Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಕಿಯಿರುವ ಪಡಿತರ ಅರ್ಜಿಗಳನ್ನು 3...

ಬಾಕಿಯಿರುವ ಪಡಿತರ ಅರ್ಜಿಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು: ಶಾಸಕ ಜೈನ್

ವಾರ್ತಾಭಾರತಿವಾರ್ತಾಭಾರತಿ23 July 2016 7:24 PM IST
share
ಬಾಕಿಯಿರುವ ಪಡಿತರ ಅರ್ಜಿಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು: ಶಾಸಕ ಜೈನ್

ಮಂಗಳೂರು, ಜು.23: ಬಾಕಿಯಿರುವ ಎಲ್ಲಾ ಪಡಿತರ ಅರ್ಜಿಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು ಎಂದು ಮಾಜಿ ಸಚಿವ, ಶಾಸಕ ಕೆ.ಅಭಯಚಂದ್ರ ಜೈನ್ ಸೂಚಿಸಿದ್ದಾರೆ.

ನಗರದ ತಾಲೂಕು ಪಂಚಾಯತ್‌ನಲ್ಲಿ ಶನಿವಾರ ನಡೆದ ತ್ರೈ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ಬಡ ವ್ಯಕ್ತಿಗೂ ಪಡಿತರ ಸೌಲಭ್ಯಗಳು ಸಿಗಬೇಕು. ನಿರ್ಗತಿಕರಿಗೆ ಈ ಸೌಲಭ್ಯ ದೊರೆಯಬೇಕೇ ಹೊರತು ಸ್ಥಿತಿವಂತರಿಗಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ಹರಿಸಿ ಕೆಲಸ ಮಾಡಬೇಕು. ಅರ್ಹರು ಯಾರೂ ಪಡಿತರ ಚೀಟಿ ಹಾಗೂ ಬಿಪಿಎಲ್ ಪಟ್ಟಿಯಿಂದ ವಂಚಿತರಾಗಬಾರದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ. ಸದಸ್ಯ ವಿನೋದ್ ಬೆಳ್ಳೂರು, ಪಡಿತರ ಚೀಟಿಗಾಗಿ ಅರ್ಜಿ ಹಾಕಿದವರಿಗೆ ಸರ್ವರ್ ಸಮಸ್ಯೆ ಎಂದು ಹಿಂದಕ್ಕೆ ಕಳುಹಿಸಲಾಗುತ್ತಿದೆ. ಒಂದು ವರ್ಷದಿಂದ ಈ ರೀತಿ ವಿಲೇವಾರಿಯಾಗದೆ ಹಲವು ಅರ್ಜಿಗಳು ಬಾಕಿಯಾಗಿವೆ ಎಂದು ಆಪಾದಿಸಿದರು.

ಮಂಗಳೂರು ನಗರಪಾಲಿಕೆಯ ವ್ಯಾಪ್ತಿಯಿಂದ 10 ಕಿ.ಮೀ. ವ್ಯಾಪ್ತಿಯೊಳಗೆ ಹಾಗೂ ಪುರಸಭೆ ಮತ್ತು ನಗರಸಭೆಯಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ಬರ್ ರೆನ್ ಬರುವುದರಿಂದ ಈ ವ್ಯಾಪ್ತಿಯಲ್ಲಿ ಈಗಾಗಲೇ 94 ಸಿಗೆ ಅರ್ಜಿ ಸಲ್ಲಿಸಿದವರು ಆ. 27ರ ಒಳಗಾಗಿ ಪುನಃ 94 ಸಿಸಿಗೆ ಅರ್ಜಿ ಸಲ್ಲಿಸಬೇಕು ಎಂದು ಮೂಡಬಿದಿರೆ ತಹಶೀಲ್ದಾರ್ ಮುಹಮ್ಮದ್ ಇಸಾಕ್ ಹೇಳಿದರು.

