Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರು ನಮ್ಮನ್ನು ಜೀವಂತ ಸುಟ್ಟು...

ಗೋರಕ್ಷಕರು ನಮ್ಮನ್ನು ಜೀವಂತ ಸುಟ್ಟು ಬಿಡುತ್ತಿದ್ದರು

ಗುಜರಾತ್ ದಲಿತ ಸಂತ್ರಸ್ತರ ಆರೋಪ

ವಾರ್ತಾಭಾರತಿವಾರ್ತಾಭಾರತಿ26 July 2016 8:39 AM IST
share
ಗೋರಕ್ಷಕರು ನಮ್ಮನ್ನು ಜೀವಂತ ಸುಟ್ಟು ಬಿಡುತ್ತಿದ್ದರು

ರಜೂಲಾ (ಗುಜರಾತ್), ಜು.26: ಅಮ್ರೇಲಿಯ ರಜೂಲಾ ಪಟ್ಟಣದಲ್ಲಿ ಇತ್ತೀಚೆಗೆ ದಲಿತರ ಮೇಲೆ ಗೋರಕ್ಷಕರು ನಡೆಸಿದ ದಾಳಿಯ ವೇಳೆ, ದಾಳಿಕೋರರು ಏಳು ಮಂದಿ ದಲಿತರನ್ನು ಒಂದು ಕೊಠಡಿಯಲ್ಲಿ ಕೂಡಿಹಾಕಿ ಜೀವಂತವಾಗಿ ಸುಟ್ಟುಹಾಕಲು ಸಂಚು ಹೂಡಿದ್ದರು ಎಂಬ ಆತಂಕಕಾರಿ ವಿಷಯ ಇದೀಗ ಬಹಿರಂಗವಾಗಿದೆ.

ಸ್ವತಃ ಸಂತ್ರಸ್ತರೇ ಈ ಸ್ಫೋಟಕ ವಿಷಯ ಬಹಿರಂಗಗೊಳಿಸಿದ್ದಾರೆ. ದಲಿತ ಸಮುದಾಯದ ಕೆಲ ಮಂದಿ ಪೊಲೀಸರಿಗೆ ಸಕಾಲದಲ್ಲಿ ಮಾಹಿತಿ ನೀಡಿದಾಗ ಅವರು ತಕ್ಷಣ ಬಂದಿದ್ದರಿಂದ ನಾವು ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

ಸುಮಾರು 30 ಮಂದಿ ಇದ್ದ ಗೋರಕ್ಷಕರು ಮೇ 22ರಂದು ಕಬ್ಬಿಣದ ಪೈಪ್, ಬೇಸ್‌ಬಾಲ್ ಬ್ಯಾಟ್ ಹಾಗೂ ಖಡ್ಗದಿಂದ ಸುಮಾರು ಎರಡೂವರೆ ಗಂಟೆ ಕಾಲ ದಾಳಿ ನಡೆಸಿದ್ದರು. ಸಂತ್ರಸ್ತರಲ್ಲಿ ಒಬ್ಬರಾದ ಪ್ರವೀಣ್ ಅಲಿಯಾಸ್ ರವಿ ಝಖಾಡ ಈ ಭೀಕರ ಘಟನೆಯನ್ನು ವಿವರಿಸಿ, ನಾಲ್ಕು ಮಂದಿ ಗೋರಕ್ಷಕರು ನಮ್ಮ ಕೈ ಹಾಗೂ ಕಾಲುಗಳನ್ನು ಹಿಡಿದುಕೊಂಡಾಗ ಇತರರು ಬ್ಯಾಟ್ ಹಾಗೂ ಕಬ್ಬಿಣದ ರಾಡ್‌ನಿಂದ ಹೊಡೆಯುತ್ತಿದ್ದರು. ಒಂದು ಒಂದು ಶಬ್ದ ಮಾತನಾಡಿದರೂ, ಮತ್ತಷ್ಟು ಹೊಡೆಯುತ್ತಿದ್ದರು. ಇದು ಸಾಲದೆಂಬಂತೆ, ತಮ್ಮಲ್ಲೇ ಕೆಲವರಿಗೆ ಸೀಮೆ ಎಣ್ಣೆ ತರಲು ಹೇಳಿದರು. ಆ ಸಣ್ಣ ಕೊಠಡಿಯಲ್ಲೇ ನಮ್ಮನ್ನು ಕೂಡಿಹಾಕಿ ಬೆಂಕಿ ಹಚ್ಚುವುದು ಅವರ ಉದ್ದೇಶವಾಗಿತ್ತು. ಇಬ್ಬರು ಸೀಮೆಎಣ್ಣೆ ತರಲು ಅಲ್ಲಿಂದ ಹೋದುದನ್ನು ನೋಡಿದ್ದೇನೆ ಎಂದರು.

ರವಿಯ ತಂದೆ ಅದನ್ನು ನೋಡಿ, ಸಮುದಾಯದ ಇತರ ಮುಖಂಡರಿಗೆ ವಿವರಿಸಿದರು. ಅವರು ಪೊಲೀಸರಿಗೆ ಮಾಹಿತಿ ನೀಡಿದರು. ನಾವು ಜೀವದ ಆಸೆ ಬಿಟ್ಟಿದ್ದೆವು. ಆದರೆ ಪೊಲೀಸರು ಹಾಗೂ ಸಮುದಾಯದ ಮುಖಂಡರು ಸಕಾಲಕ್ಕೆ ಬಂದರು ಎಂದು ಬಲಗೈ ಮುರಿತಕ್ಕೆ ಒಳಗಾಗಿರುವ ಅವರು ಹೇಳಿದರು.
ಘಟನೆ ನಡೆದು ಎರಡು ತಿಂಗಳ ಬಳಿಕ ಕೂಡಾ ಅವರಿಗೆ ನಡೆಯಲು ಆಗುತ್ತಿಲ್ಲ. ಮತ್ತೊಬ್ಬ ಸಂತ್ರಸ್ತ ದಿಲೀಪ್ ಬಬಾರಿಯಾ ಅಂತೂ ಮಧ್ಯರಾತ್ರಿಯಲ್ಲಿ ಎದ್ದು, ನಮ್ಮನ್ನು ಹೊಡೆಯಬೇಡಿ ಎಂದು ಕಿರುಚಿಕೊಳ್ಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X