Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಮ್‌ಎಚ್370 ವಿಮಾನದ ಅವಶೇಷಗಳಿಗಾಗಿ ಶೋಧ...

ಎಮ್‌ಎಚ್370 ವಿಮಾನದ ಅವಶೇಷಗಳಿಗಾಗಿ ಶೋಧ - ತಪ್ಪು ಸ್ಥಳದಲ್ಲಿ ಹುಡುಕಿದೆವು: ಶೋಧ ತಂಡ

ವಿಮಾನವನ್ನು ಇಳಿಮುಖವಾಗಿ ನಿಧಾನವಾಗಿ ಚಲಾಯಿಸಲಾಗಿತ್ತೇ?

ವಾರ್ತಾಭಾರತಿವಾರ್ತಾಭಾರತಿ21 July 2016 9:40 PM IST
share
ಎಮ್‌ಎಚ್370 ವಿಮಾನದ ಅವಶೇಷಗಳಿಗಾಗಿ ಶೋಧ - ತಪ್ಪು ಸ್ಥಳದಲ್ಲಿ ಹುಡುಕಿದೆವು: ಶೋಧ ತಂಡ

ಸಿಡ್ನಿ, ಜು. 21: ಮಲೇಶ್ಯ ಏರ್‌ಲೈನ್ಸ್‌ನ ಎಂಎಚ್370 ವಿಮಾನ ಅಂತಿಮ ಕ್ಷಣಗಳಲ್ಲಿ ಸಮುದ್ರಕ್ಕೆ ನೇರವಾಗಿ ಅಪ್ಪಳಿಸುವ ಬದಲು ಇಳಿಯುತ್ತಾ ಬಂದಿರುವ ಸಾಧ್ಯತೆಯಿದೆ ಎಂದು ವಿಮಾನದ ಅವಶೇಷಗಳಿಗಾಗಿ ಸಮುದ್ರದಡಿಯಲ್ಲಿ ಶೋಧ ನಡೆಸುತ್ತಿರುವ ಡಚ್ ಕಂಪೆನಿಯೊಂದರ ಉನ್ನತ ಶೋಧ ಅಧಿಕಾರಿಗಳು ಭಾವಿಸಿದ್ದಾರೆ.
ಅಂದರೆ, ವಿಮಾನದ ಅವಶೇಷಗಳಿಗಾಗಿ ಸಾಗರದ ತಪ್ಪು ಭಾಗದಲ್ಲಿ ತಾವು ಎರಡು ವರ್ಷಗಳಿಂದ ಶೋಧ ನಡೆಸಿರುವುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ.
2014 ಮಾರ್ಚ್ 8ರಂದು ರಾತ್ರಿ ಕೌಲಾಲಂಪುರದಿಂದ ಬೀಜಿಂಗ್‌ಗೆ 239 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಎಂಎಚ್370 ವಿಮಾನ ನಿಗೂಢವಾಗಿ ನಾಪತ್ತೆಯಾಗಿತ್ತು.
ಇಂಜಿನಿಯರಿಂಗ್ ಕಂಪೆನಿ ಫುಗ್ರೊ ನೇತೃತ್ವದಲ್ಲಿ ಶೋಧಕರು ಸುಮಾರು ಗ್ರೀಸ್‌ನ ಭೂಭಾಗದಷ್ಟು ಪ್ರದೇಶವನ್ನು ಸಮುದ್ರದಲ್ಲಿ ಎರಡು ವರ್ಷಗಳಿಂದ ಜಾಲಾಡುತ್ತಿದ್ದಾರೆ.
ಪಶ್ಚಿಮ ಆಸ್ಟ್ರೇಲಿಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಹಿಂದೂ ಮಹಾ ಸಾಗರದಲ್ಲಿ 1.20 ಲಕ್ಷ ಚದರ ಕಿಲೋಮೀಟರ್‌ಗಿಂತಲು ಹೆಚ್ಚಿನ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದ್ದು ಇನ್ನು ಮೂರು ತಿಂಗಳಲ್ಲಿ ಅದು ಕೊನೆಗೊಳ್ಳಲಿದೆ.
ಆ ಬಳಿಕ, ಶೋಧ ಕಾರ್ಯಾಚರಣೆಯನ್ನು ನಿಲ್ಲಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಪ್ರಮುಖ ದೇಶಗಳಾದ ಮಲೇಶ್ಯ, ಚೀನಾ ಮತ್ತು ಆಸ್ಟ್ರೇಲಿಯಗಳು ಶುಕ್ರವಾರ ಸಭೆ ನಡೆಸಲಿವೆ. ಈವರೆಗೆ ನಾಪತ್ತೆಯಾಗಿರುವ ವಿಮಾನಕ್ಕೆ ಸಂಬಂಧಿಸಿದ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ.
‘‘ಅವಶೇಷಗಳು ಅಲ್ಲಿಲ್ಲ. ಅಂದರೆ, ಅವು ಬೇರೆಲ್ಲೋ ಇವೆ’’ ಎಂದು ಫುಗ್ರೊ ಯೋಜನಾ ನಿರ್ದೇಶಕ ಪೌಲ್ ಕೆನಡಿ ‘ರಾಯ್ಟರ್ಸ್’ ಸುದ್ದಿ ಸಂಸ್ಥೆಗೆ ತಿಳಿಸಿದರು.


