Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ:...

ಸರಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಶಿಕ್ಷಣ ಸಚಿವ ತನ್ವೀರ್ ಸೇಠ್

ವಿದ್ಯಾರ್ಥಿಯ ಧೈರ್ಯಕ್ಕೆ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ21 July 2016 8:46 PM IST
share
ಸರಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಶಿಕ್ಷಣ ಸಚಿವ ತನ್ವೀರ್ ಸೇಠ್

ಬೆಂಗಳೂರು, ಜು. 21: ಮಕ್ಕಳ ಕೊರತೆ ನೆಪದಲ್ಲಿ ರಾಜ್ಯದಲ್ಲಿನ ಯಾವುದೇ ಸರಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ. ಒಬ್ಬ ಅಥವಾ ಇಬ್ಬರು ವಿದ್ಯಾರ್ಥಿಗಳಿದ್ದರೂ, ಅಂತಹ ಎಲ್ಲ ಶಾಲೆಗಳನ್ನು ಮುಂದುವರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ 4164 ಶಾಲೆಗಳಲ್ಲಿ 10ಕ್ಕಿಂತಲೂ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಕೆಲ ಪ್ರದೇಶಗಳಲ್ಲಿ ಒಂದು, ಎರಡು, ಮೂರು ಮಕ್ಕಳಿರುವ ಶಾಲೆಗಳು ಇವೆ ಎಂದು ಮಾಹಿತಿ ನೀಡಿದರು.

 ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಯಡಿ ಪ್ರಸಕ್ತ ಸಾಲಿನಲ್ಲಿ 1.07ಲಕ್ಷ ಮಂದಿ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲಾಗಿದೆ. ಕಾಯ್ದೆಯನ್ವಯ 1.15 ಲಕ್ಷ ಮಕ್ಕಳಿಗೆ ಪ್ರವೇಶ ಕಲ್ಪಿಸಲು ಅವಕಾಶವಿತ್ತು. ಆದರೆ, ಕೆಲವೆಡೆ ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಆ ಸೀಟುಗಳು ಉಳಿದಿವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. ಆರ್‌ಟಿಇ ಸೀಟುಗಳಿಗೆ ಸರಕಾರದಿಂದ 230 ಕೋಟಿ ರೂ.ಶುಲ್ಕ ಪಾವತಿಸಿದ್ದು, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ವೆಚ್ಚ ಮಾಡಲಾಗಿದೆ ಎಂದ ತನ್ವೀರ್ ಸೇಠ್, ಆರ್‌ಟಿಇ ಎಲ್ಲ ಸೀಟುಗಳು ಬಡ ವಿದ್ಯಾರ್ಥಿಗಳಿಗೆ ದೊರಕಿವೆ ಎಂದು ಹೇಳುವುದು ಕಷ್ಟ. ಈ ಸಂಬಂಧ ಇಲಾಖೆ ಮಟ್ಟದಲ್ಲಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ, ಬಿಇಓ ಅಮಾನತ್ತು: ಚಿಕ್ಕೋಡಿ ತಾಲೂಕಿನ ಶಾಲೆಯೊಂದರ ಕಟ್ಟಡದ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಈಗಾಗಲೇ ಮುಖ್ಯ ಶಿಕ್ಷಕ, ಬಿಇಓ ಸೇರಿದಂತೆ ಮೂರು ಮಂದಿಯನ್ನು ಅಮಾನತ್ತು ಮಾಡಲಾಗಿದೆ ಎಂದ ಅವರು ಹೇಳಿದರು.
ಸ್ಥಳೀಯ ಮುಖಂಡ ಮುಖ್ಯ ಶಿಕ್ಷಕರ ಮೇಲೆ ಒತ್ತಡ ಹೇರಿ ಹಳೆಯ ಕಟ್ಟಡದಲ್ಲಿ ಶಾಲೆ ನಡೆಸಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಸಂಬಂಧ ಸಮಗ್ರ ತನಿಖಾ ವರದಿಗೆ ಸೂಚಿಸಿದ್ದು, ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದರು.
ಗೃಹ ಸಚಿವರ ಮನವಿಗೆ ಸ್ಪಂದನೆ: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಹಾರಾಡಿ ಸರಕಾರಿ ಶಾಲೆ ವಿದ್ಯಾರ್ಥಿ, ಶಿಕ್ಷಕರ ವರ್ಗಾಯಿಸದಂತೆ ಗೃಹ ಸಚಿವ ಪರಮೇಶ್ವರ್‌ಗೆ ಎಸ್‌ಎಂಎಸ್ ಸಂದೇಶ ರವಾನಿಸಿದ್ದ. ಆ ಹಿನ್ನೆಲೆಯಲ್ಲ್ಲಿ ಅವರ ಸೂಚನೆಯಂತೆ ಆ ಶಿಕ್ಷಕರನ್ನು ಅದೇ ಶಾಲೆಗೆ ನಿಯೋಜನೆ ಮಾಡಲಾಗಿದೆ ಎಂದರು.
ಶಾಲಾ ವಿದ್ಯಾರ್ಥಿಯ ಧೈರ್ಯ, ನೈಪುಣ್ಯತೆ ಅಭಿನಂದನೀಯ. ಅಲ್ಲದೆ, ವಿದ್ಯಾರ್ಥಿಯ ಎಸ್‌ಎಂಎಸ್ ಸಂದೇಶಕ್ಕೆ ಸ್ಪಂದಿಸಿದ ಗೃಹ ಸಚಿವ ಪರಮೇಶ್ವರ್ ಅವರನ್ನು ತಾನು ಅಭಿನಂದಿಸುತ್ತೇನೆ. ಯಾವುದೇ ಶಾಸಕರು ಅಥವಾ ಸಚಿವರು ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ತನ್ನ ಗಮನಕ್ಕೆ ತಂದರೆ ಕೂಡಲೇ ಅವುಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X