Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಾಮಳೆಗೆ ಬೆಂಗಳೂರಿನಲ್ಲಿ ಜನಜೀವನ...

ಮಹಾಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ

ನಗರದ ಹಲವಡೆ ಟ್ರಾಫಿಕ್‌ ಜಾಮ್‌ , 10ಕ್ಕೂ ಅಧಿಕ ಅಪಾರ್ಟ್‌‌ಮೆಂಟ್‌ಗಳಿಗೆ ನುಗ್ಗಿದ ನೆರೆ ನೀರು

ವಾರ್ತಾಭಾರತಿವಾರ್ತಾಭಾರತಿ29 July 2016 11:29 AM IST
share
ಮಹಾಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ

ಬೆಂಗಳೂರು, ಜು.29: ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಕಳೆದ  ರಾತ್ರಿಯಿಡೀ  ಸುರಿದ ಮಳೆಯಿಂದಾಗಿ ಬೆಂಗಳೂರು ತತ್ತರಗೊಂಡಿದೆ. ನಗರದ  ಹಲವಡೆ ಟ್ರಾಫಿಕ್‌ ಜಾಮ್‌ ಆಗಿದೆ.
 ನಗರದ 20ಕ್ಕೂ ಹೆಚ್ಚು ಕಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಎಲ್ಲಾ ರಿಂಗ್‌ ರಸ್ತೆಗಳಲ್ಲೂ ಟ್ರಾಫಿಕ್‌ ಜಾಮ್‌ ಆಗಿದೆ.

ಮಾಗಡಿ ರಸ್ತೆ, ಮಲ್ಲೆಶ್ವರಂ, ಯಶವಂತಪುರ, ಶೇಷಾದ್ರಿಪುರಂ, ಅಲಸೂರು, ಕೆ.ಆರ್.ಪುರ, ಹೆಬ್ಬಾಳ ಸೇರಿದಂತೆ ಹಲವಡೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪಿಇಎಸ್ ಕಾಲೇಜು ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ವಾಹನ ಚಾಲಕರು ವಾಹನ ಚಲಾಯಿಸಲು ಪರದಾಡುತ್ತಿದ್ದಾರೆ. ಕಚೇರಿ, ಶಾಲಾ, ಕಾಲೇಜುಗಳಿಗೆ ತೆರಳುವ ಮಂದಿ   ತೊಂದರೆ, ಎದುರಿಸುವಂತಾಗಿದೆ. ಸಂಚಾರ  ದಟ್ಟಣೆಯಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. 

ಕೋಡಿಚಿಕ್ಕನಹಳ್ಳಿ ಕೆರೆ ಭರ್ತಿಯಾಗಿದೆ. ಇದರಿಂದಾಗಿ  ಹಲವಡೆ ನೆರೆ ನೀರು ನುಗ್ಗಿದೆ. ಕೋಡಿಚಿಕ್ಕನಹಳ್ಳಿ, ಮಂಜುನಾಥ್‌ ಲೇಔಟ್‌  ಮತ್ತಿತರ ಕಡೆಗಳಲ್ಲಿ ಮನೆ ಅಪಾರ್ಟ್‌‌ಮೆಂಟ್‌ಗಳಿಗೆ ನೆರೆ ನೀರು ನುಗ್ಗಿದೆ. ಕೋಡಿಚಿಕ್ಕನಹಳ್ಳಿ ರಸ್ತೆ ಕೆರೆಯಂತಾಗಿದೆ.  ರಸ್ತೆಯಲ್ಲಿ ಮೂರರಿಂದ ನಾಲ್ಕರಷ್ಟು ಅಡಿ ನೆರೆ ನೀರು ನಿಂತಿದೆ.  ಅಗ್ನಿಶಾಮಕದಳದ ಸಿಬಂದಿಗಳು ಕಾರ್ಯಾಚರಣೆ ನಡೆಸಿ ತೊಂದರೆಗೊಳಗಾದವರನ್ನು ರಕ್ಷಿಸುತ್ತಿದ್ದಾರೆ.10ಕ್ಕೂ ಅಧಿಕ ಅಪಾರ್ಟ್‌‌ಮೆಂಟ್‌ಗಳಿಗೆ ನೆರೆ ನೀರುನುಗ್ಗಿದೆ. ಕಟ್ಟಡದಲ್ಲಿ ಸಿಲುಕಿಕೊಂಡವರಿಗೆ ಬೋಟ್ ಮೂಲಕ  ನೀರು ಹಾಗೂ ಆಹಾರದ ಪೊಟ್ಟಣವನ್ನು ತಲುಪಿಸಲಾಗುತ್ತಿದೆ.  

ಎಲೆಕ್ಟ್ರಾನಿಕ್ಸ್‌ ಸಿಟಿ ಪಕ್ಕದ ಚಿಕ್ಕಬೇಗೂರು ಕೆರೆ ತುಂಬಿ  ಹರಿಯುತ್ತಿದೆ.ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ ಜಂಕ್ಷನ್‍ನಲ್ಲಿ ಟ್ರಾಫಿಕ್ ಉಂಟಾಗಿದೆ. ರಾಮಮೂರ್ತಿ ನಗರದ ಫ್ಲೈ ಓವರ್ ಕೆಳಗಿನ ರಸ್ತೆ ಕೆರೆಯಂತಾಗಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮತ್ತು ಜೆಪಿ ನಗರದ ಎರಡನೇ ಹಂತದಲ್ಲಿ ಮರ ಧರೆಗುರುಳಿದೆ.ಮಡಿವಾಳ ಕೆರೆ ತುಂಬಿ  ನೀರು ರಸ್ತೆಗೆ ಬರುತ್ತಿದೆ. ನೀರಿನೊಂದಿಗೆ ಮೀನು ಬರುತ್ತಿದ್ದು,  ಇದೇ ವೇಳೆ ಕೆಲವರು ಮೀನು ಹಿಡಿದು ಚೀಲಕ್ಕೆ ತುಂಬಿಕೊಳ್ಳುತ್ತಿದ್ದಾರೆ.

ಬಿಟಿಎಂಲೇಔಟ್ ನಲ್ಲಿ ಸಾಫ್ಟ್ ವೇರ‍್ ಕಂಪನಿ ಟಿಇಎಸ್‌ ಇಲೆಕ್ಟ್ರಾನಿಕ್ಸ್ ಸಲ್ಯೂಸನ್ಸ್ ಕಂಪನಿಯೊಂದಕ್ಕೆ ನೆರೆ ನೀರು  ನುಗ್ಗಿದೆ. ಜನರೇಟರ್‌, ಬ್ಯಾಟರಿ ಕಾರುಗಳು ನೀರಿನಲ್ಲಿ ಮುಳುಗಿದೆ. ವಿದ್ಯುತ್‌ ಸಂಪರ್ಕ  ಕಡಿದು ಹೋಗಿದೆ.ಹೊಂಗಸಂದ್ರದಲ್ಲಿ ನೀರು  ತುಂಬಿ ಹರಿದು ಹಲವು ಮನೆಗಳಿಗೆ ನೀರು ನುಗ್ಗಿದೆ. ದುರ್ವಾಸನೆಯಿಂದ ಕೂಡಿರುವ ನೀರನ್ನು ಹೊರಹಾಕಲು ಜನರು ಪರದಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ರಾತ್ರಿ 4 ಸೆ.ಮೀ ಮಳೆ ಸುರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X