Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಕಮಿಜಾರು ಗ್ರಾಮಸಭೆ: ಮಳೆಗಾಲ ಮುಗಿಯುವ...

ತೆಂಕಮಿಜಾರು ಗ್ರಾಮಸಭೆ: ಮಳೆಗಾಲ ಮುಗಿಯುವ ಮೊದಲೇ ಮಣ್ಣಿನ ಒಡ್ಡುಗಳನ್ನು ನಿರ್ಮಿಸಿ - ಸದಾಶಿವ ಶೆಟ್ಟಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ27 July 2016 7:59 PM IST
share
ತೆಂಕಮಿಜಾರು ಗ್ರಾಮಸಭೆ: ಮಳೆಗಾಲ ಮುಗಿಯುವ ಮೊದಲೇ ಮಣ್ಣಿನ ಒಡ್ಡುಗಳನ್ನು ನಿರ್ಮಿಸಿ - ಸದಾಶಿವ ಶೆಟ್ಟಿ ಸಲಹೆ

 ಮೂಡುಬಿದಿರೆ,ಜು.27 : ಕೃಷಿಗೆ ಹಾಗೂ ಗ್ರಾಮದ ಜನರಿಗೆ ಕುಡಿಯಲು ನೀರಿನ ಸಮಸ್ಯೆ ಬಾರದಂತೆ ಮಳೆಗಾಲ ಮುಗಿಯುವ ಮೊದಲೇ ಅಣೆಕಟ್ಟುಗಳಿಗೆ ಮಣ್ಣಿನ ಒಡ್ಡುಗಳನ್ನು ನಿರ್ಮಿಸಿ ನೀರು ನಿಲ್ಲುವಂತೆ ಮಾಡಬೇಕೆಂದು ಗ್ರಾಮಸ್ಥ ಸದಾಶಿವ ಶೆಟ್ಟಿ ಅವರು ಸಲಹೆ ನೀಡಿದ್ದಾರೆ.

 ಅವರು ಬುಧವಾರದಂದು ತೆಂಕಮಿಜಾರು ಗ್ರಾಮ ಪಂಚಾಯತ್‌ನ ಸಭಾಭವನದಲ್ಲಿ ನಡೆದ ಮೊದಲ ಸುತ್ತಿನ ಗ್ರಾಮಸಭೆಯಲ್ಲಿ ಮಾತನಾಡಿ ಕಳೆದ ವರ್ಷ ಮಳೆಗಾಲ ಮುಗಿದ ನಂತರ ಪಂಚಾಯತ್ ನೂತನ ಮಾದರಿಯಲ್ಲಿ ಅಣೆಕಟ್ಟುಗಳಿಗೆ ಮಣ್ಣಿನ ಒಡ್ಡುಗಳನ್ನು ನಿರ್ಮಿಸಿ ಹರಿದು ಹೋಗುತ್ತಿದ್ದ ನೀರನ್ನು ತಡೆ ಹಿಡಿದು ನಿಲ್ಲುವಂತೆ ಮಾಡಿ ಗ್ರಾಮಸ್ಥರಿಗೆ ನೀರಿನ ಸಮಸ್ಯೆಯನ್ನು ನೀಗಿಸಿದೆ. ಆದ್ದರಿಂದ ಈ ವರ್ಷ ಮಳೆಗಾಲ ಮುಗಿಯುವ ಮೊದಲೆ ಈ ಕೆಲಸವನ್ನು ಮಾಡಿ ಹೆಚ್ಚಿನ ನೀರನ್ನು ಸಂಗ್ರಹವಾಗುವಂತೆ ಮಾಡಬೇಕೆಂದು ಆಗ್ರಹಿಸಿದರು.

