Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಪಂಗಳಲ್ಲಿ 100 ಸೇವೆಗಳು ಲಭ್ಯ

ಗ್ರಾಪಂಗಳಲ್ಲಿ 100 ಸೇವೆಗಳು ಲಭ್ಯ

ಜು.25ರಂದು ‘ಬಾಪೂಜಿ ಸೇವಾ ಕೇಂದ್ರ’ಕ್ಕೆ ಸಚಿವರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 July 2016 10:29 PM IST
share

ಕಾರವಾರ, ಜು.22: ಇನ್ನು ಮುಂದೆ ಪಹಣಿ ಪತ್ರಿಕೆ ಪಡೆಯಲು ನಾಡ ಕಚೇರಿಗಳಿಗೆ ತೆರಳುವ ಅಗತ್ಯವಿಲ್ಲ. ಜಿಲ್ಲೆಯ ಎಲ್ಲ 231 ಗ್ರಾಮ ಪಂಚಾಯತ್‌ಗಳಲ್ಲಿ ಪಹಣಿ ಪತ್ರಿಕೆ ಒದಗಿಸುವ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಪಹಣಿ ಪತ್ರಿಕೆ ಪಡೆಯಲು ನಾಡ ಕಚೇರಿಗಳಿಗೆ ತೆರಳಿ ಸೇವೆ ಪಡೆಯಲು ಆಗುತ್ತಿರುವ ವಿಳಂಬವನ್ನು ತಪ್ಪಿಸಲು ಸರಕಾರ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರ್‌ಟಿಸಿ ನೀಡುವ ಸೌಲಭ್ಯವನ್ನು ಆರಂಭಿಸಿದೆ. ಇದಕ್ಕಾಗಿ ಎಲ್ಲ ಗ್ರಾಮ ಪಂಚಾಯತ್‌ಗಳಿಗೆ ಅನುಕೂಲವಾಗುವಂತೆ ತಲಾ 200 ನಿಗದಿತ ನಮೂನೆಯ ಮುದ್ರಿತ ಪ್ರತಿಗಳನ್ನು ಒದಗಿಸಿದೆ ಎಂದು ಅವರು ಹೇಳಿದ್ದಾರೆ. ಬಾಪೂಜಿ ಸೇವಾ ಕೇಂದ್ರ

: ಕಂದಾಯ ಇಲಾಖೆಯ ಸೇವೆಗಳು, ಪಂಚಾಯತ್ ರಾಜ್ ಇಲಾಖೆ ಸೇವೆಗಳನ್ನು ಒಳಗೊಂಡಂತೆ ಸರಕಾರದಿಂದ ದೊರೆಯುವ 100 ಸೇವೆಗಳನ್ನು ಒಂದೇ ಸೂರಿನಡಿ ತರುವ 46 ಬಾಪೂಜಿ ಸೇವಾ ಕೇಂದ್ರಗಳು ಜಿಲ್ಲೆಗೆ ಮಂಜೂರಾಗಿದ್ದು, ಕಾರ್ಯಾರಂಭ ಮಾಡುತ್ತಿವೆ. ಪ್ರಥಮ ಹಂತದಲ್ಲಿ 46ಗ್ರಾಮ ಪಂಚಾಯತ್‌ಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಜುಲೈ 25ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸಾಂಬ್ರಾಣಿ ಗ್ರಾಮ ಪಂಚಾಯತ್‌ನಲ್ಲಿ ಬಾಪೂಜಿ ಸೇವಾ ಕೇಂದ್ರಕ್ಕೆ ಚಾಲನೆ ನೀಡುವರು.

