Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲೂ...

ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲೂ ಸಸ್ಯರಾಶಿಗಳ ಪಾತ್ರ ಮಹತ್ವದ್ದು:ಮಲ್ಲನಗೌಡ

ವಾರ್ತಾಭಾರತಿವಾರ್ತಾಭಾರತಿ22 July 2016 5:42 PM IST
share
  • ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲೂ ಸಸ್ಯರಾಶಿಗಳ ಪಾತ್ರ ಮಹತ್ವದ್ದು:ಮಲ್ಲನಗೌಡ
  • ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲೂ ಸಸ್ಯರಾಶಿಗಳ ಪಾತ್ರ ಮಹತ್ವದ್ದು:ಮಲ್ಲನಗೌಡ

ಉಳ್ಳಾಲ, ಜು.22:ಎಂತಹುದೇ ಅಭಿವೃದ್ಧಿ ಕಾರ್ಯಗಳಲ್ಲೂ ಕೂಡ ಸಸ್ಯರಾಶಿಗಳ ಪಾತ್ರ ಮಹತ್ವದ್ದಾಗಿದ್ದು, ಇಂತಹ ಅಮೂಲ್ಯ ಸಸ್ಯಸಂಕುಲವನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವ ಜವಬ್ದಾರಿ ವಿದ್ಯಾರ್ಥಿ ಸಮೂಹದ್ದಾಗಿದೆ ಎಂದು ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಅಭಿಪ್ರಾಯಪಟ್ಟರು.

ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವಕೀಲರ ಸಂಘ, ಅರಣ್ಯ ಇಲಾಖೆ, ಸಾರ್ವಜನಿಕ ಹಾಗೂ ಜಿಲ್ಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಾರುವಿನಲ್ಲಿ ನಡೆದ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗಿಡ ನೆಡುವ ಕಾರ್ಯಕ್ರಮಗಳಿಗೆ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಮಕ್ಕಳಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು,ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ವನಮಹೋತ್ಸವಗಳು ಕೇವಲ ಒಂದು ದಿನದ ಕಾಟಾಚಾರಕ್ಕೆ ಬಲಿಯಾಗುತ್ತಿರುವುದು ಖೇದಕರ. ಇಂದಿನ ಮಕ್ಕಳೇ ಗಿಡಗಳನ್ನು ನೆಟ್ಟು ಅದರ ಲಾಲನೆ, ಪಾಲನೆಯ ಜವಬ್ದಾರಿ ವಹಿಸಿಕೊಂಡು ಸಸ್ಯಕಾಶಿಯನ್ನು ಮುಂದಿನ ಪೀಳಿಗೆಗೂ ವಿಸ್ತರಿಸುವ ಮಹತ್ಕಾರ್ಯ ನಡೆಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿ.ಪಂ. ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮಕ್ಕಳು ತಮ್ಮ ಇತರ ದೈನಂದಿನ ಚಟುವಟಿಕೆಗಳಂತೆ ಸಸ್ಯಪಾಲನೆಯನ್ನೂ ರೂಢಿಯನ್ನಾಗಿಸಬೇಕು. ಮನೆಯಲ್ಲಿನ ಅಡುಗೆ ಗ್ಯಾಸ್ ಸಿಲಿಂಡರ್ ಮುಗಿದರೂ ಜೀವಿಸಬಹುದು ಆದರೆ ಪ್ರಕೃತಿಯ ಆಕ್ಸಿಜನ್ ಸಿಲಿಂಡರ್ ಮುಗಿದರೆ ಒಂದು ಕ್ಷಣ ಬದುಕಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳನ್ನು ಎಚ್ಚರಿಸಿದರು.

ವಲಯ ಅರಣ್ಯಾಧಿಕಾರಿ ಶ್ರೀಧರ್ ಮಾತನಾಡಿ, ಸಸ್ಯಸಂಕುಲ ಮತ್ತು ಸರಕಾರಿ ಶಾಲೆಗಳೆರಡೂ ಅಳಿವಿನಂಚಿನಲ್ಲಿದ್ದು,ಇವೆರಡೂ ಸಂಪೂರ್ಣ ಅವನತಿ ಕಂಡರೆ ಸಮಾಜದ ವ್ಯವಸ್ಥೆಯಲ್ಲಿ ವ್ಯತಿರಿಕ್ತ ಪರಿಣಾಮಗಳು ಬೀರುವುದು ಖಂಡಿತ. ಸರಕಾರಿ ಶಾಲೆಗಳನ್ನು ಉಳಿಸುವ ಕೆಲಸದೊಂದಿಗೆ, ನಮ್ಮ ಮುಂದಿನ ಪೀಳಿಗೆಯವರು ಆರೋಗ್ಯವಾಗಿ ಬದುಕಲು ಸಸ್ಯರಾಶಿಗಳು ಅತ್ಯಗತ್ಯ. ಆದ್ದರಿಂದ ಎಳೆಯ ವಯಸ್ಸಿನಲ್ಲೇ ಮಕ್ಕಳು ಗಿಡಗಳನ್ನು ಬೆಳೆಸುವುದರ ಕಡೆಗೆ ಗಮನಹರಿಸುವಂತೆ ಕರೆ ನೀಡಿದರು.

ಈ ವೇಳೆ ಶಾಲಾ ಮಕ್ಕಳಿಗೆ ಅತಿಥಿಗಳು ಸಸಿಗಳನ್ನು ವಿತರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಗ್ರಾ.ಪಂ ಸದಸ್ಯ ದೀಪಕ್ ಪಿಲಾರ್, ಲಯನ್ಸ್ ಕ್ಲಬ್ ಚಿಕ್ಕಮಗಳೂರಿನ ಅಧ್ಯಕ್ಷ ಸಂದೀಪ್ ಹೆಗ್ಡೆ, ಲಯನೆಸ್ ಗೀತಾ ಹೆಗ್ಡೆ, ಲ.ಉಷಾ ರಾಮಚಂದ್ರ, ಲ.ಬಾಲಕೃಷ್ಣ ಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಶಾರದಾ, ಸಮೂಹ ಸಂಪನ್ಮೂಲ ವ್ಯಕ್ತಿ ಕವಿತಾ,ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪಿ.ಸಿ ಇಮ್ತಿಯಾಝ್, ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ್, ಶಾಲಾ ಮುಖ್ಯೋಪಾಧ್ಯಾಯ ರೋಹಿತಾಶ್ವ ಯು ಉಚ್ಚಿಲ್, ಪತ್ರಕರ್ತ ವಿಧ್ಯಾಧರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X