Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ನಾಲ್ಕನೆ ದಿನ ಪೂರೈಸಿದ...

ಉಪ್ಪಿನಂಗಡಿ: ನಾಲ್ಕನೆ ದಿನ ಪೂರೈಸಿದ ಹಿರೇಬಂಡಾಡಿ ಶಾಲಾ ಮಕ್ಕಳ-ಪೋಷಕರ ಧರಣಿ

ವಾರ್ತಾಭಾರತಿವಾರ್ತಾಭಾರತಿ23 July 2016 7:04 PM IST
share
ಉಪ್ಪಿನಂಗಡಿ: ನಾಲ್ಕನೆ ದಿನ ಪೂರೈಸಿದ ಹಿರೇಬಂಡಾಡಿ ಶಾಲಾ ಮಕ್ಕಳ-ಪೋಷಕರ ಧರಣಿ

ಉಪ್ಪಿನಂಗಡಿ, ಜು.23: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿಯಿಂದಾಗಿ ಹಿರೇಬಂಡಾಡಿ ಸರಕಾರಿ ಮಾದರಿ ಹಿ ಪ್ರಾ. ಶಾಲೆಯಿಂದ ಇಬ್ಬರು ಶಿಕ್ಷಕರನ್ನು ವರ್ಗಾಯಿಸಿರುವುದನ್ನು ಪ್ರತಿಭಟಿಸಿ ಮಕ್ಕಳನ್ನು ಶಾಲೆಗೆ ಕಳುಹಿಸದಿರುವ ಪೋಷಕರ ಪ್ರತಿಭಟನೆ ನಾಲ್ಕನೆ ದಿನವಾದ ಶನಿವಾರವೂ ಮುಂದುವರೆದಿದ್ದು, ವರ್ಗಾವಣೆಗೊಂಡ ವಿಜ್ಞಾನ ಶಿಕ್ಷಕರ ಸ್ಥಾನಕ್ಕೆ ಬದಲಿ ವಿಜ್ಞಾನ ಶಿಕ್ಷಕರು ಆಗಮಿಸುವವರೆಗೆ ಬಿಡುಗಡೆಗೊಳಿಸುವುದಿಲ್ಲ ಎಂಬ ಶಿಕ್ಷಣ ಇಲಾಖಾಧಿಕಾರಿಗಳ ಭರವಸೆಗೆ ತೃಪ್ತರಾದ ಪೋಷಕರು ಸೋಮವಾರದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿಗೆ ಸೂಚಿಸಿದ ಘಟನೆ ಶನಿವಾರ ನಡೆದ ಪೋಷಕರ ಸಭೆಯಲ್ಲಿ ನಡೆದಿದೆ.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಕೃಷ್ಣರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ ಸಂಯೋಜಕ ಕುಕ್ಕ ಹಾಗೂ ಸಿಆರ್‌ಪಿ ಅನಂತ , ಶಾಲಾ ಪೋಷಕರ ಆಶಯದಂತೆ ಶಾಲೆಯ ವಿಜ್ಞಾನ ಶಿಕ್ಷಕರ ಅಗತ್ಯತೆಯನ್ನು ಇಲಾಖೆ ಮನಗಂಡಿದ್ದು, ವಿಜ್ಞಾನ ಶಿಕ್ಷಕ ಹುದ್ದೆಯನ್ನು ಕಡಿತಗೊಳಿಸಲಾಗಿಲ್ಲ. ಪ್ರಸಕ್ತ ವಿಜ್ಞಾನ ಶಿಕ್ಷಕರಾಗಿರುವವರನ್ನು ದೀರ್ಘಾವಧಿ ಸೇವೆಯ ನೆಲೆಯಲ್ಲಿ ಬೇರೆ ಶಾಲೆಗೆ ವರ್ಗಾಯಿಸಲಾಗಿದ್ದು, ಈ ಶಾಲೆಗೆ ವಿಜ್ಞಾನ ಶಿಕ್ಷಕರಾಗಿ ಬದಲಿ ಶಿಕ್ಷಕರನ್ನು ನೀಡಲಾಗುವುದು. ಪೋಷಕರ ಅಪೇಕ್ಷೆಯಂತೆ ಬದಲಿ ಶಿಕ್ಷಕರು ಆಗಮಿಸುವವರೆಗೆ ಇಲ್ಲಿನ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆಗೊಳಿಸಲಾಗುವುದಿಲ್ಲ. ವಿದ್ಯಾರ್ಥಿಗಳ ಹಿತವನ್ನು ಇಲಾಖೆ ಹೆಚ್ಚಿನ ಕಾಳಜಿಯಿಂದ ಕಾಪಾಡುತ್ತದೆ ಎಂದು ವಿವರಿಸಿದರು.

