Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಕೆಎಸ್ಸಾರ್ಟಿಸಿ...

ಪುತ್ತೂರು: ಕೆಎಸ್ಸಾರ್ಟಿಸಿ ಸಿಬ್ಬಂದಿಯಿಂದ ಧರಣಿ

ತರಬೇತಿ ಚಾಲಕರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ28 July 2016 5:43 PM IST
share
ಪುತ್ತೂರು: ಕೆಎಸ್ಸಾರ್ಟಿಸಿ ಸಿಬ್ಬಂದಿಯಿಂದ ಧರಣಿ

ಪುತ್ತೂರು, ಜು.28: ಮುಷ್ಕರ ಮುಗಿದು ಕರ್ತವ್ಯಕ್ಕೆ ಹಾಜರಾದ ತರಬೇತಿ ಚಾಲಕ-ನಿರ್ವಾಹಕರನ್ನು ಗುರುವಾರ ಕರ್ತವ್ಯಕ್ಕೆ ಸೇರಿಸಿಕೊಳ್ಳದ ಪುತ್ತೂರು ಕೆಎಸ್ಸಾರ್ಟಿಸಿ ಘಟಕದ ಅಧಿಕಾರಿಗಳ ಕ್ರಮದ ವಿರುದ್ಧ ಮುಕ್ರಂಪಾಡಿ ಘಟಕದೊಳಗೆ ಸಿಬ್ಬಂದಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ವೇತನ ಹೆಚ್ಚಿಸುವಂತೆ ಆಗ್ರಹಿಸಿ ಯೂನಿಯನ್ ಕರೆ ನೀಡಿದ್ದ ಬಂದ್ ದಿನಗಳಲ್ಲಿ ತರಬೇತಿಯಲ್ಲಿರುವ ಚಾಲಕ- ನಿರ್ವಾಹಕರನ್ನು ಕರ್ತವ್ಯಕ್ಕೆ ಆಗಮಿಸುವಂತೆ ಸೂಚಿಸಲಾಗಿತ್ತು. ಆದರೆ ಮುಷ್ಕರ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಿಲ್ಲ. ಬುಧವಾರ ಯೂನಿಯನ್ ಮುಷ್ಕರ ಹಿಂದೆಗೆದುಕೊಂಡಿದ್ದು, ಗುರುವಾರ ಬೆಳಗ್ಗೆ ಬಸ್ ಸಂಚಾರ ಆರಂಭಗೊಂಡಿತ್ತು. ಬೆಳಗ್ಗೆ 49 ಕೆಎಸ್ಸಾರ್ಟಿಸಿ ಬಸ್‌ಗಳು ರೂಟ್‌ಗೆ ತೆರಳಿದ್ದವು. ಅಷ್ಟರಲ್ಲಿ ತರಬೇತಿಯಲ್ಲಿರುವ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಹಾಕದೇ ಇರುವ ವಿಚಾರ ಬೆಳಕಿಗೆ ಬಂದಿದೆ. ತರಬೇತಿ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಹಾಕದೇ, ಉಳಿದ ಚಾಲಕ- ನಿರ್ವಾಹಕರು ಕರ್ತವ್ಯಕ್ಕೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.

ಪುತ್ತೂರು ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 74 ತರಬೇತಿ ಚಾಲಕ- ನಿರ್ವಾಹಕರನ್ನು ಗುರುವಾರ ಕರ್ತವ್ಯಕ್ಕೆ ನಿಯೋಜಿಸಿರಲಿಲ್ಲ. ಕರ್ತವ್ಯ ಸೂಚಿಸದೇ ಇದ್ದರೆ ಆ ದಿನದ ವೇತನ ಪಾವತಿ ಆಗುವುದಿಲ್ಲ. ಯೂನಿಯನ್ ನೀಡಿದ ಕರೆ ಹಿನ್ನೆಲೆಯಲ್ಲಿ ತರಬೇತಿಯಲ್ಲಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಹಿಂಜರಿದಿದ್ದರು. ಇದೀಗ ಅಧಿಕಾರಿಗಳು ದಂಡನೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಉಳಿದ ಚಾಲಕರು ತರಬೇತಿ ಸಿಬ್ಬಂದಿಯ ಪರವಾಗಿ ನಿಂತು, ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಡೆಪ್ಯೂಟಿ ಟ್ರಾಫಿಕ್ ಆಫೀಸರ್ ವೆಂಕಟೇಶ್, ಚಾಲಕ- ನಿರ್ವಾಹಕರನ್ನು ಕರ್ತವ್ಯಕ್ಕೆ ತೆರಳುವಂತೆ ಸೂಚಿಸಿದರು. ಇದಕ್ಕೆ ಸಮ್ಮತಿ ಸೂಚಿಸಲಿಲ್ಲ. ಬಳಿಕ ತರಬೇತಿ ಚಾಲಕ- ನಿರ್ವಾಹಕರಿಗೆ ಶುಕ್ರವಾರ ಕರ್ತವ್ಯ ನಿಯೋಜಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಬಸ್‌ಗಳು ಎಂದಿನಂತೆ ರೂಟ್‌ಗೆ ತೆರಳಿದವು.

ಡಿಪೊ ಮ್ಯಾನೇಜರ್ ಚೆನ್ನಬಸವಯ್ಯ, ಅಸಿಸ್ಟೆಂಟ್ ಟ್ರಾಫಿಕ್ ಸೆಕ್ಯುರಿಟಿ ನಾಗರಾಜ್, ಟ್ರಾಫಿಕ್ ಇನ್‌ಸ್ಪೆಕ್ಟರ್ ಅಪ್ಪಯ್ಯ ನಾಯ್ಕೆ, ಅಸಿಸ್ಟೆಂಟ್ ಟ್ರಾಫಿಕ್ ಇನ್‌ಸ್ಪೆಕ್ಟರ್ ತಮ್ಮಣ್ಣ ನಾಯ್ಕ ಸಿಬ್ಬಂದಿಯ ಮನವೊಲಿಸಲು ಪ್ರಯತ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X