Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಸಂಸ್ಥೆಯ ವಿಶ್ವಸ್ತ ನಿಧಿಗೆ ದೇಣಿಗೆ...

ವಿಶ್ವಸಂಸ್ಥೆಯ ವಿಶ್ವಸ್ತ ನಿಧಿಗೆ ದೇಣಿಗೆ ನೀಡಿದ ಮೊದಲ ರಾಷ್ಟ್ರ ಭಾರತ

ವಾರ್ತಾಭಾರತಿವಾರ್ತಾಭಾರತಿ23 July 2016 11:52 PM IST
share

ವಿಶ್ವಸಂಸ್ಥೆ, ಜು.23: ಶಾಂತಿಪಾಲನಾ ಪಡೆಯ ಯೋಧರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಪರಿಹಾರ ವನ್ನೊದಗಿಸಲು ರೂಪಿಸಲಾಗಿರುವ ವಿಶ್ವಸಂಸ್ಥೆಯ ವಿಶ್ವಸ್ತ ನಿಧಿಗೆ ಭಾರತವು ಒಂದು ಲಕ್ಷ ಡಾಲರ್ ದೇಣಿಗೆಯನ್ನು ನೀಡಿದೆ. ತನ್ಮೂಲಕ ಈ ನಿಧಿಗೆ ದೇಣಿಗೆ ನೀಡಿದ ಮೊದಲ ರಾಷ್ಟ್ರವೆನಿಸಿಕೊಂಡಿದೆ.

ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಬಾನ್ ಕಿ-ಮೂನ್ ಅವರ ಉಪವಕ್ತಾರ ಫರ್ಹಾನ್ ಹಕ್ ಅವರು ಶುಕ್ರವಾರ ಸುದ್ದಿಗಾರರಿಗೆ ಈ ವಿಷಯವನ್ನು ತಿಳಿಸಿದರು.
ಭಾರತವು ಮೊದಲಿನಿಂದಲೂ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಕಳುಹಿಸುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ಪ್ರಸ್ತುತ ಅದು ವಿಶ್ವಸಂಸ್ಥೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಿಲಿಟರಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ಒದಗಿಸಿರುವ ಎರಡನೆಯ ರಾಷ್ಟ್ರವಾಗಿದೆ.

ಈ ದೇಣಿಗೆಯೊಂದಿಗೆ ಭಾರತ ಸರಕಾರವು ವಿಶ್ವಸಂಸ್ಥೆಯ ನಾಗರಿಕ ಮತ್ತು ಮಿಲಿಟರಿ ಸಿಬ್ಬಂದಿಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿರುವವರ ನೆರವಿಗೆ ಧಾವಿಸುವ ನಮ್ಮ ಸಂತ್ರಸ್ತ ಕೇಂದ್ರಿತ ಅಭಿಯಾನಕ್ಕೆ ತನ್ನ ಕಟ್ಟಾ ಬದ್ಧತೆಯನ್ನು ಪ್ರದರ್ಶಿಸಿದೆ. ಈ ದೇಣಿಗೆಗಾಗಿ ನಾವು ಭಾರತಕ್ಕೆ ತುಂಬ ಆಭಾರಿಯಾಗಿದ್ದೇವೆ ಎಂದು ವಿಶ್ವಸಂಸ್ಥೆಯ ಕ್ಷೇತ್ರ ಬೆಂಬಲ ವಿಭಾಗ(ಡಿಎಫ್‌ಎಸ್)ದ ಅಧೀನ ಕಾರ್ಯದರ್ಶಿ ಅತುಲ್ ಖರೆ ಅವರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಈ ವಿಶ್ವಸ್ತ ನಿಧಿಯನ್ನು ಸ್ಥಾಪಿಸಿರುವ ವಿಶ್ವಸಂಸ್ಥೆಯ ಸಚಿವಾಲಯವು ಉದಾರ ದೇಣಿಗೆಗಳನ್ನು ನೀಡುವಂತೆ ಸದಸ್ಯ ರಾಷ್ಟ್ರಗಳನ್ನು ಕೋರಿದೆ.
ತನ್ನ ಶಾಂತಿಪಾಲಕರಿಂದ,ನಿರ್ದಿಷ್ಟವಾಗಿ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್‌ನಲ್ಲಿ ಕರ್ತವ್ಯ ನಿರತ ಸಿಬ್ಬಂದಿಯಿಂದ ಸ್ಥಳೀಯ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಿಂದಾಗಿ ವಿಶ್ವಸಂಸ್ಥೆಯು ಭಾರಿ ಟೀಕೆಗಳಿಗೆ ಗುರಿಯಾಗಿತ್ತು.
2016ರಲ್ಲಿ ಈವರೆಗೆ ಇಂತಹ ಲೈಂಗಿಕ ದೌರ್ಜನ್ಯದ 44 ದೂರುಗಳನ್ನು ವಿಸ್ವಸಂಸ್ಥೆಯು ಸ್ವೀಕರಿಸಿದೆ. 2015ರಲ್ಲಿ ಇಂತಹ 69 ದೂರುಗಳು ದಾಖಲಾಗಿದ್ದವು. ಹೆಮ್ಮೆಯ ವಿಷಯವೆಂದರೆ ಶಾಂತಿಪಾಲನಾ ಪಡೆಗೆ ನಿಯೋಜಿತ ಭಾರತೀಯ ಯೋಧರಾರೂ ಈವರೆಗೆ ಇಂತಹ ಆರೋಪಕ್ಕೊಳಗಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X