ಪರವಾನಿಗೆ ಪಡೆಯದೆ ಬಡವರು ಮನೆ ನಿರ್ಮಿಸಿದರೆ ಪಂಚಾಯತ್‌ನವರು ಹಲವು ಕಾನೂನುಗಳನ್ನು ಮಾತನಾಡುತ್ತಾರೆ ಆದರೆ ಪಂಚಾಯತ್‌ನಿಂದ ಪರವಾನಿಗೆ ಪಡೆಯದೇ ಪಂಚಾಯತ್ ಸದಸ್ಯರೇ ಕಾನೂನುಗಳನ್ನು ಗಾಳಿಗೆ ಅನಧಿಕೃತವಾಗಿ ಮನೆ ನಿರ್ಮಿಸಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿದಾಗ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಘಟನೆ ನಡೆದಿದೆ. ಪಂಚಾಯತ್‌ನ ಅಧಿಕಾರಿಗಳಿಗೆ ಹೀಗಾದರೆ ಇನ್ನೂ ಸಾಮಾನ್ಯ ಜನರ ಪಾಡೇನು, ಪಂಚಾಯತ್ ವತಿಯಿಂದ ನಿರ್ಮಾಣ ಹಂತದಲ್ಲಿರುವ ಎರಡು ಹಿಂದೂ ರುದ್ರಭೂಮಿಗಳ ಕಾಮಗಾರಿ ಯಾವಾಗ ಪೂರ್ಣಗೊಳ್ಳಬಹುದು ಎಂದು ಲಿಂಗಪ್ಪ ಗೌಡ ಪ್ರಶ್ನಿಸಿದಾಗ, ಉತ್ತರಿಸಿದ ಪಿಡಿಓ ಸಾಯೀಶ ಚೌಟ ತಾನು ಈ ಬಗ್ಗೆ ಪಂಚಾಯತ್ ಸದಸ್ಯರ ಗಮನಕ್ಕೆ ತಂದು ಕಾನೂನು ಕ್ರಮವನ್ನು ಕೈಗೊಂಡಿರುವುದಾಗಿ ತಿಳಿಸಿದರು. ಹಿಂದೂ ರುದ್ರಭೂಮಿಯ ಕಾಮಗಾರಿ ಪೂರ್ಣಗೊಳ್ಳಲು ಅನುದಾನ ಕೊರತೆ ಇದೆ ಸ್ವಲ್ಪ ತಮ್ಮ ಕಡೆಗಳಿಂದಲೂ ಸಹಕಾರ ಬರಲಿ ಅಥವಾ ತಮಗೆ ಗೊತ್ತಿರುವ ಸ್ಥಿತಿವಂತರಿಂದ ಡೊನೇಶನ್ ಮೂಲಕ ಸಂಗ್ರಹಿಸಿ ನೀಡುವಂತೆ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ ಸಲಹೆ ನೀಡಿದರು.

 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಕೇಂದ್ರಕ್ಕೆ ತಡವಾಗಿ ಬರುತ್ತಿರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ತನ್ನ ಮನೆಯ ಬಳಿ ಸ್ವಲ್ಪ ಕಸ ಇದ್ದುದಕ್ಕೆ ಪಿಡಿಓ ಅವರು ಫೋಟೋ ತೆಗೆದುಕೊಂಡು ಹೋಗಿದ್ದಾರೆ. ಆದರೆ ಅಂಗನವಾಡಿ ಕೇಂದ್ರದ ಸುತ್ತ ಕಸ ಕಡ್ಡಿಗಳು ತುಂಬಿರುವುದರ ಬಗ್ಗೆ ಗ್ರಾಮಸ್ಥ ಪ್ರಕಾಶ್ ಅವರು ಸಭೆಯ ಗಮನಕ್ಕೆ ತಂದರು.

