Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾವಿರಾರು ಶಾಲೆ, ಸೇವಾಸಂಸ್ಥೆಗಳ...

ಸಾವಿರಾರು ಶಾಲೆ, ಸೇವಾಸಂಸ್ಥೆಗಳ ಮುಚ್ಚುಗಡೆಗೆ ಎರ್ದೊಗಾನ್ ಆದೇಶ

ಟರ್ಕಿ: ವಿಫಲ ಬಂಡಾಯದ ‘ರೂವಾರಿ’ ಗುಲೆನ್ ಸೋದರಳಿಯನ ಬಂಧನ

ವಾರ್ತಾಭಾರತಿವಾರ್ತಾಭಾರತಿ24 July 2016 9:35 PM IST
share
ಸಾವಿರಾರು ಶಾಲೆ, ಸೇವಾಸಂಸ್ಥೆಗಳ ಮುಚ್ಚುಗಡೆಗೆ ಎರ್ದೊಗಾನ್ ಆದೇಶ

   ಅಂಕಾರಾ,ಜು.24: ವಿಫಲ ಸೇನಾ ಕ್ರಾಂತಿಯ ಬಳಿಕ ಟರ್ಕಿ ಅಧ್ಯಕ್ಷ ತಯ್ಯಿಪ್ ಎರ್ದೊಗಾನ್ ಆಡಳಿತದ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸಿದ್ದು, ದೇಶಾದ್ಯಂತ ಸಹಸ್ರಾರು ಖಾಸಗಿಶಾಲೆಗಳು, ಸೇವಾಸಂಸ್ಥೆಗಳು ಮತ್ತಿತರ ಸಂಸ್ಥಾಪನೆಗಳನ್ನು ಮುಚ್ಚುಗಡೆಗೊಳಿಸುವಂತೆ ಆದೇಶಿಸಿದ್ದಾರೆ.

 ಮುಚ್ಚುಗಡೆಗೆ ಆದೇಶಿಸಲಾದ ಶಾಲೆಗಳು ಹಾಗೂ ಸೇವಾ ಸಂಸ್ಥೆಗಳು ವಿಫ ಸೇನಾ ಕ್ರಾಂತಿಯ ಸೂತ್ರಧಾರಿಯೆನ್ನಲಾದ ಇಸ್ಲಾಮಿಕ್ ಧರ್ಮಗುರು ಫತೇವುಲ್ಲಾ ಗುಲೆನ್ ಜೊತೆ ನಂಟು ಹೊಂದಿವೆಯನ್ನಲಾಗಿದೆ. ಟರ್ಕಿಯಲ್ಲಿ ಅಪಾರ ಸಂಖ್ಯೆಯ ಬೆಂಬಲಿಗರನ್ನು ಹೊಂದಿರುವ ಗುಲೆನ್, ಸೇನಾ ಬಂಡಾಯದ ಹಿಂದೆ ತನ್ನ ಯಾವುದೇ ಪಾತ್ರ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.ಗುಲೆನ್ ಪ್ರಸ್ತುತ ಅಮೆರಿಕದಲ್ಲಿ ನೆಲೆಸಿದ್ದಾರೆ.

ಗುಲೆನ್ ಅವರ  ಸೋದರಳಿಯನ್ನು ಕೂಡಾ ಟರ್ಕಿಯ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ. ಗುಲೆನ್ ಸೋದರಳಿಯ ಮುಹಮ್ಮದ್ ಸಯೀದ್ ಗುಲೆನ್‌ನನ್ನು ಟರ್ಕಿಯ, ಎರ್ಝುರುಮ್‌ನಲ್ಲಿ ಬಂಧಿಸಲಾಗಿದ್ದು, ವಿಚಾರಣೆಗಾಗಿ ಅಂಕಾರಕ್ಕೆ ಕರೆತರಲಾಗಿದೆ.

 ಈ ಮಧ್ಯೆ ಸೇನಾ ಬಂಡಾಯದ ವೇಳೆ ಅಂಕಾರಾದಲ್ಲಿರುವ ವಿಶೇಷ ಪಡೆಗಳ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿ, 42 ಪೊಲೀಸ್ ಅಧಿಕಾರಿಗಳನು ಹತ್ಯೆಗೈದ ಆರೋಪ ಎದುರಿಸುತ್ತಿರುವ ವಾಯುಪಡೆ ಪೈಲಟ್ ಹಸನ್ ಕಾರಾಕುಸ್‌ನನ್ನು ಕೂಡಾ ಟರ್ಕಿಯಲ್ಲಿ ಬಂಧಿಸಲಾಗಿದೆಯೆಂದು ಮೂಲಗಳು ತಿಳಿಸಿವೆ.

  ವಿಫಲ ಸೇನಾ ಬಂಡಾಯದ ಹೆಸರಿನಲ್ಲಿ ಎರ್ದೊಗಾನ್ ಅವರು ತನ್ನ ವಿರುದ್ಧದ ಭಿನ್ನಮತವನ್ನು ಮಟ್ಟಹಾಕುತ್ತಿದ್ದಾರೆಂದು ಅನೇಕ ಮಂದಿ ರಾಜಕೀಯ ವೀಕ್ಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಎರ್ದೊಗಾನ್ ಜಾರಿಗೊಳಿಸಿದ ನ್ಯಾಯಾಂಗ ಮಸೂದೆಯ ಕರಡನ್ನು ನ್ಯಾಯಾಧೀಶರು ಹಾಗೂ ಪ್ರಾಸಿಕ್ಯೂಟರ್‌ಗಳ ಅಸೋಸಿಯೇಶನ್ ಬಲವಾಗಿ ಟೀಕಿಸಿತ್ತು.

  ಸೇನಾಕ್ರಾಂತಿಯ ಯತ್ನವನ್ನು ಖಂಡಿಸಿ ಟರ್ಕಿಯ ಪ್ರಧಾನ ಪ್ರತಿಪಕ್ಷವಾದ ಸಿಎಚ್‌ಪಿಯ ಸಹಸ್ರಾರು ಬೆಂಬಲಿಗರು ರವಿವಾರ ಇಸ್ತಾಂಬುಲ್‌ನ ಹೃದಯಭಾಗವಾದ ತಾಕ್ಸಿಮ್ ಚೌಕದಲ್ಲಿ ಪ್ರತಿಭಟನೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X