Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಹೆಚ್ಚುವರಿ ಶಿಕ್ಷಕರ...

ಉಪ್ಪಿನಂಗಡಿ: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲೆ ಬಂದ್ ಮಾಡಿದ ಪೋಷಕರು

ವಾರ್ತಾಭಾರತಿವಾರ್ತಾಭಾರತಿ21 July 2016 6:37 PM IST
share
ಉಪ್ಪಿನಂಗಡಿ: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲೆ ಬಂದ್ ಮಾಡಿದ ಪೋಷಕರು

ಉಪ್ಪಿನಂಗಡಿ, ಜು.21: ಹಿರೇಬಂಡಾಡಿಯ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಶಿಕ್ಷಣ ಇಲಾಖೆ ವರ್ಗಾವಣೆಗೊಳಿಸಿರುವುದರ ವಿರುದ್ಧ ಗುರುವಾರ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೇ ತಮ್ಮ ಆಕ್ರೋಶ ಹೊರಗೆಡವಿದ್ದಾರೆ.

ಇಂದು ಶಾಲೆಗೆ ಏಳನೆ ತರಗತಿಯ ಓರ್ವ ವಿದ್ಯಾರ್ಥಿ ಹಾಜರಾಗಿದ್ದ. ಮಧ್ಯಾಹ್ನದವರೆಗೆ ಶಾಲೆಯಲ್ಲಿದ್ದ ಈತ ಬಳಿಕ ಮನೆಗೆ ತೆರಳಿದ್ದಾನೆ. ಇಲ್ಲಿನ ಅಡ್ಯಾಳ ಎಂಬಲ್ಲಿ 1902ರಲ್ಲಿ ಈ ಸರಕಾರಿ ಶಾಲೆ ಸ್ಥಾಪನೆಯಾಗಿದ್ದು, 1935ರಲ್ಲಿ ಈ ಶಾಲೆಯನ್ನು ಈಗ ಇರುವ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇಲ್ಲಿದ್ದ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರೆಂದು ಪರಿಗಣಿಸಿ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬೇರೆ ಕಡೆ ವರ್ಗಾಯಿಸಿತ್ತು. ಇದನ್ನು ವಿರೋಧಿಸಿ ಬುಧವಾರ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದರು.

ಬಳಿಕ ನಡೆದ ಬೆಳವಣಿಗೆಯಲ್ಲಿ ಸ್ಥಳಕ್ಕಾಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್ ಅವರಿಂದ ಸೂಕ್ತ ಸ್ಪಂದನೆ ವ್ಯಕ್ತವಾಗಿಲ್ಲ ಎಂದು ಆರೋಪಿಸಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ- ಉಪಾಧ್ಯಕ್ಷರಾದಿಯಾಗಿ ಸದಸ್ಯರೆಲ್ಲಾ ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದರು ಹಾಗೂ ಮೂರು ದಿನಗಳ ಕಾಲ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೆ ಶಿಕ್ಷಣ ಇಲಾಖೆಯಿಂದ ಯಾವ ಸ್ಪಂದನೆ ವ್ಯಕ್ತವಾಗುತ್ತದೆ ಎಂದು ಕಾದು ನೋಡುತ್ತೇವೆ. ಬಳಿಕವೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೈಬಿಡದಿದ್ದಲ್ಲಿ ಅಥವಾ ಇಲ್ಲಿ ಖಾಲಿಯಾಗಿರುವ ವಿಜ್ಞಾನ ಹಾಗೂ ಕನ್ನಡ ಶಿಕ್ಷಕರನ್ನು ಭರ್ತಿಗೊಳಿಸದಿದ್ದಲ್ಲಿ ನಮ್ಮ ಮಕ್ಕಳ ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸುತ್ತೇವೆ ಎಂದು ಪೋಷಕರೆಲ್ಲಾ ಒಮ್ಮತದ ನಿರ್ಧಾರ ತೆಗೆದುಕೊಂಡು ಮನೆಗೆ ತೆರಳಿದ್ದರು.

ಅದರಂತೆ 1ರಿಂದ ಏಳನೆ ತರಗತಿಯಲ್ಲಿರುವ 249 ವಿದ್ಯಾರ್ಥಿಗಳಲ್ಲಿ ಗುರುವಾರ ಓರ್ವ ವಿದ್ಯಾರ್ಥಿಯನ್ನು ಬಿಟ್ಟರೆ ಉಳಿದೆಲ್ಲಾ ಮಕ್ಕಳು ಗೈರು ಹಾಜರಾಗಿದ್ದಾರೆ. ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು ಮಾತ್ರ ಸಂಜೆಯವರೆಗೆ ಶಾಲೆಯಲ್ಲಿದ್ದು, ಸಂಜೆ ಶಾಲಾ ಕರ್ತವ್ಯದ ಅವಧಿ ಮುಗಿದ ಬಳಿಕ ಮನೆಗೆ ತೆರಳಿದ್ದಾರೆ.

ಹಿರೇಬಂಡಾಡಿಯ ಸರಕಾರಿ ಶಾಲೆಯ ದಾಖಲಾತಿ ಹೀಗಿದೆ

ಇಲ್ಲಿ 2012-13ನೆ ಶೈಕ್ಷಣಿಕ ಸಾಲಿನಲ್ಲಿ 1ರಿಂದ ಏಳನೆ ತರಗತಿಯವರೆಗೆ ಈ ಶಾಲೆಗೆ 47 ವಿದ್ಯಾರ್ಥಿಗಳು ದಾಖಲಾಗಿದ್ದರೆ, 2013-14ನೆ ಸಾಲಿನಲ್ಲಿ 33, 2014-15ನೇ ಸಾಲಿನಲ್ಲಿ 42, 2015-16ನೇ ಸಾಲಿನಲ್ಲಿ 40 ವಿದ್ಯಾರ್ಥಿಗಳು ಹಾಗೂ 2016-17ನೆ ಶೈಕ್ಷಣಿಕ ಸಾಲಿನಲ್ಲಿ 46 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. ಶೈಕ್ಷಣಿಕವಾಗಿಯೂ ಈ ಶಾಲೆಗೆ ಉತ್ತಮ ಹೆಸರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X