Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆ ಶೋಷಣೆಮುಕ್ತಳಾಗಿಲ್ಲ: ಕವಿತಾ...

ಮಹಿಳೆ ಶೋಷಣೆಮುಕ್ತಳಾಗಿಲ್ಲ: ಕವಿತಾ ಲಿಂಗರಾಜು

ವಾರ್ತಾಭಾರತಿವಾರ್ತಾಭಾರತಿ21 July 2016 10:12 PM IST
share
ಮಹಿಳೆ ಶೋಷಣೆಮುಕ್ತಳಾಗಿಲ್ಲ: ಕವಿತಾ ಲಿಂಗರಾಜು

 ಚಿಕ್ಕಮಗಳೂರು, ಜು.21: ಮಹಿಳೆ ಎಲ್ಲ ರಂಗಗಳಲ್ಲೂ ಛಾಪು ಮೂಡಿಸಿದ್ದರೂ ಶೋಷಣೆಯಿಂದ ಮುಕ್ತಳಾಗಿಲ್ಲ ಎಂದು ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಲಿಂಗಾರಾಜು ಅಭಿಪ್ರಾಯಿಸಿದ್ದಾರೆ. ಅಕ್ಕಮಹಾದೇವಿ ಮಹಿಳಾಸಂಘದ 8ನೆ ವರ್ಷದ ವಾರ್ಷಿಕೋತ್ಸವ ಹಾಗೂ ಸರ್ವ ಸದಸ್ಯರ ಸಭೆಯನ್ನು ನಿನ್ನೆ ಶ್ರೀ ಜಗದ್ಗುರು ರೇಣುಕಾಸಮುದಾಯ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆ ಕುಟುಂಬಕ್ಕಷ್ಟೆ ಸೀಮಿತವಾಗದೆ ಸಾಮಾ ಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಇಂದು ಮಹಿಳೆಯರು ತಮ್ಮದೇ ಆದ ಸಾಧನೆ ಮಾಡಿದ್ದಾರೆ. ಶೇ.35ರಷ್ಟು ಆಡಳಿತದಲ್ಲಿ ಮೀಸಲಾತಿ ಪಡೆದು ರಾಜಕೀಯಕ್ಷೇತ್ರದಲ್ಲೂ ಗಣನೀಯ ಅಧಿಕಾರ ಗಳಿಸಿದ್ದರೂ, ಒಂದಿಲ್ಲೊಂದು ರೀತಿಯ ತೊಂದರೆ ಅನುಭವಿಸುತ್ತಲೇ ಇದ್ದಾಳೆ. ದೌರ್ಜನ್ಯ, ಅತ್ಯಾಚಾರದಂತಹ ಪಿಡುಗಿನಿಂದ ಮುಕ್ತಗೊಂಡಿಲ್ಲ ಎಂದ ಕವಿತಾ, ಧೈರ್ಯ, ಸ್ಥೈರ್ಯ ಮತ್ತು ಸಂಘಟನೆಯಿಂದ ಇವನ್ನೆಲ್ಲ ಮೆಟ್ಟಿನಿಲ್ಲಬೇಕಾಗಿದೆ ಎಂದವರು ಕರೆ ನೀಡಿದರು. ಪುರುಷರಿಗಿಂತ ಮಹಿಳೆಯರಲ್ಲಿ ಪ್ರಕೃತಿದತ್ತವಾಗಿಯೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಅಧಿಕವಾಗಿರುತ್ತದೆ. ಇತ್ತೀಚಿನ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ಪ್ರಸ್ತಾಪಿಸಿ ಅನುಪಮಾ ಶೆಣೈ ಕೆಲಸ ತೊರೆದರೇ ಹೊರತು ಜೀವಹಾನಿಗೆ ಮುಂದಾಗಲಿಲ್ಲವೆಂದು ಉದಾಹರಿಸಿದರು.

 ತಾಪಂ ಸದಸ್ಯೆ ಮುಗುಳವಳ್ಳಿಯ ಪುಷ್ಪಾಸೋಮಶೇಖರ್ ಮಾತನಾಡಿ, ವಿವಿಧ ಸ್ಥರ- ಪ್ರದೇಶದ ಹೆಣ್ಣುಮಕ್ಕಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸಿರುವುದು ಮಾದರಿ ಎಂದ ಅವರು, ಇಲ್ಲಿಯ ಸದಸ್ಯೆಯಾಗಿ ಪಡೆದ ಅನುಭವ ಟಿಪಿಎಸ್ ಕಾರ್ಯ ನಿರ್ವಹಣೆಯಲ್ಲಿ ತಮಗೆ ಸಹಕಾರಿಯಾಗುತ್ತಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಗೌರಮ್ಮ ಬಸವೇಗೌಡ ಮಾತನಾಡಿ, ಮೌಲ್ಯಯುತವಾದ ನೈತಿಕ ತಳಹದಿಯ ಬದುಕು ನಮ್ಮದಾಗಬೇಕು. ಆರೋಗ್ಯವೇ ಭಾಗ್ಯ. ಸ್ವಚ್ಛತೆಯ ಬಗ್ಗೆ ಕಾಳಜಿವಹಿಸಬೇಕು. ಬೆಳೆಯುವ ಮಕ್ಕಳಲ್ಲಿ ಪರಂಪರೆ, ಸಂಸ್ಕಾರದ ಬಗ್ಗೆ ಮಹಿಳೆಯರು ಅರಿವು ಮೂಡಿಸಿದರೆ ಒಳ್ಳೆಯ ಸಮಾಜ ನಿರ್ಮಾಣವಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X