‘ಬೆಲೆ ಏರಿಕೆ ನಿಯಂತ್ರಿಸಲು ಸರಕಾರ ವಿಫಲ’
ವಿಟ್ಲ, ಜು.23: ಆಹಾರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನ ವಿರೋಧಿ ನೀತಿ ಖಂಡಿಸಿ ಸಿಪಿಎಂ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಪ್ರಚಾರಾಂದೋಲನ ಹಾಗೂ ಪ್ರತಿಭಟನೆ ಪ್ರಯುಕ್ತ ಶನಿವಾರ ಬಂಟ್ವಾಳದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪಕ್ಷದ ಪ್ರಮುಖರಾದ ಸಂಜೀವ ಬಂಗೇರ, ಜೆ. ಬಾಲಕೃಷ್ಣ ಶೆಟ್ಟಿ, ವಾಸುಗಟ್ಟಿ, ಬಿ. ನಾರಾಯಣ, ರಾಮಣ್ಣ ವಿಟ್ಲ, ಉದಯ ಕುಮಾರ್ ಪಾಲ್ಗೊಂಡಿದ್ದರು.
Next Story