ಪ್ರಸ್ತುತ ಕಂದಾಯ ಇಲಾಖೆಯ ಸೇವೆಗಳು ನಾಡ ಕಚೇರಿಗಳಲ್ಲಿ ಮಾತ್ರ ಲಭ್ಯವಿದೆ. ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಹಿಂದುಳಿದ ವರ್ಗಗಳ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ, ಆರ್‌ಟಿಸಿ, ಆದಾಯ ದೃಢೀಕರಣ ಸೇರಿದಂತೆ ಹಲವು ದೃಢೀಕರಣ ಪತ್ರಗಳು ಹಾಗೂ ಸೇವೆಗಳಿಗಾಗಿ ಜನರು ತಮ್ಮ ಗ್ರಾಮದಿಂದ ಹೋಬಳಿಗಳಲ್ಲಿರುವ ನಾಡ ಕಚೇರಿಗೆ ತೆರಳಬೇಕಾಗಿದೆ. ಇದೇ ರೀತಿ ವಸತಿ, ಕಟ್ಟಡ ಅನುಮತಿ, ಕಂದಾಯ ನಕಲು ಪ್ರತಿಗಳು, ನೀರಿನ ಸಂಪರ್ಕ ಅರ್ಜಿ, ಆಸ್ತಿ ತೆರಿಗೆ ಮನ್ನಾ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಭೂ ಪರಿವರ್ತನೆ ನಿರಾಕ್ಷೇಪಣ ಪತ್ರ, ಗ್ರಾಮ ಪಂಚಾಯತ್ ಆಸ್ತಿಗಳ ಬಾಡಿಗೆ ಪಾವತಿ ಸೇರಿದಂತೆ ಹಲವು ಸೇವೆಗಳು ಪಂಚಾಯತ್‌ಗಳಲ್ಲಿ ಲಭ್ಯವಿದೆ. ಇನ್ನು ಮುಂದೆ ಈ ಎಲ್ಲ ಸೇವೆಗಳು ಒಂದೇ ಸೂರಿನಡಿ ಗ್ರಾಮ ಪಂಚಾಯತ್‌ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರದಲ್ಲಿ ದೊರೆಯಲಿದೆ.

ಮೊಬೈಲ್ ರೀಚಾರ್ಜ್ ಸೌಲಭ್ಯ:

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕಂದಾಯ ಹಾಗೂ ಪಂಚಾಯತ್ ಸೇವೆಗಳು ಮಾತ್ರವಲ್ಲದೆ ಹಲವು ಗ್ರಾಹಕ ಸ್ನೇಹಿ ಸೇವೆಗಳನ್ನು ಸಹ ನೀಡಲಾಗುತ್ತಿದೆ. ಹಲವು ಬಿಲ್‌ಗಳ ಪಾವತಿಯನ್ನು ಈ ಕೇಂದ್ರದಲ್ಲಿ ಮಾಡುವ ಅವಕಾಶ ಕಲ್ಪಿಸಲಾಗಿದೆ. ವಿದ್ಯುತ್ ಬಿಲ್, ದೂರವಾಣಿ ಬಿಲ್, ಜೀವ ವಿಮೆ, ವಾಹನ ವಿಮೆ, ಮೊಬೈಲ್ ರಿಚಾರ್ಜ್, ಡಿಟಿಎಚ್, ಡಾಟಾ ಕಾರ್ಡ್ ರಿಚಾರ್ಜ್, ಬಸ್, ರೈಲು, ವಿಮಾನ ಟಿಕೆಟ್ ಬುಕ್ಕಿಂಗ್, ಹಣ ವರ್ಗಾವಣೆ ಸೇರಿದಂತೆ 17ಗ್ರಾಹಕ ಸ್ನೇಹಿ ಸೇವೆಗಳನ್ನು ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರದಲ್ಲಿಯೇ ಪಡೆಯಬಹುದಾಗಿದೆ. ಇದಕ್ಕಾಗಿ ಗ್ರಾಮ ಪಂಚಾಯತ್‌ನ ಪಂಚತಂತ್ರ ತಂತ್ರಾಶದೊಂದಿಗೆ ನಾಡಕಚೇರಿ ತಂತ್ರಾಂಶ ಮತ್ತು ಭೂಮಿ ತಂತ್ರಾಂಶಗಳನ್ನು ಸಮಗ್ರೀಕರಣಗೊಳಿಸಲಾಗಿದೆ. ಸಾರ್ವಜನಿಕರು ಎಲ್ಲಾ ಸೇವೆಗಳನ್ನು ಪಡೆಯಲು ಬಾಪೂಜಿ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X