Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತರು-ಮುಸ್ಲಿಮರ ಮೇಲೆ ದಾಳಿ ಹೆಚ್ಚಳ:...

ದಲಿತರು-ಮುಸ್ಲಿಮರ ಮೇಲೆ ದಾಳಿ ಹೆಚ್ಚಳ: ಸರಕಾರದ ವಿರುದ್ಧ ವಿಪಕ್ಷ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ29 July 2016 7:00 PM IST
share
ದಲಿತರು-ಮುಸ್ಲಿಮರ ಮೇಲೆ ದಾಳಿ ಹೆಚ್ಚಳ: ಸರಕಾರದ ವಿರುದ್ಧ ವಿಪಕ್ಷ ವಾಗ್ದಾಳಿ

ಹೊಸದಿಲ್ಲಿ, ಜು.29: ಗೋಮಾಂಸ ವಿವಾದದಲ್ಲಿ ಮಧ್ಯಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಮಹಿಳೆಯರನ್ನು ಥಳಿಸಿದ ವಿಚಾರದಲ್ಲಿ ವಿಪಕ್ಷವಿಂದು ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ದಲಿತರು ಹಾಗೂ ಮುಸ್ಲಿಮರ ವಿರುದ್ಧ ಹೆಚ್ಚು ಹೆಚ್ಚು ಹಿಂಸಾಚಾರಗಳು ನಡೆಯುತ್ತಿವೆಯೆಂದು ಅದು ಆರೋಪಿಸಿದೆ. ಪ್ರಕರಣದಲ್ಲಿ ನ್ಯಾಯ ಒದಗಿಸುವ ಆಶ್ವಾಸನೆಯನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ನೀಡಿದ್ದಾರೆ.
 ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ದಲಿತರ ಮೇಲಿನ ದಾಳಿ ಘಟನೆಗಳ ಅಂಕಿ-ಅಂಶಗಳನ್ನು ಬಿಚ್ಚಿಟ್ಟರು. ಮಧ್ಯಪ್ರದೇಶದ ಮಂಡ್ಸೌರ್, ಗುಜರಾತ್‌ಗಳಲ್ಲಿ ಉತ್ತರಪ್ರದೇಶದಲ್ಲಿ ಇಬ್ಬರು ದಲಿತರ ಹತ್ಯೆ ಪ್ರಕರಣಗಳನ್ನು ಅವರು ತನ್ನ ಹೇಳಿಕೆಗೆ ಆಧಾರವಾಗಿ ನೀಡಿದರು.
ಗೌ ರಕ್ಷಾ ಸಂಘದಂತಹ ಗೋರಕ್ಷಣಾ ಗುಂಪುಗಳನ್ನು ನಿಷೇಧಿಸುವಂತೆ ಆಗ್ರಹಿಸಿದ ಖರ್ಗೆ, ಅವು ಕಾನೂನನ್ನು ಕೈಗೆತ್ತಿಕೊಳ್ಳುತ್ತಿವೆ. ಅವುಗಳಿಗೆ ರಾಜ್ಯಗಳ ಬಿಜೆಪಿ ಸರಕಾರಗಳು ಪ್ರೋತ್ಸಾಹ ನೀಡುತ್ತಿವೆಯೆಂದು ಆರೋಪಿಸಿದರು.
ಅಂತಹ ಘಟನೆಗಳಲ್ಲಿ ಸಂಘಪರಿವಾರ ಹಾಗೂ ಬಿಜೆಪಿ ಸದಸ್ಯರು ಕೂಡ ಒಳಗೊಂಡಿರುತ್ತಾರೆ. ಸರಕಾರದ ಬೆಂಬಲವಿದ್ದಾಗಲಷ್ಟೇ ಅಂತಹ ಘಟನೆಗಳು ನಡೆಯಲು ಸಾಧ್ಯ ಎಂದು ವಾಗ್ದಾಳಿ ನಡೆಸಿದ ಖರ್ಗೆ, ಉತ್ತರಪ್ರದೇಶದಲ್ಲಿ ದಲಿತ ದಂಪತಿಯನ್ನು ಥಳಿಸಿಕೊಂದ ವರದಿಯನ್ನು ಉಲ್ಲೇಖಿಸಿದರು.