ಈ ಬಗ್ಗೆ ಪಂಚಾಯತ್ ಅಧ್ಯಕ ್ಷಹಮ್ಮಬ್ಬ ಶೌಕತ್ ಅಲಿ ಪೋಷಕರ ನಿಲುವೇನೆಂದು ಪ್ರಶ್ನಿಸಿದಾಗ, ಬದಲಿ ವಿಜ್ಞಾನ ಶಿಕ್ಷಕರನ್ನು ಒದಗಿಸುವುದಿದ್ದಲ್ಲಿ ಮುಂದಿನ ಸೋಮವಾರದಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವುದಾಗಿ ಪೋಷಕರು ಒಕ್ಕೊರಲಿನಿಂದ ಘೋಷಿಸಿದರು.

ಒಂದಿಬ್ಬರು ಪೋಷಕರು ಇಬ್ಬರೂ ಶಿಕ್ಷಕರನ್ನು ಉಳಿಸಿಕೊಳ್ಳಬೇಕೆಂದು ಆಗ್ರಹಿಸಿದರೂ, ಸರಕಾರದ ನಿಯಮವನ್ನು ಪಾಲಿಸುವಲ್ಲಿ ಹಿರೇಬಂಡಾಡಿ ಶಾಲೆ ಅತೀತ ಎನ್ನುವಂತಿಲ್ಲ. ಇಬ್ಬರು ಶಿಕ್ಷಕರಲ್ಲಿ ಒಬ್ಬರು ಆದೇಶ ಬಂದಾಕ್ಷಣ ನಿರ್ಗಮಿಸುತ್ತಾರೆ. ಇನ್ನೊಬ್ಬರು ವಿಜ್ಞಾನ ಶಿಕ್ಷಕರು ಬಂದ ಬಳಿಕ ಬಿಡುಗಡೆಗೊಳ್ಳುತ್ತಾರೆ ಎಂದು ಅಂತಿಮ ನಿರ್ಧಾರವನ್ನು ಪೋಷಕರಿಗೆ ಪಂಚಾಯತ್ ಅಧ್ಯಕ್ಷರು ತಿಳಿಸಿದರು.

ಸಭೆಯಲ್ಲಿ ಪಿಡಿಒ ತಿರುಪತಿ, ತಾ.ಪಂ.ಸದಸ್ಯ ಮುಕುಂದ, ಪಂ. ಸದಸ್ಯ ಪ್ರಕಾಶ್‌ರೈ ಬೆಳ್ಳಿಪ್ಪಾಡಿ, ಮುಖ್ಯೋಪಾಧ್ಯಾಯ ಬಾಬು ಸೇರಿದಂತೆ ಊರಿನ ಗಣ್ಯರು, ಪೋಷಕರು ಭಾಗವಹಿಸಿದ್ದರು. ಮಕ್ಕಳನ್ನು ಕಳುಹಿಸದಿರುವ ಪ್ರತಿಭಟನೆ ನಾಲ್ಕನೆ ದಿನಕ್ಕೆ ಕಾಲಿಟ್ಟರೂ, ಶಾಲೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿ ಶನಿವಾರ ನಾಲ್ಕು ಮಕ್ಕಳು ಶಾಲೆಗೆ ಹಾಜರಾದರು. ಗುರುವಾರ ಓರ್ವ ವಿದ್ಯಾರ್ಥಿ ಮಾತ್ರ ಹಾಜರಾಗಿದ್ದರೆ, ಶುಕ್ರವಾರ ಇಬ್ಬರು ವಿದ್ಯಾರ್ಥಿಗಳು ಹಾಜರಾಗಿದ್ದರು. ಶನಿವಾರ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ನಾಲ್ಕಕ್ಕೇರಿದ್ದರೂ ಅವರೆಲ್ಲರೂ ತಮ್ಮ ತಮ್ಮ ಪೋಷಕರೊಡನೆ ಪೊಷಕರ ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X