Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕತರ್ ನಲ್ಲಿ ಕಾರು ಅಪಘಾತ :...

ಕತರ್ ನಲ್ಲಿ ಕಾರು ಅಪಘಾತ : ಕೋಮಾದಲ್ಲಿರುವ ಬಂಟ್ವಾಳದ ಯುವಕ 13 ವರ್ಷಗಳ ಬಳಿಕ ತವರಿಗೆ

ಸಂಕಷ್ಟದಲ್ಲಿ ಕುಟುಂಬ

-ಇಮ್ತಿಯಾಝ್ ಶಾ ತುಂಬೆ-ಇಮ್ತಿಯಾಝ್ ಶಾ ತುಂಬೆ27 July 2016 8:30 PM IST
share
ಕತರ್ ನಲ್ಲಿ ಕಾರು ಅಪಘಾತ : ಕೋಮಾದಲ್ಲಿರುವ ಬಂಟ್ವಾಳದ ಯುವಕ 13 ವರ್ಷಗಳ ಬಳಿಕ ತವರಿಗೆ

ಬಂಟ್ವಾಳ, ಜು.27: ಕತರ್ ದೇಶದ ದೋಹಾದಲ್ಲಿ 13 ವರ್ಷಗಳ ಹಿಂದೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿರುವ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಾಡಾಜೆ ನಿವಾಸಿ ಮುಹಮ್ಮದ್ ರಫೀಕ್ ಎಂಬವರನ್ನು ಇತ್ತೀಚೆಗೆ ತವರಿಗೆ ಕರೆದುಕೊಂಡು ಬರಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

44 ವರ್ಷ ಪ್ರಾಯದ ಮುಹಮ್ಮದ್ ರಫೀಕ್ ನಾಡಾಜೆ ನಿವಾಸಿ ಪಿ.ಇಬ್ರಾಹೀಂ ಬ್ಯಾರಿ ಎಂಬವರ ಪುತ್ರ. ಇಬ್ರಾಹೀಂ ಬ್ಯಾರಿಯವರ ನಾಲ್ವರು ಪುತ್ರರು, ಓರ್ವ ಪುತ್ರಿಯ ಪೈಕಿ ಮೂರನೆಯವ. 2004ರಲ್ಲಿ ರಫೀಕ್ ಚಲಾಯಿಸುತ್ತಿದ್ದ ಕಾರಿಗೆ ಕತ್ತಾರ್ ಪ್ರಜೆಯೊಬ್ಬಳು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿತ್ತು. ಅಪಘಾತದ ಪರಿಣಾಮ ಗಂಭೀರ ಗಾಯಗೊಂಡ ಅವರು 28 ದಿವಸಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿದ್ದರು. ಬಳಿಕ ಪ್ರಾಣಾಪಾಯದಿಂದ ಪಾರಾದರಾದರೂ ಶಾಶ್ವತ ಕೋಮಾ ಸ್ಥಿತಿಗೆ ಜಾರಿದ್ದರು.

13 ವರ್ಷಗಳಿಂದ ಕತರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೆಲವು ದಿನಗಳ ಹಿಂದೆ ತವರಿಗೆ ಕರೆದುಕೊಂಡು ಬರಲಾಗಿದೆ. ವಿಮಾನದ ಮೂಲಕ ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣಕ್ಕೆ ಕರೆತಂದು ಬಳಿಕ ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಕರೆತಂದು ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆರು ದಿವಸಗಳ ಬಳಿಕ ಇಲ್ಲಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಿ ತುರ್ತು ನಿಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಫೀಕ್ ವಿವಾಹಿತರಾಗಿದ್ದು 14 ವರ್ಷದ ಪುತ್ರಿಯಿದ್ದಾಳೆ. ತನ್ನ ಪುತ್ರಿ ಒಂದೂವರೆ ವರ್ಷದ ಮಗುವಾಗಿದ್ದಾಗ ಕೆಲಸ ಹುಡುಕಿಕೊಂಡು ಕತರ್ ಗೆ ತೆರಳಿದ್ದ ಅವರು ಹೌಸ್ ಡ್ರೈವರ್ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿ ಒಂದೂವರೆ ವರ್ಷ ಳೆದಾಗ ಅಪಘಾತಕ್ಕೊಳಗಾಗಿದ್ದರು.