ತಾವು ಎಮ್ಮೆಯ ಮಾಂಸ ಒಯ್ಯುತ್ತಿದ್ದೇವೆ. ಗೋ ಮಾಂಸವನ್ನಲ್ಲವೆಂದು ಆ ಮಹಿಳೆಯರಿಬ್ಬರೂ ಅಂಗಲಾಚುತ್ತಿದ್ದರೂ ಅದರ ರಸೀದಿಯನ್ನು ತೋರಿಸಿದ್ದರೂ, ಅವರನ್ನು ಪೊಲೀಸರ ಮುಂದೆಯೇ ಥಳಿಸಲಾಯಿತು. ಅವರು ಪುರುಷರಾಗಿರುತ್ತಿದ್ದರೆ, ಹತ್ಯೆ ಮಾಡುತ್ತಿದ್ದೇವೆಂದು ದುಷ್ಕರ್ಮಿಗಳು ಅವರಿಗೆ ಹೇಳಿದ್ದರು. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ ಅದು ಎಮ್ಮೆಯ ಮಾಂಸವೆಂದು ಸಾಬೀತಾಗಿದೆ ಎಂದವರು ವಾಗ್ದಾಳಿ ನಡೆಸಿದರು.
ಪ್ರತಿ 80 ನಿಮಿಷಗಳಿಗೊಂದು ದಲಿತರ ವಿರುದ್ಧ ಅಪರಾಧ ನಡೆಯುತ್ತಿದೆ. ಪ್ರತಿ ದಿನ ಮೂವರು ದಲಿತ ಮಹಿಳೆಯರ ಅತ್ಯಾಚಾರ ನಡೆಯುತ್ತಿದೆ.ಇಬ್ಬರು ದಲಿತರ ಹತ್ಯೆ ನಡೆಯುತ್ತಿದೆಯೆಂದು ಖರ್ಗೆ ರಾಷ್ಟ್ರೀಯ ಅಪರಾಧ ಅಂಕಿ-ಅಂಶವನ್ನು ಉಲ್ಲೇಖಿಸಿದರು.
ಅಂತಹದು ಈ ಹಿಂದೆಯೂ ನಡೆದಿದೆಯೆಂದು ಸರಕಾರ ಹೇಳುತ್ತದೆ. ಆದರೆ, ಈ ಸರಕಾರ ಬಂದ ಬಳಿಕ ಅಂತಹ ಘಟನೆಗಳು ಹೆಚ್ಚಾಗಿವೆ. ಅದಕ್ಕೆ ಸರಕಾರದ ಬೆಂಬಲವಿದೆ ಎಂದು ಅವರು ಆರೋಪಿಸಿದರು. ಅವರಿಗೆ ಟಿಎಂಸಿ ಸದಸ್ಯರು ಬೆಂಬಲ ನೀಡಿದರು.
ಮಧ್ಯಪ್ರದೇಶದ ಘಟನೆಯ ಕುರಿತು ಸಂಕ್ಷಿಪ್ತ ಉತ್ತರ ನೀಡಿದ ರಾಜನಾಥ್, ಅದೊಂದು ಕಾನೂನು ಸುವ್ಯವಸ್ಥೆಯ ವಿಚಾರವಾಗಿದೆ. ಅದು ರಾಜ್ಯಕ್ಕೆ ಸಂಬಂಧಿಸಿದುವೆಂದು ತಾವೆಲ್ಲರೂ ತಿಳಿದಿದ್ದೇವೆ. ಮಧ್ಯಪ್ರದೇಶ ಸರಕಾರ ತುರ್ತು ಹಾಗೂ ಪರಿಣಾಮಕಾರಿ ಕ್ರಮ ಕೈಗೊಂಡಿದೆ. ತನಿಖೆ ನಡೆಯುತ್ತಿದೆ. ನ್ಯಾಯ ಒದಗಿಸಲಾಗುವುದು ಹಾಗೂ ತಪ್ಪಿತಸ್ಥರನ್ನು ಬಿಡುವುದಿಲ್ಲವೆಂದು ತಾನು ಭರವಸೆ ನೀಡುತ್ತೇನೆ ಎಂದರು.
ಅವರ ಉತ್ತರದಿಂದ ತೃಪ್ತರಾಗದ ಕಾಂಗ್ರೆಸ್, ಟಿಎಂಸಿ ಹಾಗೂ ಎಡ ಪಕ್ಷಗಳು ಸೇರಿದಂತೆ ವಿಪಕ್ಷಗಳ ಸದಸ್ಯರು ಸದನ ಬಹಿಷ್ಕರಿಸಿ ಹೊರ ನಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X