸ ಲಾಗುತ್ತಿದ್ದ ಯೋಜನೆಯ ಭಾಗವಾಗಿ ಟೈಲರಿಂಗ್ ಮಿಷನ್ ವಿತರಿಸುತ್ತಿದ್ದ ಜಿಪಂ ಪ್ರಸ್ತುತ ವರ್ಷದಿಂದ ‘ಬಡಗಿ ಕಿಟ್’ ನೀಡುವ ಬಗ್ಗೆ ಮತ್ತು ವಿವಿಧ ಇಲಾಖೆಗಳ ಸುಮಾರು 476.30 ಲಕ್ಷ ರೂ. ಮೊತ್ತದ ಕ್ರಿಯಾ ಯೋಜನೆಗೆ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ.

ಮಂಗಳವಾರ ನಗರದ ಜಿಪಂ ಕಚೇರಿಯ ಕೊಡಚಾದ್ರಿ ಸಭಾಂಗಣದಲ್ಲಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕಲ್ಪನಾ ಪದ್ಮನಾಭ ಹಾರೋಗೊಳಿಗೆಯವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಖಾದಿ ಮತ್ತು ಗ್ರಾಮೀಣ ಕೈಗಾರಿಕಾ ಇಲಾಖೆಯ ಮೂಲಕ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ. ವೃತ್ತಿಪರ ಬಡಗಿ ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ‘ಬಡಗಿ ಕಿಟ್’ನೀಡುವ ನಿರ್ಧಾರ ಮಾಡಲಾಗಿದೆ. ಬಡಗಿ ವೃತ್ತಿಗೆ ಅಗತ್ಯ ಸಲಕರಣೆಗಳಾದ ವುಡನ್ ಕಟಿಂಗ್ ಮಿಷನ್ ಹಾಗೂ ಕ್ಲಾಂಪ್‌ಗಳು ಈ ಕಿಟ್‌ನಲ್ಲಿರುತ್ತವೆ. ಒಟ್ಟಾರೆ ಈ ಸಲಕರಣೆಗಳ ಮೊತ್ತ 5 ಸಾವಿರ ರೂ. ಆಗಿರುತ್ತದೆ. ಇದಕ್ಕಾಗಿ 9.50 ಲಕ್ಷ ರೂ. ಮೀಸಲಿರಿಸಲಾಗಿದೆ ಎಂದು ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದರು. ನೆಡುತೋಪು: ಸಾಮಾಜಿಕ ಅರಣ್ಯ 

ವಿಭಾಗದ ಚರ್ಚೆಯ ವೇಳೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 20 ಹಳೇಯ ನೆಡು ತೋಪು ಕಟಾವಿಗೆ ಅನುಮೋದನೆ ದೊರಕಿದೆ. 4 ನೆಡುತೋಪು ಕಟಾವಿಗೆ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸಮಿತಿಯ ಸದಸ್ಯ ತಮ್ಮಡಿ ಹಳ್ಳಿ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಅಕೇಶಿಯಾ ಹಾಗೂ ನೀಲಗಿರಿ ಮರಗಳ ಬೆಳವಣಿಗೆಗೆ ನಿರ್ಬಂಧ ಹೇರಲಾಗಿದೆ. ಆದಾಗ್ಯೂ ಅಕೇಶಿಯಾ ಹಾಗೂ ನೀಲಗಿರಿ ಮರಗಳನ್ನು ಬೆಳೆಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಇದಕ್ಕೆ ರವಿಕುಮಾರ್‌ರವರು ಪ್ರತಿಕ್ರಿಯೆ ನೀಡಿ, ಹೆಚ್ಚಿನ ಮಳೆ ಬೀಳುವ ಪ್ರದೇಶಗಳಲ್ಲಿ ನೀಲಗಿರಿ ಮರ ಬೆಳೆಸುವುದರ ಮೇಲೆ ನಿರ್ಬಂಧ ಹೇರಲಾಗಿದೆ. ಆದರೆ ಆಕೇಶಿಯಾಕ್ಕಿದ್ದ ನಿರ್ಬಂಧ ಸಡಿಲಿಸಲಾಗಿದೆ. ಅಕೇಶಿಯಾ ಮರಗಳನ್ನು ಪೀಠೋ ಪಕರಣ, ಟಿಂಬರಿಂಗ್‌ಗೆ ಬಳಕೆ ಮಾಡುವುದರಿಂದ ಹೆಚ್ಚು ಬೇಡಿಕೆಯಿದೆ ಎಂದು ಉತ್ತರಿಸಿದರು.

