Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಮಸ್ಥರಿಂದ ಹೆದ್ದಾರಿಯಲ್ಲೇ...

ಗ್ರಾಮಸ್ಥರಿಂದ ಹೆದ್ದಾರಿಯಲ್ಲೇ ಕೃಷಿಕಾರ್ಯ!

ರಸ್ತೆ ಅವ್ಯವಸ್ಥೆ ಖಂಡಿಸಿ ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 July 2016 2:17 PM IST
share
ಗ್ರಾಮಸ್ಥರಿಂದ ಹೆದ್ದಾರಿಯಲ್ಲೇ ಕೃಷಿಕಾರ್ಯ!

ಮಧುಬನಿ, ಜು.26: ಬಿಹಾರದ ಮಧುಬನಿ ಜಿಲ್ಲೆಯ ಗಂಗೌರ್ ಗ್ರಾಮದ ಜನರು ತಮ್ಮ ಗ್ರಾಮದ ಪ್ರಮುಖ ರಸ್ತೆಯೊಂದರ ದುಸ್ಥಿತಿಯನ್ನು ಪ್ರತಿಭಟಿಸಲು ರಾಷ್ಟ್ರೀಯ ಹೆದ್ದಾರಿಯಲ್ಲೇ ಕೃಷಿ ಚಟುವಟಿಕೆ ನಡೆಸಿ ಅಧಿಕಾರಿಗಳಿಗೆ ಸಡ್ಡು ಹೊಡೆದಿದ್ದಾರೆ. ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ತಾವು ಮಾಡಿದ ಸತತ ಮನವಿಗಳಿಗೆ ಸ್ಪಂದಿಸದೇ ಇದ್ದ ಸ್ಥಳೀಯಾಡಳಿತ ಹಾಗೂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಅವರು ಇಂತಹ ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಚಕಿಯಾದಿಂದ ಆರಂಭಗೊಂಡು ತಾಮರ್ಹಿ ಹಾಗೂ ಜಯನಗರ ಆಗಿ ನರಹಿಯಾದಲ್ಲಿ ಕೊನೆಗೊಳ್ಳುವ ರಾಷ್ಟ್ರೀಯ ಹೆದ್ದಾರಿ 104ರ 160 ಕಿ.ಮೀ. ಉದ್ದದ ರಸ್ತೆಯ ದಯನೀಯ ಸ್ಥಿತಿಯಿಂದ ಹಲವು ವರ್ಷಗಳಿಂದ ಗ್ರಾಮಸ್ಥರು ಕಂಗೆಟ್ಟಿದ್ದಾರೆ. ರಸ್ತೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ಹಲವಾರು ಅಪಘಾತಗಳಿಗೂ ಕಾರಣವಾಗಿದೆಯಲ್ಲದೆ ಪಾದಚಾರಿಗಳಿಗೂ ಸಂಚರಿಸಲು ಅಸಾಧ್ಯವಾಗಿದೆ.

ಈ ರಸ್ತೆಯ ಕೆಲವೊಂದು ಕಡೆ ಹೊಂಡಗಳು ಎರಡು-ಮೂರು ಅಡಿಗಳಷ್ಟು ಆಳವಾಗಿವೆ ಎಂದು ಗ್ರಾಮಸ್ಥರು ವಿವರಿಸುತ್ತಾರಲ್ಲದೆ, ಭಾರತ-ನೇಪಾಳ ಗಡಿಗೆ ಸಮಾನಾಂತರ ರಸ್ತೆ ಇದಾಗಿರುವುದರಿಂದ ಇದೊಂದು ಮಹತ್ವದ ಹೆದ್ದಾರಿಯಾಗಿದ್ದರೂ ಇದನ್ನು ದುರಸ್ತಿಗೊಳಿಸುವ ಗೋಜಿಗೆ ಆಡಳಿತ ಹೋಗಿಲ್ಲ ಎಂದು ದೂರುತ್ತಾರೆ. ಹತ್ತಿರದ ಸುಮಾರು 1000 ಗ್ರಾಮಗಳಿಗೆ ಇದುವೇ ಪ್ರಮುಖ ಸಂಪರ್ಕ ರಸ್ತೆಯಾಗಿದೆಯೆನ್ನುವುದನ್ನೂ ಅವರು ವಿವರಿಸುತ್ತಾರೆ.

ಗ್ರಾಮಸ್ಥರ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಹರ್ಲಖಿ ತಾನು ಈ ಬಗ್ಗೆ ಈಗಾಗಲೇ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಿದ್ದು ಅಲ್ಲಿಂದ ಅನುಮತಿ ದೊರೆತರೆ ಕನಿಷ್ಠ ಹೊಂಡಗಳನ್ನಾದರೂ ಮುಚ್ಚುವ ಕಾರ್ಯ ಕೈಗೊಳ್ಳಬಹುದು ಎಂದಿದ್ದಾರೆ.

ಆರ್‌ಎಲ್‌ಎಸ್‌ಪಿಯ ಸ್ಥಳೀಯ ಶಾಸಕ ಸುಧಾಂಶು ಶೇಖರ್, ಈ ರಸ್ತೆಯನ್ನು ದುರಸ್ತಿ ಪಡಿಸಲಾಗುವುದು ಎಂದು ಹೇಳಿದ್ದಾರಾದರೂ, ದುರಸ್ತಿ ಕಾರ್ಯವನ್ನು ಆರು ತಿಂಗಳ ನಂತರ ಕೈಗೆತ್ತಿಕೊಳ್ಳಲಾಗುವುದು ಎಂದಿದ್ದಾರೆ. ಕೇಂದ್ರ ಸರಕಾರ ಹಾಗೂ ಬಿಹಾರ ಸರಕಾರದ ನಡುವೆ ಹೊಂದಾಣಿಕೆಯ ಕೊರತೆಯೇ ರಸ್ತೆ ದುರಸ್ತಿಯಾಗದೇ ಇರಲು ಕಾರಣವೆಂದು ಅವರು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X