Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತದಾನದ ದುರುಪಯೋಗದಿಂದ ಪ್ರಜಾಪ್ರಭುತ್ವ...

ಮತದಾನದ ದುರುಪಯೋಗದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲ : ಎನ್.ಗೋಪಾಲಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 July 2016 9:55 PM IST
share
ಮತದಾನದ ದುರುಪಯೋಗದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲ : ಎನ್.ಗೋಪಾಲಸ್ವಾಮಿ

 ಮಂಗಳೂರು, ಜು.20: ಸ್ವಾತಂತ್ರಾನಂತರ ಭಾರತದಲ್ಲಿ ಪ್ರಜೆಗಳಿಗೆ ನೀಡಲಾಗಿರುವ ಸಾರ್ವತ್ರಿಕ ಮತದಾನದ ಹಕ್ಕು ಹಣಬಲದಿಂದ, ಉಚಿತ ಕೊಡುಗೆಗಳ ಆಮಿಷಗಳಿಂದ ದುರುಪಯೋಗಗೊಳ್ಳುತ್ತಿದೆ. ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲಗೊಳ್ಳುತ್ತಿದೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎನ್.ಗೋಪಾಲ ಸ್ವಾಮಿ ತಿಳಿಸಿದರು.

ಕಾರ್ಪೊರೇಶನ್ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಬಾಲಸುಬ್ರಹ್ಮಣ್ಯ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ 51ನೆ ಉಪನ್ಯಾಸ ಸರಣಿಯ ಅಂಗವಾಗಿ ‘ಸಬ್ಸಿಡಿ, ಉಚಿತ ಕೊಡುಗೆ, ಓಟಿಗಾಗಿ ಕಾಸು ವ್ಯವಸ್ಥೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ?’ ಎಂಬ ವಿಷಯದ ಬಗ್ಗೆ ಅವರು ಮಾತನಾಡಿದರು. 1950ರಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾದ ಬಳಿಕ ದೇಶದ ಸಾಕ್ಷರತಾ ಪ್ರಮಾಣದಲ್ಲಿ ಶೇ.15ರಷ್ಟು ಪುರುಷರು, ಶೇ.7ರಷ್ಟು ಮಹಿಳೆಯರು ಅಕ್ಷರಸ್ಥರಾಗಿದ್ದರೂ ಎಲ್ಲರಿಗೂ ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಸಾರ್ವತ್ರಿಕ ಮತದಾನದ ಹಕ್ಕನ್ನು ನೀಡಲಾಯಿತು. ಆದರೆ 65 ವರ್ಷಗಳ ಬಳಿಕ ಪರಿಸ್ಥಿತಿ ಬದಲಾಗಿದೆ. ಕ್ರಿಮಿನಲ್ ಆರೋಪ ಹೊಂದಿರುವವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗುತ್ತಿದ್ದಾರೆ. ಓಟಿಗಾಗಿ ವಿವಿಧ ರೀತಿಯ ತಂತ್ರಗಾರಿಕೆಯನ್ನು ನಡೆಸಲಾಗುತ್ತಿದೆ. ಈ ಪೈಕಿ ಚುನಾವಣೆಯ ಸಂದರ್ಭ ನೀಡಲಾಗುತ್ತಿರುವ ಉಚಿತ ಉಡುಗೊರೆಗಳು, ಸರಕಾರದ ಮೂಲಕ ನೀಡಲಾಗುವ ಸಬ್ಸಿಡಿ ಕೊಡುಗೆಗಳು ಚುನಾವಣಾ ಆಯ್ಕೆ ಪ್ರಕ್ರಿಯೆಯನ್ನು ಹಣ, ಕೊಡುಗೆಗಳ ಆಧಾರದಲ್ಲಿ ನಿರ್ಣಯಿಸುವಂತೆ ಮಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಗೋಪಾಲಸ್ವಾಮಿ ತಿಳಿಸಿದರು.

