Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಂಭೀರ ಪರಿಣಾಮಗಳನ್ನು ಎದುರಿಸಿ:...

ಗಂಭೀರ ಪರಿಣಾಮಗಳನ್ನು ಎದುರಿಸಿ: ಭಾರತಕ್ಕೆ ಚೀನಿ ಮಾಧ್ಯಮದ ‘ಎಚ್ಚರಿಕೆ ’

ಚೀನಿ ಪತ್ರಕರ್ತರ ವೀಸಾ ವಿವಾದ

ವಾರ್ತಾಭಾರತಿವಾರ್ತಾಭಾರತಿ25 July 2016 11:59 PM IST
share

ಬೀಜಿಂಗ್,ಜು.25: ಚೀನಾದ ಮೂವರು ಪತ್ರಕರ್ತರಿಗೆ ವೀಸಾ ಅವಧಿಯನ್ನು ವಿಸ್ತರಿಸಲು ನಿರಾಕರಿಸಿದ ಭಾರತ ಸರಕಾರದ ಕ್ರಮವನ್ನು ಅಲ್ಲಿನ ಸರಕಾರಿ ಸ್ವಾಮ್ಯದ ದಿನಪತ್ರಿಕೆಯೊಂದು ಕಟುವಾಗಿ ಟೀಕಿಸಿದೆ. ಒಂದು ವೇಳೆ ಅಣುಪೂರೈಕೆದಾರರ ಬಳಗ (ಎನ್‌ಎಸ್‌ಜಿ)ಕ್ಕೆ ಭಾರತದ ಸೇರ್ಪಡೆಯನ್ನು ಬೆಂಬಲಿಸಲು ಚೀನಾವು ನಿರಾಕರಿಸಿದ್ದಕ್ಕಾಗಿ ಭಾರತವು ಈ ಕ್ರಮ ಕೈಗೊಂಡಿದ್ದಲ್ಲಿ, ಅದರ ಪರಿಣಾಮ ಗಂಭೀರವಾಗಲಿದೆಯೆಂದು ಅದು ಎಚ್ಚರಿಕೆ ನೀಡಿದೆ.

‘‘ಎನ್‌ಎಸ್‌ಜಿಗೆ ಭಾರತದ ಸೇರ್ಪಡೆಗೆ ಚೀನಾ ವಿರೋಧಿಸಿರುವ ಹಿನ್ನೆಲೆಯಲ್ಲಿ ಅದು ಈ ರೀತಿಯ ಪ್ರತೀಕಾರಕ್ರಮವನ್ನು ಕೈಗೊಂಡಿದೆಯೆಂಬ ಸಂದೇಹಗಳು ಸುಳಿದಾಡುತ್ತಿವೆ. ಒಂದು ವೇಳೆ ಹೊಸದಿಲ್ಲಿಯು ನಿಜವಾಗಿಯೂ ಎನ್‌ಎಸ್‌ಜಿ ಸದಸ್ಯತ್ವ ವಿವಾದಕ್ಕೆ ಸಂಬಂಧಿಸಿ ಈ ಪ್ರತೀಕಾರವನ್ನು ಕೈಗೊಂಡಿದೆಯೆಂದಾದಲ್ಲಿ, ಅದರ ಪರಿಣಾಮಗಳು ಗಂಭೀರವಾಗಲಿವೆ’’ ಎಂದು ಗ್ಲೋಬಲ್ ಟೈಮ್ಸ್ ಪತ್ರಿಕೆಯು ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

ಭಾರತದಲ್ಲಿ ಚೀನಾದ ಸರಕಾರಿ ಸುದ್ದಿಸಂಸ್ಥೆ ಕ್ಸಿನುವಾದ ಪರವಾಗಿ ಕೆಲಸ ಮಾಡುತ್ತಿದ್ದ ಮೂವರು ಚೀನಿ ಪತ್ರಕರ್ತರ ವೀಸಾ ಅವಧಿಯನ್ನು ವಿಸ್ತರಿಸಲು ಕೇಂದ್ರ ಸರಕಾರ ನಿರಾಕರಿಸಿರುವುದು ಬೀಜಿಂಗ್‌ನ ಕೆಂಗಣ್ಣಿಗೆ ಕಾರಣವಾಗಿದೆ.

ಕ್ಸಿನವಾದ ದಿಲ್ಲಿ ಬ್ಯೂರೋ ಮುಖ್ಯಸ್ಥ ವೂ ಕ್ವಿಯಾಂಗ್ ಹಾಗೂ ಮುಂಬೈನ ಇನ್ನಿಬ್ಬರು ವರದಿಗಾರರಾದ ಟಾಂಗ್ ಲು ಹಾಗೂ ಮಾ ಕ್ವಿಯಾಂಗ್ ಅವರ ವೀಸಾ ಅವಧಿಯು ಈ ತಿಂಗಳ ಅಂತ್ಯದಲ್ಲಿ ಕೊನೆಗೊಳ್ಳಲಿದೆ. ತಮ್ಮ ಉತ್ತರಾಧಿಕಾರಿಗಳು ಬರುವವರೆಗೆ ವೀಸಾ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದರು.

ಚೀನಾದ ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ಕ್ಸಿನುವಾದ ಮೂವರು ಪತ್ರಕರ್ತರಿಗೆ ವೀಸಾ ವಿಸ್ತರಣೆಯನ್ನು ನಿರಾಕರಿಸಿದ ಭಾರತದ ಕ್ರಮವು ಉಚ್ಚಾಟನೆಗೆ ಸಮಾನವಾಗಿದೆಯೆಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ. ಈ ಮೂವರು ಪತ್ರಕರ್ತರು, ನಕಲಿ ಹೆಸರಿನಲ್ಲಿ ದಿಲ್ಲಿ ಹಾಗೂ ಮುಂಬೈನಲ್ಲಿ ಪ್ರವೇಶ ನಿರ್ಬಂಧವಿರುವ ಹಲವು ಇಲಾಖೆಗಳಿಗೆ ಭೇಟಿ ನೀಡಿದ್ದರೆಂದು ಕೆಲವು ಭಾರತೀಯ ಮಾಧ್ಯಮಗಳು ಆರೋಪಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X