Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ದಿಢೀರ್ ಜಲ ಪ್ರಳಯ...!

ಶಿವಮೊಗ್ಗದಲ್ಲಿ ದಿಢೀರ್ ಜಲ ಪ್ರಳಯ...!

ವಾರ್ತಾಭಾರತಿವಾರ್ತಾಭಾರತಿ27 July 2016 10:48 PM IST
share
ಶಿವಮೊಗ್ಗದಲ್ಲಿ ದಿಢೀರ್ ಜಲ ಪ್ರಳಯ...!

<ಬಿ. ರೇಣುಕೇಶ್

ಶಿವಮೊಗ್ಗ, ಜು. 27: ಶಿವಮೊಗ್ಗ ನಗರದ ಹಳೇ ಮಂಡ್ಲಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ, ಬುಧವಾರ ಚುಮುಚುಮು ಮುಂಜಾನೆಯ ವೇಳೆ ಅಕ್ಷರಶಃ ‘ಜಲ ಪ್ರಳಯ’ದ ಪರಿಸ್ಥಿತಿ ಸೃಷ್ಟಿಯಾಗಿ, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕುವಂತಾಯಿತು.

ನಗರದ ಮೂಲಕ ಹಾದು ಹೋಗಿರುವ ತುಂಗಾ ಎಡದಂಡೆ ನಾಲೆಯ ಒಂದು ಬದಿಯ ಏರಿ ಒಡೆದು ಹೋದ ಪರಿಣಾಮದಿಂದ ಅಪಾರ ಪ್ರಮಾಣದ ನೀರು ತಗ್ಗು ಪ್ರದೇಶಗಳಿಗೆ ನುಗ್ಗುವಂತಾಗಿತ್ತು. ಇದರಿಂದ ಗ್ರಾಮಸ್ಥರು ಕೃತಕ ಜಲಪ್ರಳಯದ ಪರಿಸ್ಥಿತಿ ಎದುರಿಸುವಂತಾಯಿತು. ಹಳೇ ಮಂಡ್ಲಿ, ಕುರುಬರ ಪಾಳ್ಯ, ಎನ್.ಟಿ. ರಸ್ತೆಯ ಎಡ-ಬಲ, ನ್ಯೂ ಮಂಡ್ಲಿಯ ಅಲ್ಪ ಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿದ್ದವು. ನೂರಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾವಿರಾರು ಜನರು ತಾತ್ಕಾಲಿಕವಾಗಿ ಮನೆ ತೊರೆಯುವಂತಾಗಿತ್ತು. ಈ ನಡುವೆ ನೀರಿನ ರಭಸಕ್ಕೆ ಏಳು ಮನೆಗಳು ಕುಸಿದು ಬಿದ್ದಿತು. ಅಲ್ಲದೆ, ಹಲವು ಮನೆಗಳು ಧರಾಶಾಯಿಯಾಗುವ ಸ್ಥಿತಿಯಲ್ಲಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಧಕ್ಕೆ ಉಂಟಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಸ್ಥಳದಲ್ಲಿಯೇ ಬೀಡುಬಿಟ್ಟು ಪರಿಹಾರ ಕಾರ್ಯಾಚರಣೆ ನಡೆಸಿದರು. ಜಲಾವೃತವಾಗಿದ್ದ ಮನೆಗಳಲ್ಲಿದ್ದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದರು. ಗಂಜಿ ಕೇಂದ್ರ, ಚಿಕಿತ್ಸಾ ಕೇಂದ್ರ ತೆರೆದು ಊಟೋಪಚಾರದ ವ್ಯವಸ್ಥೆ ಕಲ್ಪಿಸಿದರು. ಮತ್ತೊಂದೆಡೆ ತುಂಗಾ ಜಲಾಶಯದಿಂದ ಎಡದಂಡೆ ನಾಲೆಗೆ ಬಿಡಲಾಗುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಯಿತು. ಸಮರೋಪಾದಿಯಲ್ಲಿ ನಾಲೆಯ ದುರಸ್ತಿ ಕಾರ್ಯ ಆರಂಭಿಸಲಾಯಿತು. ಇದರಿಂದ ಮಧ್ಯಾಹ್ನದ ವೇಳೆ ಬಡಾವಣೆಗಳಲ್ಲಿ ನಿಂತಿದ್ದ ನೀರಿನ ಪ್ರಮಾಣ ಕಡಿಮೆಯಾಗುತ್ತಾ ಬಂತಾದರೂ ಸಂಪೂರ್ಣ ಪ್ರಮಾಣದಲ್ಲಿ ಜಲಮುಕ್ತವಾಗಿರಲಿಲ್ಲ.

