Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ: ಭೂಮಿ ಮಂಜೂರಿಗೆ ಆಗ್ರಹಿಸಿ...

ಕಾರವಾರ: ಭೂಮಿ ಮಂಜೂರಿಗೆ ಆಗ್ರಹಿಸಿ ಧರಣಿೆ

ವಾರ್ತಾಭಾರತಿವಾರ್ತಾಭಾರತಿ20 July 2016 9:37 PM IST
share
ಕಾರವಾರ: ಭೂಮಿ ಮಂಜೂರಿಗೆ ಆಗ್ರಹಿಸಿ ಧರಣಿೆ

ಕಾರವಾರ, ಜು.20: ವಿವಿಧ ಯೋಜನೆಗಳಿಂದ ನಿರಾಶ್ರಿತರಾದವರಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಭೂಮಿ ಮತ್ತು ಹಕ್ಕು ವಂಚಿತ ಹೋರಾಟ ಸಮಿತಿಯವರು ಬುಧವಾರ ಜಿಲ್ಲಾಡಳಿತದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಯಾದ ವಿವಿಧ ಯೋಜನೆಗಳಿಂದ ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದು, ಈ ಪೈಕಿ ಹಲವರಿಗೆ ಈವರೆಗೂ ಯಾವುದೇ ಪರಿಹಾರ ಬಂದಿಲ್ಲ. ನಿರಾಶ್ರಿತರಿಗೆ ಕೊಡಲ್ಪಡುವ ಭೂಮಿ, ಉದ್ಯೋಗ, ಸಾರಿಗೆ ಹಾಗೂ ಪುನರ್ವಸತಿಯನ್ನು ಕಲ್ಪಿಸಿಲ್ಲ ಎಂದು ಆರೋಪಿಸಿದರು. ಸೀಬರ್ಡ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳಿಗೆ ಇದುವರೆಗೂ ಸರಿಯಾಗಿ ಪುನರ್ವಸತಿಯಾಗಿಲ್ಲ. ಮೂಲ ಉದ್ಯೋಗಗಳಾದ ಕೃಷಿ, ಮೀನುಗಾರಿಕೆ ಮೊದಲಾದವುಗಳನ್ನು ಕಳೆದುಕೊಂಡಿದ್ದು, ಉದ್ಯೋಗದ ಭದ್ರತೆ ನೀಡಬೇಕು. ನೌಕಾನೆಲೆಗಾಗಿ ಭೂಮಿ ಕಳೆದುಕೊಂಡ ಎಲ್ಲರಿಗೂ ಕನಿಷ್ಠ 5ಎಕರೆ ಹಾಗೂ ಕಳೆದುಕೊಂಡ ಭೂಮಿಗೆ ಸೂಕ್ತ ಪರಿಹಾರ ನೀಡಬೇಕು. ಮೀನುಗಾರಿಕೆಗೆ ಸಂಬಂಧಿಸಿ ಮೀನುಗಾರಿಕಾ ನೀತಿ ರೂಪಿಸಬೇಕು ಎಂದು ಆಗ್ರಹಿಸಿದರು. ಇದಲ್ಲದೇ ನಿರಾಶ್ರಿತರಾಗಿರುವ ಶೇ.95ರಷ್ಟು ಮೀನುಗಾರರಿಗೆ ಮನೆ ನಿರ್ಮಿಸಿಕೊಳ್ಳಲು ಜಾಗವಿಲ್ಲ. ಹೀಗಾಗಿ ಇವರಿಗೆ ಮನೆ ನಿರ್ಮಿಸಿಕೊಳ್ಳಲು ಸಿಆರ್‌ಝಡ್ ಕಾಯ್ದೆ ಅನ್ವಯವಾಗದಂತೆ ವಿನಾಯಿತಿ ನೀಡಬೇಕು. ಅರಣ್ಯವಾಸಿ ಬಡ ಜನರಿಗೆ ವಿವಿಧ ಯೋಜನೆಯಡಿ ಪುನರ್ವಸತಿ ಒದಗಿಸಿದಂತೆ ಮೀನುಗಾರರಿಗೂ ಸಮುದ್ರದ ದಡದಲ್ಲೇ ವಸತಿಗೆ ಅವಕಾಶ ಕಲ್ಪಿಸಬೇಕು. ಬುಡಕಟ್ಟು ಜನಾಂಗವೆಂದೇ ದಾಖಲಿಸಲ್ಪಟ್ಟಿರುವ ಹಾಲಕ್ಕಿ ಒಕ್ಕಲಿಗ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಉತ್ತರ ಕನ್ನಡ ಜಿಲ್ಲೆಯನ್ನು ನಿರಾಶ್ರಿತ ಜಿಲ್ಲೆ ಎಂದು ಘೋಷಿಸಿ ಇಲ್ಲಿಯ ಯುವಜನರಿಗೆ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗವನ್ನು ನೀಡಬೇಕು. 1960ಕ್ಕೂ ಪೂರ್ವದಲ್ಲಿ ನೆರೆ ಸಂತ್ರಸ್ತರಿಗೆ ನೀಡಿದ ಜನತಾ ಫ್ಲಾಟ್‌ಗಳನ್ನು ಫಲಾನುಭವಿಗಳ ಹೆಸರಿಗೆ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಕೆ. ರಮೇಶ್, ಮೀನುಗಾರ ಮುಖಂಡ ಗುರುದಾಸ ಬಾನಾವಳಿಕರ, ಸುಧಾಕರ ಜಾಬಾವಳಿಕರ, ಹಾಲಕ್ಕಿ ಒಕ್ಕಲಿಗ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಗೌಡ, ಕೋಶಾಧ್ಯಕ್ಷ ರಮೇಶ್ ಗೌಡ, ಯುವ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಪುರುಷೋತ್ತಮ ಗೌಡ, ಮಂಜುನಾಥ ಮದ್ಗೇಕರ, ರಾಜನ್ ಎಂ.ಬಿ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X