   ಇಲ್ಲಿಗೆ 9.45ರ ವೇಳೆಗೆ ಬಸ್ಸು ಇರುವುದರಿಂದ ತಾವು ಅದರಲ್ಲಿಯೇ ಬರುತ್ತಿರುವುದು ಆದರೆ ತಮ್ಮ ಸಹಾಯಕಿ ಅವರು ಬೇಗನೇ ಬಂದು ಬಾಗಿಲು ತೆರೆಯುತ್ತಾರೆ ಆದರೆ ತಾವು ವೈಯಕ್ತಿತ ಧ್ವೇಷದಿಂದ ಸುಮ್ಮನೆ ಆರೋಪ ಮಾಡಬೇಡಿ ಎಂದು ಅಂಗನವಾಡಿ ಕಾರ್ಯಕರ್ತೆ ಹೇಳಿದರು. ಈ ಬಗ್ಗೆ ಪಂಚಾಯತ್ ವತಿಯಿಂದ ಅಂಗನವಾಡಿ ಮೇಲ್ವೀಚಾರಕರ ಗಮನಕ್ಕೆ ತರಲಾಗುವುದು ಎಂದು ಪಿಡಿಓ ತಿಳಿಸಿದರು.

 ನೀರಿನ ಬಿಲ್‌ಲ್ ಬಾಕಿ ಇರುವುದಕ್ಕೆ ಪಂಚಾಯತ್ ಕನೆಕ್ಷನ್ ತೆಗೆದಿರುವ ಬಗ್ಗೆ ಗ್ರಾಮಸ್ಥ ಜಯಶೆಟ್ಟಿ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಾಗ, ತಾವು ಸುಮಾರು 2000ದಷ್ಟು ನೀರಿನ ಬಿಲ್ಲನ್ನು ಪಾವತಿಸದೆ ಬಾಕಿ ಇರಿಸಿರುವಿರಿ. ಯಾರೂ ನೀರಿನ ಬಿಲ್ಲನ್ನು ಬಾಕಿ ಇಡಬೇಡಿ ತಾವು ವಿದ್ಯುತ್ ಬಿಲ್‌ಲ್, ಪಂಪು ಅಪರೇಟರ್‌ಗೆ ಸಂಬಳವನ್ನು ಅದರಿಂದಲೇ ನೀಡಬೇಕಾಗಿದೆ. ತಾವೆಲ್ಲರೂ ನೀರಿನ ಬಿಲ್ಲನ್ನು ಬಾಕಿ ಇಟ್ಟರೆ ಪಂಚಾಯತ್ ಎಲ್ಲಿಂದ ಭರಿಸುವುದು ಎಂದು ಪಿಡಿಓ ಪ್ರಶ್ನಿಸಿದರು.

ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಸಮಸ್ಯೆಗಳಿದ್ದರೆ ನೇರವಾಗಿ ಪಂಚಾಯತ್‌ಗೆ ಬಂದು ತಿಳಿಸಿ ಗ್ರಾಮಸ್ಥರು ಮತ್ತು ನಾವೆಲ್ಲರೂ ಒಟ್ಟಾಗಿ ಸೇರಿ ಸಮಸ್ಯೆಗಳನ್ನು ಬಗೆ ಹರಿಸೋಣ ಎಂದು ಗ್ರಾಮಸ್ಥರಲ್ಲಿ ವಿನಂತಿಸಿದರು.

ಶಿವಾನಂದ ಕಾಯ್ಕಿಣಿ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿ ಸಲಹೆ ನೀಡಿದರು. ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

 ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ, ತಾ.ಪಂ ಸದಸ್ಯ ಪ್ರಕಾಶ್ ಗೌಡ, ಪಂಚಾಯತ್ ಸದಸ್ಯರು, ಜಿ.ಪಂ ಇಂಜಿನಿಯರ್ ವಿಶ್ವನಾಥ ಶೆಟ್ಟಿ, ಮೆಸ್ಕಾಂ, ಆರೋಗ್ಯ, ಕಂದಾಯ ಅಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ ಸ್ವಾಗತಿಸಿದರು. ಸಿಬಂದಿ ಆನಂದ ಅವರು ವಾರ್ಷಿಕ ಜಮಾಖರ್ಚಿನ ವಿವರ ನೀಡಿದರು. ರಾಕೇಶ್ ವಾರ್ಡ್ ಸಭೆಯ ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X