ಏನಾಯ್ತು?:

ಕಳೆದ ಕೆಲ ದಿನಗಳಿಂದ ತುಂಗಾ ಎಡದಂಡೆ ನಾಲೆಗೆ ಗಾಜನೂರಿನ ತುಂಗಾ ಜಲಾಶಯದಿಂದ ನೀರು ಬಿಡಲಾಗುತ್ತಿದೆ. ಇದರಿಂದ ನಾಲೆಯು ತುಂಬಿ ಹರಿಯುತ್ತಿದೆ. ಈ ನಡುವೆ ಬುಧವಾರ ಮುಂಜಾನೆ 4 -5 ಗಂಟೆಯ ಸುಮಾರಿಗೆ ನಾಲೆಯ ಒಂದು ಬದಿಯ ಏರಿ ಕುಸಿದಿದೆ. ಇದರಿಂದ ಅಪಾರ ಪ್ರಮಾಣದ ನೀರು ತಗ್ಗು ಪ್ರದೇಶಗಳಿಗೆ ಹರಿಯಲಾರಂಭಿಸಿದೆ. ಬೆಳ್ಳಂಬೆಳಗ್ಗೆ ಶಿವಮೊಗ್ಗ - ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ ಎನ್.ಟಿ. ರಸ್ತೆ, ಹಳೇ ಮಂಡ್ಲಿ ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ಹರಿದು ಬರಲಾರಂಭಿಸಿದೆ. ನೋಡನೋಡುತ್ತಿದ್ದಂತೆ ಮನೆಗಳು ಜಲಾವೃತವಾಗಲಾರಂಭಿಸಿವೆ. ಆಗಷ್ಟೆ ನಿದ್ರೆಯಿಂದೇಳುತ್ತಿದ್ದ ಜನರು ನೀರು ನುಗ್ಗುತ್ತಿರುವುದಕ್ಕೆ ಸ್ಪಷ್ಟ ಕಾರಣ ಗೊತ್ತಾಗದೆ ಆತಂಕಗೊಂಡು, ಮನೆಯಲ್ಲಿದ್ದ ಸರಕು-ಸರಂಜಾಮುಗಳನ್ನು ಹೊರತೆಗೆದುಕೊಂಡು ಹೋಗಲು ಹರಸಾಹಸ ನಡೆಸಿದರು. ಮತೊ್ತಂದೆಡೆ ಕ್ಷಣಕ್ಷಣದಿಂದ ಕ್ಷಣಕ್ಕೆ ನೀರಿನ ರಭಸ ಹೆಚ್ಚಾಗ ತೊಡಗಿದೆ. ವಿಷಯ ತಿಳಿಯು ತ್ತಿದ್ದಂತೆ ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ರಾಕೇಶ್ ಕುಮಾರ್, ಉಪ ವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು ಆಗಮಿಸಿ ಮನೆಗಳಲ್ಲಿದ್ದ ಕೆಲ ನಾಗರಿಕರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಿದರು.

ನಿದ್ದೆಯಿಂದೇಳುವ ಮುನ್ನವೇ ಮನೆಗೆ ನುಗ್ಗಿದ ನೀರು...!!

ಹಳೇ ಮಂಡ್ಲಿಯ ಹಲವು ನಾಗರಿಕರನ್ನು ಬುಧವಾರ ಮುಂಜಾನೆ ನಿದ್ದೆಯಿಂದ ಎಚ್ಚರಿಸಿದ್ದ ನೀರು..?! ಹೌದು. ಬೆಳ್ಳಂಬೆಳಗ್ಗೆ ತುಂಗಾ ಎಡದಂಡೆ ನಾಲೆಯ ಏರಿ ಕುಸಿದು ಭಾರೀ ಪ್ರಮಾಣದ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದ ಪರಿಣಾಮ ನೂರಾರು ಮನೆಗಳು ಜಲಾವೃತವಾಗಿದ್ದವು. ಕೆಲ ನಿವಾಸಿಗಳಿಗೆ ಮನೆಯೊಳಗೆ ನೀರು ಬಂದಾಗಲೇ ಬಡಾವಣೆ ಜಲಾವೃತ ಗೊಂಡಿರುವ ವಿಷಯ ತಿಳಿಯಿತು. ಮತ್ತೆ ಕೆಲ ನಿವಾಸಿಗಳು ಮುಂಜಾನೆಯ ಸವಿ ನಿದ್ರೆಯಿಂದ ಎಚ್ಚರಗೊಳ್ಳುವುದಕ್ಕೆ ಮುನ್ನವೇ ಅವರನ್ನು ನೀರು ಎಚ್ಚರಿಸಿದೆ! ಒಟ್ಟಾರೆ ಹಳೇ ಮಂಡ್ಲಿ, ಕುರಬರಪಾಳ್ಯ, ನ್ಯೂ ಮಂಡ್ಲಿ ಬಡಾವಣೆ, ಎನ್.ಟಿ. ರಸ್ತೆ ಎಡ-ಬಲಗಳ ಸಾವಿರಾರು ನಿವಾಸಿಗಳ ದೈನಂದಿನ ಜೀವನ ಸಂಪೂರ್ಣವಾಗಿ ಬುಧವಾರ ಅಸ್ತವ್ಯಸ್ತಗೊಂಡಿತ್ತು. ತಮ್ಮದಲ್ಲದ ತಪ್ಪಿಗೆ ನಿವಾಸಿಗಳು ತೊಂದರೆಗೆ ಒಳಗಾಗಬೇಕಾಯಿತು.

ಹೆದ್ದಾರಿ ಜಲಾವೃತ

ಎನ್.ಟಿ. ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ಇದರಿಂದ ಶಿವಮೊಗ್ಗ-ತೀರ್ಥಹಳ್ಳಿಯ ನಡುವೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರಸ್ತೆಯಲ್ಲಿ ಮೂರು ಅಡಿಗೂ ಹೆಚ್ಚು ನೀರು ಹರಿಯುತ್ತಿದ್ದ ಕಾರಣ ವಾಹನಗಳನ್ನು ಬದಲಿ ಮಾರ್ಗದ ಮೂಲಕ ಸಂಚರಿಸಲು ಅವಕಾಶ ಕಲ್ಪಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X