Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಗಳಲ್ಲಿ 6,500ಕ್ಕೂ ಹೆಚ್ಚು ಭಾರತೀಯ...

ವಿದೇಶಗಳಲ್ಲಿ 6,500ಕ್ಕೂ ಹೆಚ್ಚು ಭಾರತೀಯ ಕೈದಿಗಳು: ವಿ.ಕೆ.ಸಿಂಗ್

ವಾರ್ತಾಭಾರತಿವಾರ್ತಾಭಾರತಿ21 July 2016 10:27 PM IST
share
ವಿದೇಶಗಳಲ್ಲಿ 6,500ಕ್ಕೂ ಹೆಚ್ಚು ಭಾರತೀಯ ಕೈದಿಗಳು: ವಿ.ಕೆ.ಸಿಂಗ್

ಹೊಸದಿಲ್ಲಿ, ಜು.21: ಸುಮಾರು 6,500ಕ್ಕೂ ಹೆಚ್ಚು ಮಂದಿ ಭಾರತೀಯರು 75 ದೇಶಗಳ ಬಂದಿಖಾನೆಗಳಲ್ಲಿದ್ದಾರೆ. ಅವರಲ್ಲಿ ಗರಿಷ್ಠ 1,896 ಮಂದಿ ಸೌದಿ ಅರೇಬಿಯದ ಕಾರಾಗೃಹಗಳಲ್ಲಿದ್ದಾರೆ. 354 ಮಂದಿ ಶಿಕ್ಷೆಯ ಅವಧಿಯನ್ನು ಪೂರೈಸಿದ್ದು, ಸ್ವದೇಶಕ್ಕೆ ಹಿಂದಿರುಗಲು ಕಾಯುತ್ತಿದ್ದಾರೆಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ.ಸಿಂಗ್ ಲೋಕಸಭೆಗಿಂದು ಲಿಖಿತ ಉತ್ತರವೊಂದರಲ್ಲಿ ತಿಳಿಸಿದ್ದಾರೆ.

ಭಾರತವು ಶಿಕ್ಷೆಗೊಳಗಾದವರ ವರ್ಗಾವಣೆಯ ಬಗ್ಗೆ 42 ದೇಶಗಳೊಂದಿಗೆ ದ್ವಿಪಕ್ಷೀಯ ಒಪ್ಪಂದಗಳನ್ನು ಮಾಡಿಕೊಂಡಿದೆ. ಅದರನ್ವಯ ಕೆಲವು ದೇಶಗಳಿಂದ ಭಾರತೀಯ ಕೈದಿಗಳನ್ನು ಸ್ವದೇಶಕ್ಕೆ ಕರೆತರಲಾಗುವುದೆಂದು ಅವರು ಹೇಳಿದರು.
ಗರಿಷ್ಠ 1,896 ಮಂದಿ ಭಾರತೀಯರು ಸೌದಿ ಅರೇಬಿಯದ ಕಾರಾಗೃಹಗಳಲ್ಲಿದ್ದಾರೆ. ಆ ಬಳಿಕ ಕ್ರಮವಾಗಿ ಸಂಯುಕ್ತ ಅರಬ್ ರಾಷ್ಟ್ರಗಳಲ್ಲಿ 764, ನೇಪಾಳದಲ್ಲಿ 614, ಅಮೆರಿಕದಲ್ಲಿ 595 ಹಾಗೂ ಪಾಕಿಸ್ತಾನದಲ್ಲಿ 518 ಮಂದಿ ಭಾರತೀಯ ಕೈದಿಗಳಿದ್ದಾರೆಂದು ಸಿಂಗ್ ಮಾಹಿತಿ ನೀಡಿದರು.
ಕುವೈತ್‌ನಲ್ಲಿ 325, ಮಲೇಶ್ಯದಲ್ಲಿ 293, ಬಹ್‌ರೈನ್‌ನಲ್ಲಿ 235, ಚೀನಾದಲ್ಲಿ 105 ಹಾಗೂ ಬಾಂಗ್ಲಾದೇಶದಲ್ಲಿ 130 ಮಂದಿ ಭಾರತೀಯರು ಬಂಧನದಲ್ಲಿದ್ದಾರೆಂದು ಅವರು ಅಂಕೆ-ಸಂಖ್ಯೆ ನೀಡಿದರು.
ಆಸ್ಟ್ರೇಲಿಯ, ಸೈಪ್ರಸ್, ಈಜಿಪ್ಟ್, ಜಪಾನ್, ಜೋರ್ಡಾನ್, ಡೆನ್ಮಾರ್ಕ್, ಫ್ರಾನ್ಸ್, ಗ್ರೀಸ್, ಲೆಬನಾನ್ ಹಾಗೂ ಮಾರಿಶಸ್ ಸಹಿತ ಇನ್ನೂ ಹಲವು ದೇಶಗಳಲ್ಲೂ ಭಾರತೀಯರು ಕಾರಾಗೃಹಗಳಲ್ಲಿದ್ದಾರೆ.
ಲೋಕಸಭೆಯಲ್ಲಿ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯ ಮೀನುಗಾರರೆಂದು ನಂಬಲಾಗಿರುವ 261 ಮಂದಿ ಪ್ರಸಕ್ತ ಪಾಕಿಸ್ತಾನದ ಜೈಲುಗಳಲ್ಲಿದ್ದಾರೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X