ಈ ವೇಳೆ ಮಾತನಾಡಿದ ಶಾಸಕರು ಸುಮಾರು 20 ವರ್ಷಗಳಿಂದ 94 ಸಿ ಹಾಗೂ 94ಸಿಸಿ ಸಮಸ್ಯೆಯಿದೆ. ಆದರೆ, ಬಡವರಿಗೆ ಮಾತ್ರ ಅವರು ವಾಸವಿರುವ ಸರಕಾರಿ ಜಾಗ ಅವರ ಹೆಸರಿಸಲ್ಲಾಗಬೇಕು ಎಂದರು.

ಅಕ್ಷರ ದಾಸೋಹ ಯೋಜನೆಯಡಿ ಒಟ್ಟು 42.66 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಎಪ್ರಿಲ್‌ನಿಂದ ಜೂನ್‌ವರೆಗಿನ ತ್ರೈಮಾಸಿಕ ಪ್ರಗತಿಯಡಿ 23.57 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ವೇಳೆ ಸ್ಪಂದಿಸಿದ ಶಾಸಕರು, ಮಕ್ಕಳಿಗೆ ವಿತರಿಸಲಾಗುವ ಅಕ್ಕಿಯನ್ನು ಪರಿಶೀಲಿಸಿದ ಬಳಿಕ ಶಾಲೆಗಳಿಗೆ ಪೂರೈಸಬೇಕು. ಹಳೆ ಸಂಗ್ರಹ ಅಕ್ಕಿಯನ್ನು ಮನೆಗಳಲ್ಲೂ ಬಳಸುವುದಿಲ್ಲ. ಇಂತಹ ಅಕ್ಕಿಯಿದ್ದರೆ ಶಾಲೆಗಳಿಗೆ ಪೂರೈಕೆ ಮಾಡುವುದು ಸರಿಯಲ್ಲ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಹೊಸ ಅಕ್ಕಿಯನ್ನೇ ಪೂರೈಸಬೇಕು ಎಂದರು.

ಮೂಡುಶೆಡ್ಡೆ ಸರಕಾರಿ ಶಾಲೆಯಿಂದ ಶಿಕ್ಷಕರ ವರ್ಗಾವಣೆ ಕುರಿತು ಅಧಿಕಾರಿಯೊಬ್ಬರು ಸಭೆಯಲ್ಲಿ ಮಂಡಿಸಿದಾಗ ಉತ್ತರಿಸಿದ ಅಭಯಚಂದ್ರ ಜೈನ್ ಅವರು, ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, 245 ವಿದ್ಯಾರ್ಥಿಗಳ ಸಂಖ್ಯೆಯ ಮೂಡುಶೆಡ್ಡೆಯ ಶಾಲೆಯಲ್ಲಿ 4 ಮಂದಿ ಶಿಕ್ಷಕರಿದ್ದಾರೆ. ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳಿರುವ ಶಾಲೆಗೆ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಈ ಶಿಕ್ಷಕರನ್ನು ವರ್ಗಾವಣೆ ಮಾಡಲು ಹೊರಟಿರುವುದು ಸರಿಯಲ್ಲ. ಕೆಡಿಪಿ ಸಭೆಯಲ್ಲಾದ ನಿರ್ಣಯವನ್ನು ಸಂಬಂಧಪಟ್ಟವರು ಡಿಡಿಪಿಐ ಅವರಿಗೆ ತಿಳಿಸಲು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ಮೊಯ್ದೀನ್ ಬಾವ, ತಾ.ಪಂ. ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ, ಮೂಡುಬಿದಿರೆ ತಹಶೀಲ್ದಾರ್ ಮುಹಮ್ಮದ್ ಇಸಾಕ್, ಜಿ.ಪಂ. ಸದಸ್ಯರಾದ ಯು.ಪಿ. ಇಬ್ರಾಹಿಂ, ಜನಾರ್ದನ ಗೌಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X