Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೈಟೆಕ್ ವೇಶ್ಯಾವಾಟಿಕೆ: ಆರೋಪಿ ಸೆರೆ

ಹೈಟೆಕ್ ವೇಶ್ಯಾವಾಟಿಕೆ: ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ22 July 2016 11:49 PM IST
share
ಹೈಟೆಕ್ ವೇಶ್ಯಾವಾಟಿಕೆ: ಆರೋಪಿ ಸೆರೆ

ಮಂಗಳೂರು, ಜು. 22: ಅಂತರ್‌ಜಾಲದ ಮೂಲಕ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವೊಂದನ್ನು ಇನ್‌ಸ್ಪೆಕ್ಟರ್ ಕಲಾವತಿ ನೇತೃತ್ವದ ಮಹಿಳಾ ಪೊಲೀಸ್ ತಂಡ ಭೇದಿಸಿ ಓರ್ವನನ್ನು ಬಂಧಿಸಿದೆ ಎಂದು ನಗರ ಪೊಲೀಸ್ ಕಮಿಷನರ್ ಚಂದ್ರಶೇಖರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  ಬೆಂಗಳೂರಿನ ಕಾಡುಗೋಡಿ ನಿವಾಸಿ ಶಬರಿ ಯಾನೆ ವಿಕ್ರಮ್ (26) ಬಂಧಿತ ಆರೋಪಿ.
ಜು.21ರಂದು ಹಂಪನಕಟ್ಟೆ ಬಸ್ ನಿಲ್ದಾಣ ಬಳಿಯ ಲಾಡ್ಜ್‌ವೊಂದರ ಒಂದನೆ ಮಹಡಿಯಲ್ಲಿರುವ ರೂಂ. ನಂಬ್ರ 103ರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಕಲಾವತಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು.
ಲಾಡ್ಜ್‌ನಲ್ಲಿ ಸೆರೆ ಸಿಕ್ಕ ಆರೋಪಿ ವಿಕ್ರಮ್‌ನನ್ನು ವಿಚಾರಿಸಿದಾಗ ತಾನು ‘ಲೊಕ್ಯಾಂಟೊ’ ಎಂಬ ವೆಬ್‌ಸೈಟ್‌ನಲ್ಲಿ ಹುಡುಗಿಯರ ಬಗ್ಗೆ ಮಾಹಿತಿ ಹಾಕಿ ಗ್ರಾಹಕರನ್ನು ಆಕರ್ಷಿಸುವ ಮೂಲಕ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ವೇಶ್ಯಾವೃತ್ತಿ ನಡೆಸುತ್ತಿರುವುದಾಗಿ ತಿಳಿಸಿದ್ದಾನೆ.
ವಿಕ್ರಮ್ ಕೆಲವು ವರ್ಷಗಳಿಂದ ಕೆಟರಿಂಗ್ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಬೆಂಗಳೂರು ಹಾಗೂ ಮಂಗಳೂರು ಮತ್ತಿತರ ಕಡೆಗಳಲ್ಲಿ ಯುವತಿಯರನ್ನು ತನ್ನ ಜಾಲಕ್ಕೆ ಸೆಳೆದು ಅವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ. ಈ ಪ್ರಕರಣದಲ್ಲಿ ಈತನೊಂದಿಗೆ ಮಂಜುನಾಥ್ ಯಾನೆ ಮಂಜು ಎಂಬಾತ ಪ್ರಮುಖ ಪಾತ್ರ ವಹಿಸಿದ್ದು, ಇತರ ಇಬ್ಬರು ಮಹಿಳೆಯರೂ ಶಾಮೀಲಾಗಿದ್ದಾರೆ. ಇವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಕಮಿಷನರ್ ಚಂದ್ರಶೇಖರ್ ತಿಳಿಸಿದರು.
ವಿಕ್ರಮ್ ಹಾಗೂ ಮಂಜುನಾಥ್ ತಮ್ಮ ಮೊಬೈಲ್ ಸಂಖ್ಯೆಗಳನ್ನು ‘ಲೊಕ್ಯಾಂಟೊ’ ಎಂಬ ವೆಬ್‌ಸೈಟ್‌ನ ಖಾಸಗಿ ವರ್ಗೀಕೃತ ಜಾಹೀರಾತು ವಿಭಾಗದಲ್ಲಿ ಜಾಹೀರಾತು ಮೂಲಕ ಗ್ರಾಹಕರನ್ನು ವೇಶ್ಯಾವಾಟಿಕೆಗೆ ಆಹ್ವಾನಿಸಿದ್ದು, ‘ಲೊಕ್ಯಾಂಟೊ’ ಕ್ಲಾಸಿಫೈಡ್ಸ್ ವಿರುದ್ಧವೂ ತನಿಖೆ ನಡೆಯುತ್ತಿದ್ದು, ಸೈಬರ್ ಅಪರಾಧಗಳ ತಜ್ಞರ ನೆರವನ್ನು ಕೋರಲಾಗಿದೆ ಎಂದು ಚಂದ್ರಶೇಖರ್ ತಿಳಿಸಿದರು.
ಡಿಸಿಪಿಗಳಾದ ಶಾಂತಾರಾಂ, ಡಾ.ಸಂಜೀವ ಪಾಟೀಲ್ ಮತ್ತು ಎಸಿಪಿ ಉದಯ್ ನಾಯಕ್ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ತಂಡಕ್ಕೆ ಬಹುಮಾನ: ಕಾರ್ಯಾಚರಣೆಯ ನೇತೃತ್ವ ವಹಿಸಿದ ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಕಲಾವತಿಗೆ 2,000 ರೂ. ನಗದು ಹಾಗೂ ಪ್ರಶಂಸಾ ಪತ್ರ ಮತ್ತು ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡ ಎಎಸ್ಸೈ ಪೂರ್ಣಿಮಾ, ಸಿಬ್ಬಂದಿಗೆ ತಲಾ 1500 ನಗದು ಮತ್ತು ಪ್ರಶಂಸ ಪತ್ರವನ್ನು ನೀಡಿ ಪುರಸ್ಕರಿಸುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X