Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರಮಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

ಕ್ರಮಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

ಏಜೆನ್ಸಿಗಳಿಂದ ವೇತನ ತಾರತಮ್ಯ

ವಾರ್ತಾಭಾರತಿವಾರ್ತಾಭಾರತಿ27 July 2016 10:36 PM IST
share
ಕ್ರಮಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

ಕಾರವಾರ, ಜು.27: ಕೈಗಾ ಅಣುವಿದ್ಯುತ್ ಸ್ಥಾವರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ನೌಕರರು ಶಾಸಕ ಸತೀಶ್ ಸೈಲ್ ಬಳಿ ಬುಧವಾರ ಕೋರಿಕೊಂಡರು.

ಶಾಸಕರು ಕೈಗಾ ಮಾರ್ಗವಾಗಿ ಹರೂರು ಗ್ರಾಮಕ್ಕೆ ಸಂಚರಿಸುವ ವಿಷಯ ತಿಳಿದ ಅಣು ವಿದ್ಯುತ್ ಸ್ಥಾವರದ ನೌಕರರು, ದಾರಿ ಮಧ್ಯೆ ಇರುವ ಚೆಕ್‌ಪೋಸ್ಟ್‌ನಲ್ಲಿ ಸಭೆ ನಡೆಸಿದರು.

 ಮಾನವ ಸಂಪನ್ಮೂಲ ಪೂರೈಸುವ ಗುತ್ತಿಗೆ ಏಜೆನ್ಸಿಗಳ ಕಿರುಕುಳ, ವೇತನ ತಾರತಮ್ಯ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಿಳಿಸಿದರು. ಕೈಗಾ ಅಣು ವಿದ್ಯುತ್ ಸ್ಥಾವರದ ಗುತ್ತಿಗೆ ನೌಕರರು ಹದಿನೈದು ವರ್ಷಗಳಿಂದ ದುಡಿಯುತ್ತಿದ್ದರೂ ಕಾರ್ಮಿಕರ ವೇತನ ಏರಿಕೆ ಮಾಡಿಲ್ಲ. ತಿಂಗಳು ಪೂರ್ತಿ ದುಡಿದರೆ 9 ಸಾವಿರ ರೂ. ವೇತನ ನೀಡಲಾಗುತ್ತಿದ್ದು, ರಜೆ ಸೌಲಭ್ಯ ಸರಿಯಾಗಿಲ್ಲ. ಕುಟುಂಬ ನಿರ್ವಹಣೆಗೆ ವೇತನ ಸಾಲುತ್ತಿಲ್ಲ ಎಂಬಿತ್ಯಾದಿ ಸಮಸ್ಯೆಗಳ ಬಗ್ಗೆ ಕೈಗಾದ ಅಧಿಕಾರಿಗಳ ಬಳಿ ದೂರಿದರು ಪ್ರಯೋಜನವಾಗುತ್ತಿಲ್ಲ ಅಲವತ್ತುಕೊಂಡರು. ದಿನವಿಡೀ ಕೈಗಾ ಅಣು ಸ್ಥಾವರದಲ್ಲಿ ಕೆಲಸ ಮಾಡಿದರೂ ಪ್ರತಿ ತಿಂಗಳು ವೇತನ ಬರುತ್ತಿಲ್ಲ. ಹಲವು ಬಾರಿ ಎರಡ್ಮೂರು ತಿಂಗಳಿಗೆ ಒಮ್ಮೆ ವೇತನ ನೀಡಲಾಗುತ್ತದೆ. ನೌಕರರ ಸಮಸ್ಯೆ ಬಗ್ಗೆ ತಿಳಿಸಿದರೂ ಕೈಗಾದವರು ಸಹಾಯ ಮಾಡುತ್ತಿಲ್ಲ. ಹಲವು ಬಡವರು ಈ ಭಾಗದಲ್ಲಿ ದುಡಿಯುತ್ತಿದ್ದು, ಅವರಿಗೆ ಸಹಾಯವಾಗುವಂತೆ ನಿರ್ಣಯ ಕೈಗೊಳ್ಳಲು ಒತ್ತಾಯಿಸಿದರು.

ಈ ವೇಳೆ ಶಾಸಕರಿಗೆ ಮನವಿ ನೀಡಿದ ಕೈಗಾದ ವಾಹನ ಚಾಲಕರು, ತಮ್ಮ ಬೇಡಿಕೆಗೆ ಸ್ಪಂದಿಸುವಂತೆ ಒತ್ತಾಯಿಸಿದರು. ಅಣುಶಕ್ತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಬಸ್ ಹಾಗೂ ಇನ್ನಿತರ ವಾಹನ ಚಾಲಕರನ್ನು ಕೌಶಲ್ಯರು ಎಂದು ಪರಿಗಣಿಸಿ ಕಡಿಮೆ ವೇತನ ನೀಡಲಾಗುತ್ತಿದೆ. ಇವರನ್ನು ಅತಿ ಕೌಶಲ್ಯರಂದು ಗುರುತಿಸಿ ವೇತನ ಏರಿಸಬೇಕು ಎಂದು ಆಗ್ರಹಿಸಿದರು. ಬಸ್‌ಗಳ ನಿರ್ವಹಣೆ ಸರಿಯಲ್ಲದ ಕಾರಣ ಸೂಕ್ತ ಹಾಗೂ ಹೆಚ್ಚುವರಿ ಬಸ್‌ಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಕೈಗಾ ಹಾಗೂ ಸುತ್ತಲಿನ ಭಾಗಕ್ಕೆ ಕೆಎಸ್ಸಾರ್ಟಿಸಿ ಬಸ್ ಸೇವೆ ಸಮರ್ಪಕವಾಗಿಲ್ಲ. ಕೈಗಾ ಕೆರವಡಿ ಮಾರ್ಗವಾಗಿ ಬಸ್‌ಪಾಸ್‌ಗಳಿಗೆ ಅನುಮತಿ ನೀಡುತ್ತಿಲ್ಲ. ಈ ಹಿಂದೆ ನೀಡಿದ ಪಾಸ್‌ನ್ನು ರದ್ದು ಮಾಡಿದ್ದರಿಂದ ಪಾಸ್ ಪಡೆದು ಹಣ ಕೊಟ್ಟು ಸಂಚರಿಸುವ ಪರಿಸ್ಥಿತಿ ಬಂದಿದೆ ಎಂದರು. ಸಮಸ್ಯೆಗಳನ್ನು ಆಲಿಸಿದ ಶಾಸಕ ಸೈಲ್ ಶೀಘ್ರವೇ ಕೈಗಾ ಅಧಿಕಾರಿಗಳ ಜೊತೆ ಮಾತನಾಡಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪ್ರವೀಣ್ ರಾವ್, ಗಜಾನನ ನಾಯ್ಕ, ಆನಂದ ಪ್ರಶಾಂತ್ ನಾಯ್ಕ, ಕಿರಣ ಆಗೆಕರ್, ಪ್ರಮೋದ ಕದಂ, ಕಮಲಾಕಾಂತ ನಾಯ್ಕ ಸೇರಿದಂತೆ ನೂರಾರು ಜನರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X