Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘಪರಿವಾರದಿಂದ ಸಂವಿಧಾನವನ್ನು ಬುಡಮೇಲು...

ಸಂಘಪರಿವಾರದಿಂದ ಸಂವಿಧಾನವನ್ನು ಬುಡಮೇಲು ಮಾಡುವ ಪ್ರಯತ್ನ: ಜಯನ್ ಮಲ್ಪೆ

ವಾರ್ತಾಭಾರತಿವಾರ್ತಾಭಾರತಿ29 July 2016 6:40 PM IST
share
ಸಂಘಪರಿವಾರದಿಂದ ಸಂವಿಧಾನವನ್ನು ಬುಡಮೇಲು ಮಾಡುವ ಪ್ರಯತ್ನ: ಜಯನ್ ಮಲ್ಪೆ

ಮಂಗಳೂರು,ಜು.29: ದಲಿತ, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುತ್ತಿರುವ ಸಂಘಪರಿವಾರ ಸಂವಿಧಾನವನ್ನು ಬುಡಮೇಲು ಮಾಡುವಂತಹ ಕೆಲಸ ಮಾಡುತ್ತಿದೆ. ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮತಿಯನ್ನು ಹೇರುವ ಪ್ರಯತ್ನವನ್ನು ಮಾಡುತ್ತಿದೆ ಎಂದು ದಲಿತ ಮುಖಂಡ ಜಯನ್ ಮಲ್ಪೆ ಆಪಾದಿಸಿದ್ದಾರೆ.

ಅವರು ಇಂದು ದ.ಕ ಜಿಲ್ಲಾ ದಲಿತ ಹಾಗೂ ಅಲ್ಪಸಂಖ್ಯಾತ ದೌರ್ಜನ್ಯ ವಿರೋಧಿ ಸಂಘಟನೆಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ದೇಶವ್ಯಾಪಿ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ವಿರೋಧಿಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳಿಂದ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ದೇಶದಲ್ಲಿ ಮೋದಿ ಆಡಳಿತ ಆರಂಭವಾದ ನಂತರ ದಲಿತ ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ದೇಶವನ್ನು ಮಾಂಸ ತಿಂದವರು ಹಾಳು ಮಾಡುತ್ತಿಲ್ಲ. ತುಪ್ಪ ತಿಂದವರು ಹಾಳು ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ನಾವೆಲ್ಲ ಒಂದು ನಾವೆಲ್ಲ ಹಿಂದೂ ಎಂದು ಘೋಷಣೆಗಳನ್ನು ಹಾಕುವ ಸಂಘಪರಿವಾರ ದಲಿತರ ಮೇಲೆ ದೌರ್ಜನ್ಯವೆಸಗುತ್ತಿದೆ. ದಲಿತರು ದೇಶವನ್ನು ಆಳುವ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದು ಹೇಳಿದರು. ಉಡುಪಿ ಕೃಷ್ಣ ಮಠದ ಪೇಜಾವರ ಸ್ವಾಮೀಜಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ವೌನವಾಗಿದ್ದಾರೆ ಎಂದು ಆರೋಪಿಸಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ, ದೇಶದಲ್ಲಿ ದಲಿತರ, ಮುಸ್ಲಿಮರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ದಿನನಿತ್ಯ 27 ದಲಿತರ ಮೇಲೆ ಹಲ್ಲೆ ನಡೆಯುತ್ತಿದೆ. ಪ್ರತಿವಾರ 13 ದಲಿತರ ಹತ್ಯೆಯಾಗುತ್ತಿದೆ, ಪ್ರತಿವಾರ 5 ದಲಿತರ ಮನೆ ಧ್ವಂಸವಾಗುತ್ತಿದೆ, 3 ಮಹಿಳೆಯರು ಮಾನಭಂಗಕ್ಕೊಳಗಾಗುತ್ತಿದ್ದಾರೆ. ಮುಸ್ಲಿಮರ ಮೇಲೆಯೂ ನಿರಂತರ ದಾಳಿಯಾಗುತ್ತಿದೆ . ಈ ದಾಳಿಗಳು ದೇಶವನ್ನು ಹಿಂದುತ್ವ ರಾಷ್ಟ್ರ ಮಾಡುವ ಷಡ್ಯಂತ್ರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಪ್ರತಿಭಟನಾ ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ರಘುವೀರ್ ಸೂಟರ್‌ಪೇಟೆ, ಚಂದ್ರಕುಮಾರ್, ಕೂಸಪ್ಪ .ಎಂ, ನವಾಝ್ ಉಳ್ಳಾಲ, ಶೇಖರ ಹೆಜಮಾಡಿ, ರಾಜಾರಾಂ ಡಿ., ಆನಂದ ಮಿತ್ತಬೈಲು, ಶೇಷಪ್ಪ ನೆಕ್ಕಿಲ್, ರಮೇಶ್ ಕೋಟ್ಯಾನ್, ನಿರ್ಮಲ್‌ಕುಮಾರ್, ಆನಂದ ಬೆಳ್ಳಾರೆ , ಜಲೀಲ್ ಕೃಷ್ಣಾಪುರ, ರಿಯಾಝ್ ಫರಂಗಿಪೇಟೆ, ಸೇಷಪ್ಪ ಬೆದ್ರಕಾಡು, ವಿಠಲ ಭಂಡಾರಿ, ದೇವದಾಸ್, ರಘು ಎಕ್ಕಾರ್, ಅಶೋಕ್ ಕೊಂಚಾಡಿ, ಪ್ರಕಾಶ್ ಕೋಡಿಕಲ್ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಗಿಂತ ಮೊದಲು ಪುರಭವನದಿಂದ ದ.ಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X