ಪೈಲಟ್‌ನ ನಿಯಂತ್ರಣದಲ್ಲೇ ಇತ್ತೇ?
ಗುರುತಿಸಲಾದ ವಲಯದಲ್ಲಿ ಅವಶೇಷಗಳು ಪತ್ತೆಯಾಗದಿರಲು ಕೆಲವು ತರ್ಕಕ್ಕೆ ಮೀರಿದ ಕಾರಣಗಳು ಇರಬಹುದಾದರೂ, ವಿಮಾನವನ್ನು ನಿಧಾನವಾಗಿ ಇಳಿಸಿರುವ ಸಾಧ್ಯತೆ ಹೆಚ್ಚು ಪ್ರಸ್ತುತವೆನಿಸುತ್ತದೆ ಎಂದು ಕೆನಡಿ ಮತ್ತು ಅವರ ತಂಡ ಭಾವಿಸುತ್ತದೆ. ಅಂದರೆ, ವಿಮಾನವನ್ನು ಕೊನೆಯ ಹಂತದಲ್ಲಿ ನಿಧಾನವಾಗಿ ಇಳಿಸಲಾಗಿದೆ. ಅಂದರೆ, ಕೊನೆಯ ಹಂತದಲ್ಲೂ ವಿಮಾನ ಪೈಲಟ್‌ನ ನಿಯಂತ್ರಣದಲ್ಲಿತ್ತು ಎಂಬುದಾಗಿ ಭಾವಿಸಬಹುದಾಗಿದೆ.
ಹಾಗಾಗಿದ್ದರೆ, ಉಪಗ್ರಹ ಚಿತ್ರಗಳ ಆಧಾರದಲ್ಲಿ ಮಾಡಲಾದ ಲೆಕ್ಕಾಚಾರದಂತೆ ಗುರುತಿಸಲಾದ ಪ್ರದೇಶವನ್ನು ಮೀರಿ ವಿಮಾನ ಸಾಗಿರುವ ಸಾಧ್ಯತೆಯಿದೆ.
‘‘ವಿಮಾನ ಪೈಲಟ್‌ನ ನಿಯಂತ್ರಣದಲ್ಲಿದ್ದರೆ ಅದು ತುಂಬಾ ದೂರ ಹಾರಬಹುದು’’ ಎಂದು ಕೆನಡಿ ನುಡಿದರು.
‘‘ವಿಮಾನ ಪೈಲಟ್‌ನ ನಿಯಂತ್ರಣದಲ್ಲೇ ಇದ್ದರೆ ನಮ್ಮ ಶೋಧ ಪ್ರದೇಶದ ವ್ಯಾಪ್ತಿಯನ್ನೂ ಮೀರಿ ವಿಮಾನ ಹಾರಬಹುದಾಗಿದೆ’’ ಎಂದು ಅಭಿಪ್ರಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X