Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಜಿರೆ: ಕಸದ ರಾಶಿಯಿಂದಾಗಿ ಸಾಂಕ್ರಾಮಿಕ...

ಉಜಿರೆ: ಕಸದ ರಾಶಿಯಿಂದಾಗಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನಾಗರಿಕರು

ವಾರ್ತಾಭಾರತಿವಾರ್ತಾಭಾರತಿ26 July 2016 8:18 PM IST
share
ಉಜಿರೆ: ಕಸದ ರಾಶಿಯಿಂದಾಗಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನಾಗರಿಕರು

ಬೆಳ್ತಂಗಡಿ, ಜು.26: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳಸದಗುರಿ ಎಂಬಲ್ಲಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯತ್ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸದ ರಾಶಿ ಬೆಟ್ಟದಂತೆ ತಲೆ ಎತ್ತಿದ್ದು ಸ್ಥಳೀಯ ನಿವಾಸಿಗಳನ್ನು ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ. ಸ್ಥಳೀಯರು ಮೌಖಿಕವಾಗಿ, ಲಿಖಿತವಾಗಿ ಮನವಿಗಳನ್ನು ಪದೇ ಪದೇ ಮಾಡುತ್ತಿದ್ದರೂ ಗ್ರಾಮ ಪಂಚಾಯತ್ ಆಡಳಿತವಂತೂ ಈ ಬಗ್ಗೆ ತಲೆಕೆಡಿಸಿಕೊಂಡಂತೆ ಕಾಣುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದ ಪಳಸದಗುರಿ ಎಂಬಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಳೆಗಾಲದ ಪ್ರಾರಂಭದಿಂದಲೂ ಇಲ್ಲಿ ಕಸ ತಂದು ಸುರಿಯಲಾಗುತ್ತಿದ್ದು ಕಸದ ರಾಶಿ ಪರ್ವತದಂತೆ ಬೆಳೆದಿದೆ. ಮಲೇರಿಯಾ, ಡೆಂಗ್, ಚಿಕೂನ್ ಗುನ್ಯಾ ಮತ್ತಿತರ ಭಯಾನಕ ಸಾಂಕ್ರಾಮಿಕ ರೊಗಗಳು ಎಲ್ಲೆಡೆ ಹರಡುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಿವಾಸಿಗಳು ರೋಗಗಳ ಭೀತಿಯಲ್ಲಿದ್ದು ಸ್ಥಳೀಯ ಕುಟುಂಬಗಳಲ್ಲಿ ಆತಂಕ ಹುಟ್ಟಿಸಿದೆ.

ಇನ್ನೊಂದೆಡೆ ಈ ಘನ ತ್ಯಾಜ್ಯ ವಿಲೇವಾರಿ ಘಟಕವು ಎತ್ತರ ಪ್ರದೇಶದಲ್ಲಿದ್ದು ಅದರ ಸುತ್ತಲು ತಗ್ಗು ಪ್ರದೇಶದಲ್ಲಿರುವ ಸ್ಥಳೀಯರ ಬಾವಿ, ಕೆರೆ, ತೊರೆಗಳ ನೀರು ಕಲುಷಿತಗೊಳಿಸುತ್ತಿದೆ. ಸ್ಥಳೀಯವಾಗಿ ಯಾವುದೇ ರೋಗಗಳು ಹುಟ್ಟಿಕೊಳ್ಳುವ ಅಪಾಯ ಕಂಡು ಬರುತ್ತಿದೆ ಎಂಬ ಆತಂಕ ಇಲ್ಲಿನ ನಿವಾಸಿಗಳಿಂದ ವ್ಯಕ್ತವಾಗಿದೆ. ನಗರವಾಗಿ ಬೆಳೆಯುತ್ತಿರುವ ಉಜಿರೆಯ ಕಸವೆಲ್ಲವೂ ಇಲ್ಲಯೇ ಬಂದು ಬೀಳುತ್ತಿದೆ. ಆದರೆ ಇಲ್ಲಿನ ತ್ಯಾಜ್ಯ ಘಟಕ ಮಾತ್ರ ಇನ್ನೂ ಸುಸಜಿ ್ಜತವಾಗಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇಲ್ಲಿನ ಜನರ ಸಮಸ್ಯೆಯ ಬಗ್ಗೆ ಇನ್ನಾದರೂ ತಾಲೂಕು ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಕೂಡಲೇ ಇತ್ತ ಗಮನ ಹರಿಸಿ ಪಳಸದಗುರಿಯ ಅವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಬಂಧಪಟ್ಟ ಆಡಳಿತಕ್ಕೆ ಸೂಕ್ತ ಕ್ರಮಕ್ಕೆ ಸೂಚಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X