Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್‌ನಿಂದ ರಶ್ಯ ನಿಷೇಧ ವಿಚಾರ :...

ಒಲಿಂಪಿಕ್ಸ್‌ನಿಂದ ರಶ್ಯ ನಿಷೇಧ ವಿಚಾರ : ವಾರದಲ್ಲಿ ಐಒಸಿ ಅಂತಿಮ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ20 July 2016 11:54 PM IST
share
ಒಲಿಂಪಿಕ್ಸ್‌ನಿಂದ ರಶ್ಯ ನಿಷೇಧ ವಿಚಾರ : ವಾರದಲ್ಲಿ ಐಒಸಿ ಅಂತಿಮ ನಿರ್ಧಾರ

ಪ್ಯಾರಿಸ್, ಜು.20: ರಶ್ಯ ಸರಕಾರವೇ ಉದ್ದೀಪನಾ ಮದ್ದು ಸೇವನೆಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಶ್ಯ ಅಥ್ಲೀಟ್‌ಗಳನ್ನು ರಿಯೋ ಒಲಿಂಪಿಕ್ಸ್‌ನಿಂದ ನಿಷೇಧ ಹೇರುವ ಕುರಿತು ಇನ್ನು ಒಂದು ವಾರದೊಳಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(ಐಒಸಿ) ಬುಧವಾರ ಸ್ಪಷ್ಟಪಡಿಸಿದೆ.

ಅತ್ಯಂತ ದೊಡ್ಡ ಡೋಪಿಂಗ್ ಹಗರಣವನ್ನು ನಿಭಾಯಿಸಬೇಕಾದ ಸವಾಲು ಹೊಂದಿರುವ ಐಒಸಿ ರಶ್ಯದ ಅಥ್ಲೀಟ್‌ಗಳಿಗೆ ಆ.5 ರಿಂದ ಆರಂಭವಾಗಲಿರುವ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೇ, ಬೇಡವೇ ಎಂಬ ಬಗ್ಗೆ ಕ್ರೀಡಾ ಪಂಚಾಯಿತಿ ನ್ಯಾಯಾಲಯದ(ಸಿಎಎಸ್) ತೀರ್ಪು ಹೊರ ಬಂದ ಬಳಿಕ ಪ್ರಕಟಿಸುವ ಸಾಧ್ಯತೆಯಿದೆ.

‘‘ನಾವು ಎಲ್ಲ ಕಾನೂನು ಆಯ್ಕೆಯನ್ನು ಅಧ್ಯಯನ ನಡೆಸುವ ಅವಶ್ಯವಿದೆ. ಒಲಿಂಪಿಕ್ ಇತಿಹಾಸದಲ್ಲಿ ಅತ್ಯಂತ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲ ಸಾಧ್ಯತೆಯನ್ನು ಪರಿಶೀಲಿಸಲಿದ್ದೇವೆ’’ ಎಂದು ಐಒಸಿ ಹೇಳಿದೆ.

 ರಶ್ಯದಲ್ಲಿ ಅಥ್ಲೀಟ್‌ಗಳು ಡೋಪಿಂಗ್ ಪ್ರಕರಣದಲ್ಲಿ ಸಿಲುಕದಂತೆ ವ್ಯವಸ್ಥೆ ಮಾಡಲಾಗಿದೆ. ಇದು ಕ್ರೀಡೆ ಹಾಗೂ ಒಲಿಂಪಿಕ್ಸ್ ಗೇಮ್ಸ್‌ನ ಪ್ರಾಮಾಣಿಕತೆಯ ಮೇಲೆ ಹಿಂದೆಂದೂ ಆಗದ ದಾಳಿಯಾಗಿದೆ ಎಂದು ವಿಶ್ವ ಉದ್ದೀಪನಾ ತಡೆ ಘಟಕಕ್ಕೆ ವರದಿ ಸಲ್ಲಿಸಿರುವ ಕೆನಡಾದ ವಕೀಲ ರಿಚರ್ಡ್ ಮೆಕ್ಲಾರೆನ್ ಹೇಳಿದ್ದಾರೆ. ವಾಡಾ ರಶ್ಯವನ್ನು ಒಲಿಂಪಿಕ್ಸ್‌ನಿಂದ ನಿಷೇಧ ಹೇರಬೇಕೆಂದು ಕರೆ ನೀಡಿದೆ. ಅಮೆರಿಕ, ಕೆನಡಾ, ಜರ್ಮನಿ, ಜಪಾನ್ ಹಾಗೂ ಇತರ ದೇಶಗಳು ರಶ್ಯವನ್ನು ನಿಷೇಧಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿವೆ.

 ರಶ್ಯದ ವಿರುದ್ಧ ಡೋಪಿಂಗ್ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಅಸೋಸಿಯೇಶನ್ ಆಫ್ ಅಥ್ಲೆಟಿಕ್ಸ್ ಅಸೋಸಿಯೇಶನ್(ಐಎಎಎಫ್) ರಶ್ಯದ ಟ್ರಾಕ್ ಆ್ಯಂಡ್ ಫೀಲ್ಡ್ ಅಥ್ಲೀಟ್‌ಗಳನ್ನು ನಿಷೇಧಿಸಿತ್ತು. ರಶ್ಯದ ಅಥ್ಲೀಟ್‌ಗಳು ಐಎಎಎಫ್‌ನ ನಿಷೇಧದ ವಿರುದ್ಧ ಕ್ರೀಡಾ ಪಂಚಾಯಿತಿ ನ್ಯಾಯಾಲಯ(ಸಿಎಎಸ್) ಮೆಟ್ಟಿಲೇರಿದೆ. ಸಿಎಎಸ್ ಗುರುವಾರ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ.

ರಶ್ಯದ ಅಥ್ಲೀಟ್‌ಗಳು ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬೀಳದ ಕಾರಣ ಅವರನ್ನು ಒಲಿಂಪಿಕ್ಸ್‌ನಿಂದ ನಿಷೇಧ ಹೇರುವುದು ತಪ್ಪು ಎಂದು ಹಲವಾರು ನ್ಯಾಶನಲ್ ಒಲಿಂಪಿಕ್ಸ್ ಸಮಿತಿಗಳು ಒತ್ತಾಯಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X