Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್‌ಟಿಒ ಜಾಗ ವಶಕ್ಕೆ ಪಡೆಯಲು ಡಿಸಿ...

ಆರ್‌ಟಿಒ ಜಾಗ ವಶಕ್ಕೆ ಪಡೆಯಲು ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 July 2016 9:49 PM IST
share
ಆರ್‌ಟಿಒ ಜಾಗ ವಶಕ್ಕೆ  ಪಡೆಯಲು ಡಿಸಿ ಸೂಚನೆ

 ಮಡಿಕೇರಿ, ಜು.21: ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಬಳಿ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್.ಟಿ.ಒ) ಸೇರಿದ ಜಾಗವನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ.

  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಪ್ರಗತಿ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು. ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು, ಭವನದ ಬಳಿ ಇರುವ ಆರ್‌ಟಿಒ ಕಚೇರಿಗೆ ಸೇರಿದ ವಸತಿ ಗೃಹದ ಜಾಗವನ್ನು ವಶಕ್ಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಬಳಿ ಇರುವ ಆರ್‌ಟಿಓ ಕಚೇರಿಯ ಸಿಬ್ಬಂದಿಯ ವಸತಿ ಗೃಹಗಳನ್ನು ತೆರವುಗೊಳಿಸುವಂತಾಗಲು ಅಲ್ಲಿನ ಸಿಬ್ಬಂದಿಯ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಅವರು ಸಲಹೆ ಮಾಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಹುಟ್ಟುಹಬ್ಬದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಲಹೆ ನೀಡಿದರು. ಇದಕ್ಕೆ ಮಾಹಿತಿ ನೀಡಿದ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ ಸಚಿನ್, ಮುಂದಿನ ಮಾರ್ಚ್ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು,

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಜಾಧವ್, ಎರಡು ಮೂರು ತಿಂಗಳಲ್ಲಿ ವಸತಿ ಗೃಹಗಳ ವ್ಯವಸ್ಥೆ ಮಾಡಲಾಗುವುದು ಎಂದರು. ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ, ಮೇಜರ್ ಬಿ.ಎ. ನಂಜಪ್ಪ, ಉಳ್ಳಿಯಡ ಎಂ.ಪೂವಯ್ಯ, ಟಿ.ಎಂ. ಸೋಮಯ್ಯ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ಕುರಿತು ಹಲವು ಸಲಹೆ ನೀಡಿದರು. ಮಣಜೂರು ಮಂಜುನಾಥ್, ರಾಘವೇಂದ್ರ, ಕಾರ್ಯಪ್ಪಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X