Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತರ ಮೇಲಿನ ದೌರ್ಜನ್ಯ: ಮೋದಿ ಮೌನದ...

ದಲಿತರ ಮೇಲಿನ ದೌರ್ಜನ್ಯ: ಮೋದಿ ಮೌನದ ಹಿಂದಿನ ಮರ್ಮವೇನು : ಇಂದಿರಾ ಕೃಷ್ಣಪ್ಪ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 July 2016 8:05 PM IST
share
ದಲಿತರ ಮೇಲಿನ ದೌರ್ಜನ್ಯ: ಮೋದಿ ಮೌನದ ಹಿಂದಿನ ಮರ್ಮವೇನು : ಇಂದಿರಾ ಕೃಷ್ಣಪ್ಪ ಪ್ರಶ್ನೆ

ಬೆಂಗಳೂರು, ಜು. 22: ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಅವರ ಬಗ್ಗೆ ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳ ಬಗ್ಗೆ ಮೌನ ತಾಳುತ್ತಿರುವುದರ ಮರ್ಮವನ್ನು ಬಹಿರಂಗಪಡಿಸಬೇಕು ಎಂದು ಹಿರಿಯ ಚಿಂತಕಿ ಮತ್ತು ದಲಿತ ಪರ ಹೋರಾಟಗಾರ್ತಿ ಇಂದಿರಾ ಕೃಷ್ಣಪ್ಪ ಪ್ರಶ್ನಿಸಿದರು. ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಡಿಎಸ್‌ಎಸ್ ಸಂಘಟನೆ 3ನೆ ವರ್ಷದ ಧ್ವಜದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಸಮತಾ ಸಮಾಜ ಎಂಬ ಚಿಂತನಾಗೋಷ್ಠಿಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ದಲಿತರ ಸ್ವಾಭಿಮಾನದ ಸಂಕೇತವಾಗಿರುವ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಅವರ ಬಗ್ಗೆ ವಿದ್ವತ್ಪೂರ್ಣ ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳ ಬಗ್ಗೆ ವೌನ ತಾಳುತ್ತಿರುವುದರ ಮರ್ಮವನ್ನು ಬಹಿರಂಗಪಡಿಸಬೇಕು ಎಂದು ಸವಾಲೆಸೆದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಏಳಿಗೆಗಾಗಿ ಸರಕಾರ ಸಾಕಷ್ಟು ಅನುದಾನ ನೀಡಿದೆ. ಈ ಹಣ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವ ಕಾರ್ಯವಾಗಬೇಕು. ಹಾಗೆಯೆ ಸರಕಾರಿ ಶಾಲೆಗಳ ರಕ್ಷಣೆಗೆ ದಲಿತ ಚಳವಳಿ ಹೋರಾಟವನ್ನು ಕೈಗತ್ತಿಕೊಳ್ಳಬೇಕು ಎಂದು ಕರೆ ನೀಡಿದರು.
    
ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್, ಗೌತಮ್ ಬುದ್ಧ, ಬಿ.ಕೃಷ್ಣಪ್ಪನವರ ಕಾಲಘಟ್ಟಗಳ ಅನುಗುಣವಾಗಿ ದಲಿತರ ಸ್ವಾತಂತ್ರ ಮತ್ತು ಹಕ್ಕುಗಳ ರಕ್ಷಣೆಗೆ ಜೀವನವನ್ನೇ ಮುಡುಪಾಗಿಟ್ಟು ಹೋರಾಟ ಮಾಡಿದ್ದರು. ಇವರ ಹೋರಾಟಗಳಿಂದಲೆ ನಾವು ಸಮಾಜದಲ್ಲಿ ತಲೆ ಎತ್ತಿ ಸುರಕ್ಷಿತವಾಗಿ ಓಡಾಡುತ್ತಿದ್ದೇವೆ. ಸಾಕಷ್ಟು ಸವಲತ್ತುಗಳನ್ನು ಅನುಭವಿಸುತ್ತಿದ್ದೇವೆ. ಆ ನಾಯಕರ ಆದರ್ಶಗಳನ್ನು ಇಂದಿನ ಯುವ ದಲಿತ ಹೋರಾಟಗಾರರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು. ಮುಂದುವರೆದು, ಆ ನಾಯಕರು ಎದುರಿಸಿದ ಕಷ್ಟಗಳು, ಸಮಸ್ಯೆಗಳನ್ನು ಇಂದಿನ ಯುವಕರು ವಿಮರ್ಶೆ ಮಾಡಿಕೊಂಡು ಬದ್ಧತೆಯಿಂದ ದಲಿತ ಚಳವಳಿಯನ್ನು ಮುನ್ನಡೆಸಬೇಕಿದೆ ಎಂದು ತಿಳಿಸಿದರು.
ದಲಿತ ಚಳವಳಿ ನನ್ನ ಪ್ರಧಾನ ತಾಯಿ. ಹೀಗಾಗಿ ನನ್ನ ಸಮುದಾಯದ ಮೇಲೆ ಹಲ್ಲೆ ದೌರ್ಜನ್ಯಗಳು ನಡೆದರೆ ಸಹಿಸಲಾಗದಷ್ಟು ಮನಸ್ಸಿಗೆ ಘಾಸಿಯಾಗುತ್ತದೆ. ನನ್ನಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದು ಬಿ.ಕೃಷ್ಣಪ್ಪನವರು. ಇವರ ಆದರ್ಶಗಳನ್ನು ಮೈಗೂಡಿಸಿಕೊಂಡು ದಲಿತ ಚಳವಳಿಯನ್ನು ಮುನ್ನಡೆಸುತ್ತಿದ್ದೇನೆ ಎಂದು ತಿಳಿಸಿದರು.
 ತ್ರಿವರ್ಣ ಧ್ವಜದಲ್ಲಿನ ಮಧ್ಯ ಭಾಗದಲ್ಲಿರುವ ಅಶೋಕಚಕ್ರ ದಮ್ಮದ ಪಳೆಯುಳಿಕೆ. ಈ ಚಕ್ರವನ್ನು ತ್ರಿವರ್ಣದಲ್ಲಿ ಅಳವಡಿಸಲು ಅಂಬೇಡ್ಕರ್ ಅವರು ಸಾಕಷ್ಟು ಹೋರಾಟವನ್ನೆ ಮಾಡಿದರು. ಈ ಚಕ್ರವನ್ನು ಅಳವಡಿಸಿದರೆ ದೇಶ ವಿಶ್ವಮನ್ನಣೆ ಸಿಗುತ್ತದೆ ಎಂದು ಪ್ರತಿಪಾದಿಸಿದರು. ಹಾಗೆಯೇ ವಿಶ್ವಮನ್ನಣೆಯನ್ನು ತ್ರಿವರ್ಣ ಧ್ವಜ ಗಳಿಸಿದೆ, ಆದರೆ ದೇಶದಲ್ಲಿ ಕೆಲ ಮೂಲಭೂತ ವರ್ಗಗಳು ಅಸಡ್ಡೆ ತೋರಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
 ಡಿಎಸ್‌ಎಸ್‌ನ ರಾಜ್ಯ ಸಮಿತಿಯ ಸದಸ್ಯ ರುದ್ರಪ್ಪ ಹನಗವಾಡಿ ಮಾತನಾಡಿ, ಕೆಲ ದಲಿತ ನಾಯಕರು ಚಳವಳಿಗಳನ್ನು ಉದ್ಯಮವನ್ನಾಗಿ ಮಾಡಿಕೊಂಡು ರಾಷ್ಟ್ರೀಯ ನಾಯಕರಂತೆ ಪ್ರತಿಬಿಂಬಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಅಂಬೇಡ್ಕರ್ ಅವರ ಚಿಂತನೆ, ಸಿದ್ಧಾಂತಗಳ ವಿರೋಧ ನಡೆಯನ್ನು ಪ್ರದರ್ಶಿಸುತ್ತಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದ ಅವರು, ದಲಿತ ಚಳವಳಿಗಾರರು ಅಂತಃಕರಣದ ಹೋರಾಟವನ್ನು ಮೈಗೂಡಿಸಕೊಳ್ಳಬೇಕು ಎಂದು ತಿಳಿಸಿದರು.
 ಕಾರ್ಯಕ್ರಮದಲ್ಲಿ ಸಂಘಟನಾ ಸಂಚಾಲಕ ನಾಗಣ್ಣ ಬಡಿಗೇರ, ಸದಸ್ಯರಾದ ಜೋತಪ್ಪ ಹೊಸಳ್ಳಿ, ಮಣಿಪಾಲ್ ರಾಜಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷ ರಮೇಶ್ ಡಾಕುಳಿಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X