Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಳು ಗಣಿಗಾರಿಕೆಗೆ ಏಕಗವಾವಾಕ್ಷಿ...

ಮರಳು ಗಣಿಗಾರಿಕೆಗೆ ಏಕಗವಾವಾಕ್ಷಿ ವ್ಯವಸ್ಥೆ ಜಾರಿಗೊಳಿಸಲು ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ19 July 2016 11:58 PM IST
share
ಮರಳು ಗಣಿಗಾರಿಕೆಗೆ ಏಕಗವಾವಾಕ್ಷಿ ವ್ಯವಸ್ಥೆ ಜಾರಿಗೊಳಿಸಲು ಶಿಫಾರಸು

ಬೆಂಗಳೂರು, ಜು.19: ಮರಳು ಗಣಿಗಾರಿಕೆಗೆ ವಿವಿಧ ಇಲಾಖೆ ಗಳಿಂದ ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅಕ್ರಮ ಮರಳು ಗಣಿಗಾರಿಕೆ ಸಂಬಂಧ ರಚಿಸಲಾಗಿದ್ದ ವಿಧಾನಸಭಾ ಸದಸ್ಯರ ಸದನ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ.
ಸಮಿತಿಯ ಅಧ್ಯಕ್ಷ ಶಾಸಕ ಡಾ.ರಫೀಕ್ ಅಹ್ಮದ್ ಸೋಮವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಧರಣಿ ನಡುವೆಯೇ 21 ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಮಂಡಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸುಪರ್ದಿಯಲ್ಲಿರುವ ಮರಳು ಬ್ಲಾಕ್‌ಗಳನ್ನು ಖಾಸಗಿಯವರಿಗೆ ಇ-ಟೆಂಡರ್ ಮೂಲಕ ಹರಾಜು ನಡೆಸಿ ಗುತ್ತಿಗೆ ನೀಡಬೇಕು. ಹಾಗೂ ನೈಸರ್ಗಿಕ ಮರಳು ನಿಕ್ಷೇಪದ ಬ್ಲಾಕ್‌ಗಳನ್ನು ಐದು ವರ್ಷಗಳ ಅವಧಿಗೆ ಗುತ್ತಿಗೆ ನೀಡಬೇಕು ಎಂದು ಶಿಫಾರಸಿನಲ್ಲಿ ತಿಳಿಸಲಾಗದೆ.
ಲೋಕೋಪಯೋಗಿ ಇಲಾಖೆಯಿಂದ ಸಮರ್ಪಕ ಮರಳು ಗಣಿಗಾರಿಕೆ, ಸಾಗಣೆ ಮತ್ತು ಪೂರೈಕೆ ಮಾಡಲು ಸಾಧ್ಯವಾಗದ ಕಾರಣ ಖಾಸಗಿಯವರಿಗೆ ಗುತ್ತಿಗೆ ನೀಡಲು ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಿ, ರಾಜ್ಯದಲ್ಲಿ ಮರಳು ಸಾಗಣೆಗೆ ಮುಕ್ತ ಅವಕಾಶ ಒದಗಿಸಬೇಕು. ಹಾಗೂ ಫಿಲ್ಟರ್ ಮರಳು ದಂಧೆಗೆ ಕಡಿವಾಣ ಹಾಕಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.
 ಪ್ರತಿ ಜಿಲ್ಲೆಯಲ್ಲೂ ಮರಳು ಬ್ಲಾಕ್‌ಗಳನ್ನು ಗುರುತಿಸಲು ಸಮೀಕ್ಷೆ ನಡೆಸಬೇಕು. ಜಿಲ್ಲಾ ಮರಳು ಸಮಿತಿಗೆ ದರ ನಿಗದಿಪ ಡಿಸಲು ಅಧಿಕಾರ ನೀಡುವ ಜತೆಗೆ ಮರಳು ಮಾರಾಟದ ದರ ನಿಯಂತ್ರಣಕ್ಕೆ ಟೆಂಡರ್ ಶರತ್ತು ವಿಧಿಸಬೇಕು. ನದಿ ದಂಡೆ ಯಿಂದ ತೆಗೆಯುವ ಮರಳನ್ನು ಮುಖ್ಯರಸ್ತೆಗೆ ಸಾಗಿಸಲು ಅವಶ್ಯವಿರುವ ರಸ್ತೆ ಸೌಕರ್ಯ ಒದಗಿಸಲು ರಾಜಸ್ವದಲ್ಲಿ ಶೇ.25ರಷ್ಟು ಮೊತ್ತವನ್ನು ಸ್ಥಳೀಯ ಪಂಚಾಯತ್‌ಗಳಿಗೆ ನೀಡಬೇಕು ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ.
ಸ್ಥಳೀಯ ಗಣಿಗಾರಿಕೆಯಿಂದ ಬಾಧಿತ ಗ್ರಾಮಗಳ ಅಭಿವೃದ್ಧಿ ಗಾಗಿ ರಾಜಧನದ ಮೇಲೆ ಹೆಚ್ಚುವರಿಯಾಗಿ ಜಿಲ್ಲಾ ಗಣಿ ನಿಧಿ ಸಂಗ್ರಹಿಸಬೇಕು. ಪ್ರತಿ ಬ್ಲಾಕ್‌ನಲ್ಲಿ ಸಿಗುವ ಮರಳಿನಲ್ಲಿ ಶೇ.25ರಷ್ಟು ಪ್ರಮಾಣವನ್ನು ಸರಕಾರಿ ಕಾಮಗಾರಿಗಳಿಗೆ ನಿಗದಿತ ದರದಲ್ಲಿ ಪೂರೈಸಬೇಕು. ಮರಳಿನ ನಿಕ್ಷೇಪ ಇಲ್ಲದ ಜಿಲ್ಲೆಗಳಿಗೆ ಮರಳು ಸಾಗಿಸಲು ಲಾರಿಗಳ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಶಿಫಾರಸಿನಲ್ಲಿ ಸ್ಪಷ್ಟ ಪಡಿಸಲಾಗಿದೆ.
ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾದವರಿಗೆ ಎರಡು ವರ್ಷ ಜೈಲು ಅಥವಾ ಒಂದು ಲಕ್ಷ ರೂ.ದಂಡ ವಿಧಿಸಲು ಹಾಗೂ ಸಾಗಣೆ ವಾಹನ ಮುಟ್ಟುಗೋಲು ಹಾಕಿಕೊಳ್ಳಲು ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಬೇಕು. ಎಂ.ಸ್ಯಾಂಡ್ ಬಳಕೆಗೆ ಉತ್ತೇಜನ ನೀಡಬೇಕು. ಎಂ.ಸ್ಯಾಂಡ್ ಉತ್ಪಾದನಾ ಘಟಕ ತೆರೆಯಲು ಮುಂದೆಬರುವ ಉದ್ಯಮಿಗಳಿಗೆ ಸಬ್ಸಿಡಿ ಹಾಗೂ ಇತರೆ ಸೌಕರ್ಯ ನೀಡಬೇಕು ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X