Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಬೆಲೆ ಏರಿಕೆ ವಿರುದ್ಧ...

ಬೆಳ್ತಂಗಡಿ: ಬೆಲೆ ಏರಿಕೆ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 July 2016 6:45 PM IST
share
ಬೆಳ್ತಂಗಡಿ: ಬೆಲೆ ಏರಿಕೆ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

ಬೆಳ್ತಂಗಡಿ, ಜು.21: ಬೆಲೆ ಏರಿಕೆಯನ್ನು ಇಳಿಸುತ್ತೇವೆ, ಜನರಿಗೆ ಒಳ್ಳೆಯ ದಿನಗಳನ್ನು ತರುತ್ತೇವೆ ಎಂದು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಇಂದು ಮಾಡುವ ಎಲ್ಲಾ ಕೆಲಸಗಳು ಜನವಿರೋಧಿಯಾಗಿದ್ದು ನಿರಂತರ ಬೆಲೆ ಏರಿಕೆ, ಕಾರ್ಮಿಕರಿಗೆ, ರೈತರಿಗೆ ಅಭದ್ರತೆ, ನಿರುದ್ಯೋಗ, ದಲಿತ ದೌರ್ಜನ್ಯಗಳೇ ಅಲ್ಲದೆ ಕೋಮುವಾದಿಗಳ ಅಟ್ಟಹಾಸಕ್ಕೆ ಆಸ್ಪದ ನೀಡುತ್ತಾ ಸರ್ವಾಧಿಕಾರಿ ಆಡಳಿತ ನಡೆಸುತ್ತಾ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.

ಸಿಪಿಐ(ಎಂ) ಪಕ್ಷದ ವತಿಯಿಂದ ದೇಶದಾದ್ಯಂತ ಜುಲೈ 11 ರಿಂದ 25ರ ವರೆಗೆ ಕೇಂದ್ರ ಸರಕಾರದ ಜನವಿರೋಧಿ ನೀತಿಯ ವಿರುದ್ಧ ನಡೆಯುತ್ತಿರುವ ಹೋರಾಟದ ಅಂಗವಾಗಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತಾಡುತ್ತಿದ್ದರು.

ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಆದೇಶವಾಗಿದ್ದರೂ ಇನ್ನೂ ನ್ಯಾಯ ಸಿಗಲಿಲ್ಲ ಎಂಬ ಸತ್ಯ ಗೊತ್ತಿರುವ ಬಿಜೆಪಿ ಡಿವೈಎಸ್ಪಿ ಗಣಪತಿ ಅವರಿಗೂ ಮೋಸ ಮಾಡುವ ಇರಾದೆಯಿಂದ ಸಿಬಿಐ ತನಿಖೆಗೆ ಒತ್ತಾಯಿಸುತ್ತಿದೆ ಎಂದ ಅವರು ಮೊದಲು ಸಿಬಿಐ ಸೌಜನ್ಯಳಿಗೆ ನ್ಯಾಯ ಒದಗಿಸಿ ತಾನು ಸಾಚಾ ಎಂದು ಸಾಬೀತುಗೊಳಿಸಲಿ ಎಂದರು.

ನಂತರ ಮಾತಾಡಿದ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ನ್ಯಾಯವಾದಿ ಶಿವಕುಮಾರ್, ಇಂದು ರೈತರಿಗೆ ನಕಲಿ ಬೀಜಗಳನ್ನು ವಿತರಿಸಿ ಮೋಸ ಮಾಡಲಾಗುತ್ತಿದೆ. ಪೆಟ್ರೋಲ್ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿತವಾಗಿ ಲೀಟರಿಗೆ 16 ರೂ.ಗೆ ಸಿಗಬೇಕಾಗಿದ್ದ ಪೆಟ್ರೋಲನ್ನು 66 ರೂ.ಗೆ ಮಾರಾಟ ಮಾಡುವಂತೆ ಮಾಡಿದ ಮೋದಿ ಸರಕಾರವು ಆಹಾರ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿದೆ. ಗಣಪತಿ ಪ್ರಕರಣದಲ್ಲಿ ಜಾರ್ಜ್ ಅವರ ರಾಜಿನಾಮೆ ಕೇಳುವ ಬಿಜೆಪಿಯು ವೇಮುಲಾ ಪ್ರಕರಣದಲ್ಲಿ ದತ್ತಾತ್ರೇಯರನ್ನಾಗಲಿ, ಸ್ಮತಿ ಇರಾನಿಯದ್ದಾಗಲಿ, ರಾಜಿನಾಮೆ ಪಡೆದಿದ್ದಾರೆಯೇ? ಕಲ್ಲಪ್ಪ ಪ್ರಕರಣದಲ್ಲಿ ಸಂಘಪರಿವಾರದ ಮುಖಂಡನ ಬಂಧನ, ವಿನಾಯಕ ಬಾಳಿಗ ಪ್ರಕರಣದಲ್ಲಿ ನಮೋ ಬ್ರಿಗೇಡ್ ನಾಯಕ ನರೇಶ್ ಶೆಣೈ ಬಂಧನವಾಗಿದ್ದರೂ ಯಾವ ಸ್ಥಳೀಯ ಬಿಜೆಪಿ ಪಕ್ಷದ ಜನಪ್ರತಿನಿಧಿಗಳ ರಾಜಿನಾಮೆ ಕೊಡಿಸಿದ್ದಾರೆ ಎಂದವರು ಪ್ರಶ್ನಿಸಿದರು.

ಪಕ್ಷದ ತಾಲೂಕು ಸಮಿತಿ ಸದಸ್ಯೆ ರೋಹಿಣಿ ಮನವಿ ಓದಿದರು. ಪಟ್ರಮೆ ಪಂಚಾಯತು ಸದಸ್ಯ ಶ್ಯಾಮರಾಜ್ ವಂದಿಸಿದರು. ಹೋರಾಟದ ನೇತೃತ್ವದಲ್ಲಿ ಪಕ್ಷದ ತಾಲೂಕು ಮುಖಂಡರಾದ ನೆಬಿಸಾ, ಜಯರಾಮ ಮಯ್ಯ, ಡೊಂಬಯ ಗೌಡ ಹಾಗೂ ಸಂಘಟನೆಗಳ ಮುಖಂಡರಾದ ಧನಂಜಯ ಗೌಡ, ವಸಂತ ಪಟ್ರಮೆ, ಮೀನಾಕ್ಷಿ, ಜಯಂತಿ, ಜಯಶ್ರೀ, ಇಂದಿರಾ, ಕಿರಣಪ್ರಭ, ಕುಮಾರಿ, ರಾಮಚಂದ್ರ, ವೀಣಾ ಹೊಸಂಗಡಿ, ಕುಸುಮಾವತಿ ಮೊದಲಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X