ತಮ್ಮಡಿಹಳ್ಳಿ ನಾಗರಾಜ್ ಮಾತನಾಡಿ, ಮೀನು ಸಾಕಣೆಗೆ ಕೆರೆ ಗುತ್ತಿಗೆ ಪಡೆಯುವವರು ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಉಪ ಗುತ್ತಿಗೆ ನೀಡುತ್ತಿದ್ದಾರೆ. ಮಧ್ಯವರ್ತಿಗಳ ಹಾವಳಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕೆರೆಗಳಿದ್ದ ಸ್ಥಳದಲ್ಲಿಯೇ ಹರಾಜು ಪ್ರಕ್ರಿಯೆ ನ ಡೆಸಿ. ಇದರಿಂದ ಪ್ರಾಮಾಣಿಕವಾಗಿ ಮೀನು ಹಿಡಿಯುವ ವೃತ್ತಿ ಮಾಡುವವರು ಕೆರೆ ಗುತ್ತಿಗೆ ಹಿಡಿಯಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು. ಎನ್‌ಆರ್‌ಇಜಿಯಡಿ ರೈತರಿಗೆ

 ಉಪಯುಕ್ತ ವಾದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಅಡಿಕೆ ತೋಟಗಳ ಅಭಿವೃದ್ಧಿಗೂ ಅವಕಾಶ ಕಲ್ಪಿಸಲಾಗುತ್ತಿದೆ. ಕಾಲಮಿತಿಯಲ್ಲಿ ಸೌಲಭ್ಯ ತಲುಪಿ ಸುವ ಕೆಲಸನಡೆಯಬೇಕಿದೆ ಎಂದು ಸದಸ್ಯ ಕಾಗೋಡು ಅಣ್ಣಪ್ಪಸಬೆಯನ್ನು ಆಗ್ರಹಿಸಿದರು. ಸಭೆಯಲ್ಲಿ ಕಾರ್ಯದರ್ಶಿ ಹಾಗೂ ಜಿಪಂ ಕಚೇರಿಯ ಯೋಜನಾ ನಿರ್ದೇಶಕ ಎಸ್.ಬಿ. ರವಿಕುಮಾ ರ್, ಸದಸ್ಯರಾದ ರಾಜೇಶ್ವರಿ ಗಣಪತಿ ಎಚ್., ನರಸಿಂಗನಾಯ್ಕಿ, ಎಸ್. ಅಕ್ಷತಾ, ಎಂ.ಇ. ರೇಣುಕಾ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

476.30 ಲಕ್ಷ ರೂ. ಮೊತ್ತದ ಕ್ರಿಯಾ ಯೋಜನೆ...

2016-17 ನೇ ಸಾಲಿನಲ್ಲಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯಡಿ ದೊರೆಯುವ 10 ಇಲಾಖೆಗಳ ಸುಮಾರು 476.30 ಲಕ್ಷ ರೂ. ಮೊತ್ತದ ಕ್ರಿಯಾ ಯೋಜನೆಗೆ ಸಭೆ ಅನುಮೋದನೆ ನೀಡಿತು. ಕೃಷಿ ಇಲಾಖೆಯ 75.95 ಲಕ್ಷ ರೂ., ತೋಟಗಾರಿಕೆ ಇಲಾಖೆಯ 109.41 ಲಕ್ಷ .ರೂ., ಸಹಕಾರಿ ಇಲಾಖೆಯ 11 ಲಕ್ಷ.ರೂ., ಪಶುಪಾಲನಾ ಇಲಾಖೆಯ 122.60 ಲಕ್ಷ.ರೂ., ಮೀನುಗಾರಿಕೆ ಇಲಾಖೆಯ 33 ಲಕ್ಷ.ರೂ., ಸಾಮಾಜಿಕ ಅರಣ್ಯ ವಿಭಾಗದ 63 ಲಕ್ಷ ರೂ., ಖಾದಿ - ಗ್ರಾಮೀಣ ಕೈಗಾರಿಕಾ ಇಲಾಖೆಯ 25 ಲಕ್ಷ.ರೂ., ರೇಷ್ಮೆ ಇಲಾಖೆಯ 15.30 ಲಕ್ಷ ರೂ., ಕೈಮಗ್ಗ ಇಲಾಖೆಯ 6 ಲಕ್ಷ.ರೂ., ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 15 ಲಕ್ಷ.ರೂ. ಮೊತ್ತದ ಕ್ರಿಯಾ ಯೋಜನೆಗೆ ಸಭೆಯಲ್ಲಿ ಅಂತಿಮ ಅನುಮೋದನೆ ದೊರಕಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X