‘ತಲೆಭಾಗಕ್ಕೆ ಗಂಭೀರ ಗಾಯಗೊಂಡ ಅವರಿಗೆ ಕತರ್ ನಲ್ಲಿ ಚಿಕಿತ್ಸೆ ನೀಡಿದ್ದ ಪ್ರತಿಯೊಬ್ಬ ವೈದ್ಯರೂ, ‘‘ಕೋಮಾ ಸ್ಥಿತಿಯಿಂದ ಅವರು ಚೇತರಿಸಿಕೊಳ್ಳಲಾರರು’’ ಎಂದು ಹೇಳಿದ್ದಾರೆ. ಆದರೂ ನಾವು ಅಲ್ಲಿನ ವೈದ್ಯಕೀಯ ವರದಿಯ ಪ್ರತಿಯನ್ನು ತರಿಸಿ ಬೆಂಗಳೂರಿನ ಪ್ರಸಿದ್ಧ ಖಾಸಗಿ ಆಸ್ಪತ್ರೆಯ ವೈದ್ಯರನ್ನೂ ಭೇಟಿ ಮಾಡಿದ್ದೇವೆ. ಅವರಿಂದಲೂ ಅದೇ ಉತ್ತರ ದೊರಕಿದೆ’ ಎನ್ನುತ್ತಾರೆ ರಫೀಕ್‌ರ ಸಹೋದರ ಹಮೀದ್.

‘ತುರ್ತು ನಿಗಾ ಘಟಕದಲ್ಲಿರುವ ಅವರಿಗೆ ದ್ರವ ಆಹಾರವನ್ನು ಪೈಪ್ ಮೂಲಕ ಪೂರೈಸಲಾಗುತ್ತದೆ. ರಫೀಕ್‌ರ ಚಿಕಿತ್ಸೆಯ ವೆಚ್ಚವನ್ನು ಅಲ್ಲಿನ ಸರಕಾರ ಸಂಪೂರ್ಣವಾಗಿ ಭರಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 6 ದಿನ ತುರ್ತು ನಿಗಾ ಘಟಕದಲ್ಲಿದ್ದ ವೆಚ್ಚ 50,000 ರೂ. ಆಗಿದೆ. ಇದಲ್ಲದೆ ಈಗಲೂ ದಿನಂಪ್ರತಿ ಸಾವಿರಾರು ರೂ.ಗಳ ಔಷಧಗಳನ್ನು ನೀಡಲಾಗುತ್ತಿದೆ. ಅವರನ್ನು ಭಾರತಕ್ಕೆ ಕರೆತರಲು ಕಾನೂನಿನಲ್ಲಿದ್ದ ತೊಡಕನ್ನು ನಿವಾರಿಸಿಕೊಡುವಲ್ಲಿ ಕೆಸಿಎಫ್ ಸಂಸ್ಥೆಯವರು ನಮಗೆ ನೆರವಾಗಿದ್ದಾರೆ’ ಎಂದು ಹಮೀದ್ ಹೇಳಿದ್ದಾರೆ.

ಮನೆಯಲ್ಲಿರುವ ರಫೀಕ್‌ನ ವೃದ್ಧ ತಂದೆ-ತಾಯಿ ತಮ್ಮ ಪುತ್ರ ಇಂದಲ್ಲ ನಾಳೆ ಚೇತರಿಕೊಳ್ಳುತ್ತಾನೆ ಎಂಬ ಭರವಸೆಯಲ್ಲಿದ್ದಾರೆ.

share
-ಇಮ್ತಿಯಾಝ್ ಶಾ ತುಂಬೆ
-ಇಮ್ತಿಯಾಝ್ ಶಾ ತುಂಬೆ
Next Story
X