Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ: ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು...

ವಿಟ್ಲ: ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಜಿಲ್ಲಾ ಎಸ್ಪಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 July 2016 10:47 PM IST
share
ವಿಟ್ಲ: ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಜಿಲ್ಲಾ ಎಸ್ಪಿ ಸೂಚನೆ

ವಿಟ್ಲ,ಜು.20 : ಬಂಟ್ವಾಳ ತಾಲೂಕಿನ ಬಿ ಸಿ ರೋಡು ಸರ್ವಿಸ್ ರಸ್ತೆಯ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಜಿಲ್ಲಾ ಎಸ್ಪಿ ಅವರ ಸೂಚನೆಯಂತೆ ಮತ್ತೆ ಬಂಟ್ವಾಳ ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ರಂಗಕ್ಕಿಳಿದಿದ್ದಾರೆ. ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರ ನಿಬಿಡತೆಯ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಇತ್ತೀಚೆಗೆ ಜಿಲ್ಲಾ ಎಸ್ಪಿ ಭೂಷಣ್ ಜಿ ಬೊರಸೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ ತಕ್ಷಣ ಪರಿಹಾರ ಕ್ರಮಕ್ಕಾಗಿ ಹೆದ್ದಾರಿ ಪ್ರಾಧಿಕಾರ ಹಾಗೂ ಪುರಸಭೆಗೆ ಸೂಚಿಸಿದ್ದರು.

        ಈ ಹಿನ್ನಲೆಯಲ್ಲಿ ಸೋಮವಾರ ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ಬಸ್ ಬೇ ನಿರ್ಮಿಸಲು ಕಾಮಗಾರಿ ಪ್ರಾರಂಭಗೊಂಡಿತ್ತು. ಈ ಕಾಮಗಾರಿಯ ಮೇಲುಸ್ತುವಾರಿಯನ್ನು ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ಅವರೇ ನಿರ್ವಹಿಸುತ್ತಿದ್ದು, ಬುಧವಾರ ಸಂಜೆ ಮೆಸ್ಕಾಂ ಜೆಇ ಸುಬ್ರಹ್ಮಣ್ಯ ಭಟ್ ಅವರನ್ನು ಸ್ಥಳಕ್ಕೆ ಕರೆಸಿ ಇಲ್ಲಿರುವ ವಿದ್ಯುತ್ ಪರಿವರ್ತಕ ಹಾಗೂ ಕಂಬಗಳನ್ನು ತಕ್ಷಣ ತೆರವುಗೊಳಿಸಿ ಸಹಕರಿಸುವಂತೆ ಕೋರಿಕೊಂಡರು. ಅಲ್ಲದೆ ತಾಲೂಕಿನ ವಿವಿಧೆಡೆ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿರುವ ರಸ್ತೆ ಬದಿಯಲ್ಲಿನ ಎಲ್ಲಾ ವಿದ್ಯುತ್ ಕಂಬ ಹಾಗೂ ಪರಿವರ್ತಕಗಳನ್ನು ತೆರವುಗೊಳಿಸುವಂತೆ ಲಿಖಿತವಾಗಿ ಕೋರಿಕೆ ಪತ್ರ ನೀಡಿದರು.

ಸ್ಥಳೀಯರ ವಾದ

 ಬಸ್‌ಬೇ ನಿರ್ಮಾಣಕ್ಕಾಗಿ ಇಲ್ಲಿನ ರಸ್ತೆಯಲ್ಲಿ ಮಳೆಗಾಲದಲ್ಲಿ ಅಗೆತ ಕಾಮಗಾರಿ ನಡೆಸಿರುವುದರಿಂದ ಕೆಸರಿನ ಸಮಸ್ಯೆ ಉಂಟಾಗಿದ್ದು, ತಕ್ಷಣ ಈ ಕಾಮಗಾರಿಯನ್ನು ಪೂರ್ತಿಗೊಳಿಸಿ ಕೆಸರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಸ್ಥಳೀಯ ಸಾರ್ವಜನಿಕರು ಎಸ್ಸೈ ಅವರೊಂದಿಗೆ ಈ ಸಂದರ್ಭ ವಾದ ನಡೆಸಿದರು. ಈ ವೇಳೆ ಪ್ರತಿಕ್ರಯಿಸಿದ ಎಸ್ಸೈ ಅಭಿವೃದ್ದಿ ಕಾಮಗಾರಿ ನಡೆಯುವಾಗ ಸಣ್ಣಪುಟ್ಟ ಸಮಸ್ಯೆಗಳು ಸಹಜವಾಗಿದ್ದು, ಮೆಸ್ಕಾಂ ಇಲಾಖೆ ತಕ್ಷಣ ಸ್ಪಂದಿಸಿದರೆ ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X