  ಕೆಲವು ವರ್ಷಗಳ ಹಿಂದೆ ಸೀರೆ, ಸಣ್ಣಪುಟ್ಟ ಉಡುಗೊರೆಗಳ ಮೂಲಕ ಆರಂಭಗೊಂಡ ಆಮಿಷಗಳು ಇದೀಗ ಟಿ.ವಿ., ಫ್ಯಾನ್, ಮಿಕ್ಸರ್ ಗ್ರೈಂಡರ್, ಮಂಗಳ ಸೂತ್ರದವರೆಗೂ ತಲುಪಿದೆ. ದೇವರ ಹೆಸರಿನಲ್ಲಿ ಆಣೆ ಪ್ರಮಾಣ ಮಾಡಿಸಿ ಓಟು ಹಾಕಿಸಿಕೊಳ್ಳುವುದು, ಮಾಧ್ಯಮಗಳಲ್ಲೂ ಕಾಸಿಗಾಗಿ ಸುದ್ದಿ ಪ್ರಕಟಿಸುವ ವಿಚಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲೂ ದೂರು ನೀಡುವವರೆಗೂ ಮುಂದುವರಿಯಿತು. ಇತ್ತೀಚಿನ ದಿನಗಳಲ್ಲಿ ಕೆಲವು ಮತದಾರರೂ ಈ ರೀತಿಯ ಪಿಡುಗಿನ ಜೊತೆ ಕೈ ಜೋಡಿಸಿರುವುದನ್ನು ತಮಿಳುನಾಡು ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ನಡೆದ ಚುನಾವಣೆಗಳಲ್ಲಿ ಗಮನಿಸಬಹುದು. ಯಾವ ಪಕ್ಷದವನಾದರೂ ಹಣ ನೀಡಬೇಕು ಎನ್ನುವ ಬೇಡಿಕೆ ಒಡ್ಡುತ್ತಿರುವುದು ಬದಲಾಗುತ್ತಿರುವ ಜನರ ಮನೋಭಾವವನ್ನು ತೋರಿಸುತ್ತಿದೆ. ಈ ರೀತಿಯ ಮನೋಭಾವದಿಂದ ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ ರೂಪುಗೊಳ್ಳಲು ಸಾಧ್ಯವಿಲ್ಲ.ಅಭಿವೃದ್ಧಿಯ ದೃಷ್ಟಿಯನ್ನು ಮರೆತು ಓಟಿಗಾಗಿ ಸರಕಾರದ ಯೋಜನೆಗಳನ್ನು ಉಚಿತ ಉಡುಗೊರೆ ರೂಪದಲ್ಲಿ ನೀಡತೊಡಗಿದರೆ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿದಂತಾಗುತ್ತದೆ ಎಂದು ಗೋಪಾಲಸ್ವಾಮಿ ತಿಳಿಸಿದರು.
ಭಾರತದ ಚುನಾವಣಾ ಆಯೋಗ ಆರು ದಶಗಳಿಂದ ತನ್ನ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಮತಗಟ್ಟೆಗಳ ಅಕ್ರಮಗಳನ್ನು ತಡೆದು ನಿರ್ಭೀತ ಮತಚಲಾವಣೆಗೆ ಅವಕಾಶ ಮಾಡಿಕೊಡುತ್ತಿದೆ. 2014ರಲ್ಲಿ 8 ಲಕ್ಷ ಮತಗಟ್ಟೆಗಳಲ್ಲಿ 14 ಲಕ್ಷ ಇಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಿಕೊಳ್ಳಲಾಗಿದೆ. ಅರುಣಾಚಲ ಪ್ರದೇಶದಲ್ಲಿ ಮೂರು ಜನರಿಗೆ, ಗುಜರಾತಿನ ಗೀರ್ ಅರಣ್ಯ ಪ್ರದೇಶದಲ್ಲಿ ಒಬ್ಬ ಮತದಾರನಿಗಾಗಿ ಒಂದು ಮತಗಟ್ಟೆಯನ್ನು ಸ್ಥಾಪಿಸಿದೆ. ಇತ್ತೀಚಿನ ಚುನಾವಣೆಗಳನ್ನು ಗಮನಿಸಿದಾಗ ನಗರ ಪ್ರದೇಶದವರಿಗಿಂತ ಗ್ರಾಮೀಣ ಜನರು ಮತದಾನದಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಿರುವುದು ಕಂಡು ಬರುತ್ತಿದೆ ಎಂದು ಗೋಪಾಲ ಸ್ವಾಮಿ ತಿಳಿಸಿದರು.
 ವೇದಿಕೆಯಲ್ಲಿ ಕಾರ್ಪೊರೇಶನ್ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಏಕನಾಥ ಬಾಳಿಗಾ, ಕಾರ್ಯದರ್ಶಿ ಸತೀಶ್ ಶೆಟ್ಟಿ, ಬಾಲಸುಬ್ರಹ್ಮಣ್ಯ ಫೌಂಡೇಶನ್ ಕಾರ್ಯದರ್ಶಿ ರಮಣ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X