Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಾರಿ ದೀಪಗಳಿಲ್ಲದೆ ಕತ್ತಲಲ್ಲಿ ಬಂಟ್ವಾಳ:...

ದಾರಿ ದೀಪಗಳಿಲ್ಲದೆ ಕತ್ತಲಲ್ಲಿ ಬಂಟ್ವಾಳ: ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ28 July 2016 9:21 PM IST
share
ದಾರಿ ದೀಪಗಳಿಲ್ಲದೆ ಕತ್ತಲಲ್ಲಿ ಬಂಟ್ವಾಳ: ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

ಬಂಟ್ವಾಳ, ಜು. 28: ಮೇ ತಿಂಗಳಿನಲ್ಲಿ ತಾಲೂಕಿನ ವಿವಿಧೆಡೆ ಉಂಟಾದ ಪ್ರಾಕೃತಿಕ ವಿಕೋಪದಿಂದ ವಿದ್ಯುತ್ ಕಂಬಗಳು ಹಾನಿಗೀಡಾಗಿ ಕೆಟ್ಟು ಹೋದ ದಾರಿದೀಪಗಳನ್ನು ಇನ್ನು ಕೂಡಾ ದುರಸ್ಥಿ ಮಾಡದಿರುವ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಅಧ್ಯಕ್ಷರು ಮತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಗುರುವಾರ ನಡೆದ ಇಲ್ಲಿನ ಪುರಸಭಾ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವರ ಸಭಾಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಸದಸ್ಯೆ ಚಂಚಲಾಕ್ಷಿ, ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ಸೇತುವೆಯ ಸಹಿತ ವಿವಿಧೆಡೆ ದಾರಿದೀಪಗಳು ಉರಿಯದಿರುವುದರಿಂದ ಕತ್ತಲು ಆವರಿಸಿದೆ ಎಂದು ಅಸಮಾಧಾನ ಹೊರ ಹಾಕಿದರು.

ಇದಕ್ಕೆ ಧ್ವನಿಗೂಡಿಸಿದ ಸದಸ್ಯರಾದ ಗಂಗಾಧರ, ಪ್ರವೀಣ ಬಿ., ಜಸಿಂತ, ಸಂಜೀವಿನಿ ದಾರಿ ದೀಪ ನಿರ್ವಹಣೆ ಗುತ್ತಿಗೆದಾರರು ಸದಸ್ಯರ ದೂರವಾಣಿಗೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು ದಾರಿ ದೀಪ ನಿರ್ವಹಣೆ ಗುತ್ತಿಗೆದಾರರ ಅವಧಿ ಮುಕ್ತಾಯದ ಹಂತದಲ್ಲಿದೆ. ಈ ಬಗ್ಗೆ ಹೊಸ ಟೆಂಡರ್ ಕರೆಯಲಾಗುತ್ತಿದೆ ಎಂದರು. ಶಾಸಕರು, ಸಂಸದರ ವೇತನ ಸರಕಾರ ಹೆಚ್ಚಿಸುತ್ತಿದೆ. ಹಾಗೆಯೇ ಪುರಸಭಾ ಸದಸ್ಯರ ಗೌರವ ಧನವನ್ನು ಹೆಚ್ಚಿಸುವಂತೆ ಕೈಗೊಂಡ ನಿರ್ಣಯಕ್ಕೆ ಸ್ಪಂದನೆ ದೊರಕಿದೆಯೇ ಎಂದು ಸದಸ್ಯ ಗಂಗಾಧರ್ ಪ್ರಶ್ನಿಸಿದಾಗ ನಿರ್ಣಯವನ್ನು ಸರಕಾರಕ್ಕೆ ರಮಾನಿಸಲಾಗಿದೆ ಎಂದು ಮುಖ್ಯಾಧಿಕಾರಿ ಸುಧಾಕರ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ವಾಸು ಪೂಜಾರಿ, ಶೀಘ್ರದಲ್ಲೇ ರಾಜ್ಯದ ವಿವಿಧ ಪುರಸಭೆ, ನಗರ ಪಂಚಾಯತ್, ಪಾಲಿಕೆ, ನಗರ ಸಭಾ ಸದಸ್ಯರನ್ನೊಳಗೊಂಡ ನಿಯೋಗವನ್ನು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಕುರಿತ ಅಹವಾಲು ಮಂಡಿಸಲಿದ್ದಾರೆ. ಆಗ ನಮ್ಮ ಪುರಸಭೆಯಿಂದಲೂ ಕೈ ಜೋಡಿಸಿದರೆ ಉತ್ತಮ ಎಂದರು. ಇದಕ್ಕೆ ಅಧ್ಯಕ್ಷರು ಸಹ ಮತ ವ್ಯಕ್ತಪಡಿಸಿದರು.

ಲೆಕ್ಕ ಪತ್ರ ಗದ್ದಲ

ಸಭೆ ಮುಕ್ತಾಯದ ಹಂತ ತಲುಪುತ್ತಿದ್ದಂತೆ ಕಲಾಪಕ್ಕೆ ಹಾಜರಾದ ಆಡಳಿತ ಪಕ್ಷದ ಸದಸ್ಯ ಸದಾಶಿವ ಬಂಗೇರ, ಸಜಿಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ನಿರ್ಮಾಣ ಹಂತದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ 2011-12ನೆ ಸಾಲಿನ 13ನೆ ಹಣಕಾಸಿನಡಿ ಕಾದಿರಿಸಲಾದ 68.40 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ನಡೆದಿದೆಯೇ? ಇಲ್ಲದಿದ್ದರೆ ಆ ಹಣ ಯಾವ ಖಾತೆಯಲ್ಲಿ ಜಮೆಯಾಗಿದೆ? ಕಾಮಗಾರಿಯಾಗಿದ್ದರೆ ಎಷ್ಟು ಖರ್ಚಾಗಿದೆ? ಎಂದು ನೇರವಾಗಿ ಮುಖ್ಯಾಧಿಕಾರಿಯನ್ನು ಪ್ರಶ್ನಿಸಿದರು. ಈ ವಿಚಾರದಲ್ಲಿ ಸುದೀರ್ಘ ಎರಡು ತಾಸುಗಳ ಕಾಲ ಚರ್ಚೆ ನಡೆಯಿತು.

ಕೊನೆಗೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಸುಧಾಕರ್ ಈ ಕುರಿತ ಎಲ್ಲ ಲೆಕ್ಕಪತ್ರದ ದಾಖಲೆಯನ್ನು ಲಿಖಿತ ರೂಪದಲ್ಲಿ ಮುಂದಿನ ಸಭೆಗೆ ಒದಗಿಸಲಾಗುವುದು ಎಂದು ಚರ್ಚೆಗೆ ತೆರೆ ಎಳೆದರು.

ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು ವೇದಿಕೆಯಲ್ಲಿದ್ದು ಕಲಾಪಕ್ಕೆ ಅಧ್ಯಕ್ಷರೊಂದಿಗೆ ಸಹಕರಿಸಿದರು. ವಸಂತಿ ಚಂದಪ್ಪ, ಯಾಸ್ಮೀನ್, ಜಗದೀಶ್ ಕುಂದರ್, ಮುಹಮ್ಮದ್ ಇಕ್ಬಾಲ್, ಮುನೀಶ್ ಅಲಿ, ಬಿ.ಮೋಹನ್, ಶರೀಪ್, ಮುಮ್ತಾರ್ ನಾಮನಿರ್ದೇಶಕ ಸದಸ್ಯರು ಮೊದಲಾದವರು ಚರ್ಚೆಯಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X