Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 28 ವರ್ಷಗಳ ಬಳಿಕ ಹೆತ್ತ ತಾಯಿಯನ್ನು...

28 ವರ್ಷಗಳ ಬಳಿಕ ಹೆತ್ತ ತಾಯಿಯನ್ನು ಭೇಟಿಯಾದ ದುಬೈ ಸಹೋದರಿಯರು

ಅಪೂರ್ವ ಮಿಲನ

ವಾರ್ತಾಭಾರತಿವಾರ್ತಾಭಾರತಿ23 July 2016 12:19 PM IST
share
28 ವರ್ಷಗಳ ಬಳಿಕ ಹೆತ್ತ ತಾಯಿಯನ್ನು ಭೇಟಿಯಾದ ದುಬೈ ಸಹೋದರಿಯರು

ಹೈದರಾಬಾದ್, ಜು.23: ದುಬೈ ಮೂಲದ ಇಬ್ಬರು ಸಹೋದರಿಯರು ತಮ್ಮ ಭಾರತೀಯ ತಾಯಿಯನ್ನು 28 ವರ್ಷಗಳ ನಂತರ ಭೇಟಿಯಾದ ಭಾವನಾತ್ಮಕ ಕ್ಷಣಕ್ಕೆಹೈದರಾಬಾದ್ ದಕ್ಷಿಣ ಡಿಸಿಪಿ ವಿ.ಸತ್ಯನಾರಾಯಣ ಅವರ ಕಚೇರಿ ಇತ್ತೀಚೆಗೆ ಸಾಕ್ಷಿಯಾಯಿತು.

ಆಯೇಷಾ ಹಾಗೂ ಫಾತಿಮಾ ರಶೀದ್ ಎಂಬ ಸಹೋದರಿಯರು ದುಬೈ ನಿವಾಸಿಗಳಾಗಿದ್ದು, ಚಿಕ್ಕಂದಿನಿಂದಲೇ ತಮ್ಮ ಹೆತ್ತ ತಾಯಿಯಿಂದ ಬೇರ್ಪಟ್ಟಿದ್ದರು. ಆರು ತಿಂಗಳುಗಳ ಹಿಂದೆೆ ಅವರು ತಮ್ಮ ತಾಯಿಯನ್ನು ಕಾಣುವ ಉದ್ದೇಶದಿಂದ ಹೈದರಾಬಾದ್ ನಗರಕ್ಕೆ ಆಗಮಿಸಿ ಡಿಸಿಪಿಯವರ ಸಹಾಯ ಕೋರಿ ನಂತರ ಮತ್ತೆ ದುಬೈಗೆ ಮರಳಿದ್ದರು. ಇತ್ತ ಡಿಸಿಪಿ ನಿರ್ದೇಶನದಂತೆ ಅವರ ತಾಯಿಯನ್ನು ಹುಡುಕುವ ಯತ್ನ ಮುಂದುವರಿಸಿದ ಪೊಲೀಸರು ಬರೋಬ್ಬರಿ ಆರು ತಿಂಗಳುಗಳ ನಂತರ ಸಹೋದರಿಯರ ತಾಯಿ ನಝಿಯಾ ಬೇಗಮ್‌ರನ್ನು ಪತ್ತೆ ಹಚ್ಚಿದ್ದರು.

ಪೊಲೀಸರು ನೀಡಿದ ಮಾಹಿತಿಯಂತೆ ಭಾರತಕ್ಕೆ ಧಾವಿಸಿ ಬಂದ ಸಹೋದರಿಯರು ತಮ್ಮ ಹೆತ್ತ ತಾಯಿಯನ್ನು 28 ವರ್ಷಗಳ ನಂತರ ನೋಡಿ ಗದ್ಗದಿತರಾಗಿ ಭಾವಾವೇಶದಿಂದ ತಾಯಿಯನ್ನು ಮನಸಾರೆ ಬಿಗಿದಪ್ಪಿದರು. ತನಗೆ ತನ್ನ ಈ ಇಬ್ಬರು ಪುತ್ರಿಯರ ಬಗ್ಗೆ ಹೆಚ್ಚು ನೆನಪು ಇಲ್ಲವಾಗಿದ್ದರೂ, ಅವರಲ್ಲಿ ಒಬ್ಬರಿಗೆ ಒಂದು ಕೈಯ್ಯಲ್ಲಿ ಆರು ಬೆರಳುಗಳಿದ್ದುದು ಮಾತ್ರ ನೆನಪಿದೆ ಎಂದು ಆಕೆ ಹೇಳಿದಳು.

ಸಹೋದರಿಯರಲ್ಲಿ ಹಿರಿಯಳಾದ ಆಯೇಷಾ ಹೇಳುವಂತೆ ಅವರ ಹೆತ್ತವರು 1981 ರಲ್ಲಿ ಹೈದರಾಬಾದ್‌ನಲ್ಲಿ ವಿವಾಹವಾಗಿದ್ದರು. ಅವರ ತಾಯಿ ನಝಿಯ ಸ್ವಲ್ಪ ವರ್ಷಗಳ ಕಾಲ ದುಬೈಯಲ್ಲಿ ಪತಿಯೊಂದಿಗಿದ್ದಾಗ ಅಲ್ಲಿ ಅವರಿಬ್ಬರು ಜನಿಸಿದ್ದರು. ಈ ನಡುವೆ ನಝಿಯಾಳನ್ನು ಆಕೆಯ ಗಂಡ ವಿಚ್ಛೇದನ ನೀಡಿ ಭಾರತಕ್ಕೆ ಕಳುಹಿಸಿದ್ದರೆ ಮಕ್ಕಳನ್ನು ತನ್ನ ಬಳಿಯೇ ಇರಿಸಿಕೊಂಡಿದ್ದ.

 ಇತ್ತ ಹೈದರಾಬಾದ್‌ಗೆ ಬಂದ ನಝಿಯಾಳಿಗೆ ಆಕೆಯ ಕುಟುಂಬ ಬೀದರ್‌ನ ಹಣ್ಣು ವ್ಯಾಪಾರಿಯೋರ್ವರೊಂದಿಗೆ ವಿವಾಹ ಮಾಡಿಕೊಟ್ಟಿತ್ತು. ಈ ಮದುವೆಯಿಂದ ನಝಿಯಾಳಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯಿದ್ದಾಳೆ.

ಎರಡು ದಶಕಗಳಿಗೂ ಅಧಿಕ ಸಮಯದ ಬಳಿಕ ತಮ್ಮ ತಾಯಿಯನ್ನು ನೋಡಿದ ಇಬ್ಬರು ಪುತ್ರಿಯರೂ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳಲು ಹಾಗೂ ಆಕೆಯನ್ನು ದುಬೈಗೆ ಕರೆದುಕೊಂಡು ಹೋಗಲು ಬಯಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X