Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರ, ರಾಜ್ಯ ಸರಕಾರಗಳ ನೀತಿಯನ್ನು...

ಕೇಂದ್ರ, ರಾಜ್ಯ ಸರಕಾರಗಳ ನೀತಿಯನ್ನು ಖಂಡಿಸಿ ಸಿಪಿಎಂನಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ25 July 2016 11:34 PM IST
share
ಕೇಂದ್ರ, ರಾಜ್ಯ ಸರಕಾರಗಳ ನೀತಿಯನ್ನು ಖಂಡಿಸಿ ಸಿಪಿಎಂನಿಂದ ಧರಣಿ

ಮಂಗಳೂರು, ಜು.25: ಬೆಲೆ ಏರಿಕೆಯನ್ನು ತಡೆಗಟ್ಟಲು, ಸರ್ವರಿಗೂ ಉದ್ಯೋಗವನ್ನು ಒದಗಿಸಲು, ಕನಿಷ್ಟ ಕೂಲಿಯನ್ನು ದಿನಕ್ಕೆ 600ಕ್ಕೆ ಹೆಚ್ಚಿಸಲು, ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸಲು ಮೊದಲಾದ ಬೇಡಿಕೆಗಳನ್ನು ಒತ್ತಾಯಿಸಿ ಹಾಗೂ ಕೇಂದ್ರ, ರಾಜ್ಯ ಸರಕಾರಗಳ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಸಿಪಿಎಂ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಮುಖಂಡ ಕೆ.ಆರ್. ಶ್ರೀಯಾನ್, 2 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿ, ಕೇಂದ್ರದ ಬಿಜೆಪಿ ಸರಕಾರ ದೊಡ್ಡ ಸಾಧನೆಯನ್ನು ತಾವು ಮಾಡಿದ್ದೇವೆಂಬಂತೆ 1200 ಕೋಟಿ ರೂ. ಖರ್ಚು ಮಾಡಿ ಪ್ರಚಾರ ನಡೆಸುತ್ತಿದೆ. ವಾಸ್ತವವಾಗಿ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ನೀಡಿದ ಯಾವೊಂದು ಭರವಸೆಗಳನ್ನು ಈಡೇರಿಸಿಲ್ಲ. ಬೆಲೆ ಇಳಿಸಿ, ಕಡಿಮೆ ದರದಲ್ಲಿ ಜನರಿಗೆ ಆಹಾರ ವಸ್ತುಗಳನ್ನು ಒದಗಿಸುತ್ತೇವೆ. ವರ್ಷಕ್ಕೆ 2 ಕೋಟಿಯಂತೆ ನಿರುದ್ಯೋಗಿಗಳಿಗೆ ಉದ್ಯೋಗಗಳನ್ನು ಒದಗಿಸುತ್ತೇವೆ. ದೇಶದ ಹೊರಗಿರುವ ಕಪ್ಪು ಹಣವನ್ನು ವಾಪಾಸು ತಂದು ಪ್ರತಿ ಕುಟುಂಬದ ಬ್ಯಾಂಕು ಖಾತೆಗೂ 15 ಲಕ್ಷ ರೂ. ಜಮೆ ಮಾಡುತ್ತೇವೆ. ಭ್ರಷ್ಟಾಚಾರ ಸಂಪೂರ್ಣ ನಿವಾರಿಸುತ್ತೇನೆ ಎಂದು ನೀಡಿದ ಆಶ್ವಾಸನೆಗಳಲ್ಲಿ ಯಾವುದೂ ಈಡೇರಿಲ್ಲ ಎಂದು ಹೇಳಿದರು.

ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಮಾತನಾಡಿ, ನಾಚಿಕೆಗೆಟ್ಟವರು ಊರಿಗೆ ದೊಡ್ಡವರು ಎಂಬ ತುಳು ಗಾದೆಯಂತಾಗಿದೆ ಕೇಂದ್ರ ಸರಕಾರದ ಸ್ಥಿತಿ. ಹಿಂದೆ ಗುಜರಾತಿನಲ್ಲಿ ಮುಸ್ಲಿಮರ ಮಾರಣಹೋಮ ಮಾಡಿದಂತೆ ಇವತ್ತು ಗುಜರಾತಿನಲ್ಲಿ ದಲಿತರ ಮೇಲೆ ತೀವ್ರ ಹಲ್ಲೆಗಳಾಗುತ್ತಿವೆ. ಬಿಜೆಪಿ ಆಳ್ವಿಕೆಯಲ್ಲಿ ಇತರ ರಾಜ್ಯಗಳಲ್ಲೂ ದಲಿತರು, ಆದಿವಾಸಿಗಳು ಹಾಗೂ ಮುಸ್ಲಿಮರ ಮೇಲೆ ಹಲ್ಲೆ, ಅತ್ಯಾಚಾರಗಳಾಗುತ್ತಿವೆ. ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗರ ಕೊಲೆಯ ಹಿಂದೆ ಹಿಂದೂ ಕೋಮುವಾದಿಗಳ ಕೈಗಳಿವೆ. ಚಿಕ್ಕಮಗಳೂರು ಡಿವೈಎಸ್ಪಿ ಆತ್ಮಹತ್ಯೆಯ ಹಿಂದೆ ಕೋಮುವಾದಿಗಳ ಪಾತ್ರವಿದೆ. ರಾಜ್ಯ ಸರಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವೂ ತಮ್ಮ ಒಳಗಿನ ಕಚ್ಚಾಟದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯು.ಬಿ. ಲೋಕಯ್ಯ, ಯಾದವ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಬಿ.ಎಂ.ಭಟ್, ಕೃಷ್ಣಪ್ಪ ಕೊಂಚಾಡಿ ಉಪಸ್ಥಿತರಿದ್ದರು.

ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್‌ಕುಮಾರ್ ಬಜಾಲ್ ವಂದಿಸಿದರು. ಪ್ರತಿಭಟನೆಗೂ ಮೊದಲು ಪಕ್ಷದ ಕಾರ್ಯಕರ್ತರು ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X