Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭೆಯಲ್ಲಿ ನಿರುದ್ಯೋಗ ಗದ್ದಲ

ರಾಜ್ಯಸಭೆಯಲ್ಲಿ ನಿರುದ್ಯೋಗ ಗದ್ದಲ

ವಾರ್ತಾಭಾರತಿವಾರ್ತಾಭಾರತಿ29 July 2016 8:11 PM IST
share
ರಾಜ್ಯಸಭೆಯಲ್ಲಿ ನಿರುದ್ಯೋಗ ಗದ್ದಲ

ಹೊಸದಿಲ್ಲಿ, ಜು.29: ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ಶುಕ್ರವಾರ, ನಿರುದ್ಯೋಗ ಸಮಸ್ಯೆಯು ಕಲಾಪವನ್ನೇ ಬಲಿ ತೆಗೆದುಕೊಂಡಿದೆ.

ದೇಶದಲ್ಲಿ ನಿರಾಸೆಯ ವಾತಾವರಣವಿದೆಯೆಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು. ಅದಕ್ಕೆ ತಿರುಗೇಟು ನೀಡಿದ ಬಿಜೆಪಿ, ನಿರಾಸೆ ಬಹುಶಃ ಕಾಂಗ್ರೆಸ್‌ನಲ್ಲಿದೆಯೆಂದು ಚುಚ್ಚಿತು. ಇದು ಕೋಲಾಹಲಕ್ಕೆ ಕಾರಣವಾಗಿ ಸದನ ಮುಂದೂಡಲ್ಪಟ್ಟಿತ್ತು.
ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ. ಸರಕಾರವು ಪ್ರತಿ ವರ್ಷ 2 ಕೋಟಿ ಉದ್ಯೋಗಗಳ ಭರವಸೆ ನೀಡಿತ್ತು. ಅದು ಎಲ್ಲ ರೀತಿಯ ಘೋಷಣೆಗಳನ್ನು ಮಾಡುತ್ತಿದೆ. ಆದರೆ, ಯಾರಿಗೂ ಉದ್ಯೋಗ ದೊರೆಯುತ್ತಿಲ್ಲ ಎಂದರು.
ಅದಕ್ಕೆ ದನಿ ಗೂಡಿಸಿದ ಸಿಪಿಎಂ ಸದಸ್ಯ ಸೀತಾರಾಮ ಯೆಚೂರಿ, ಪ್ರತಿ ವರ್ಷ 1.3 ಕೋಟಿ ಯುವಕರು ಉದ್ಯೋಗ ಮಾರುಕಟ್ಟೆಗೆ ಸೇರುತ್ತಿದ್ದಾರೆ. ಸಂಘಟಿತ ವಲಯಗಳಲ್ಲಿರುವ ಉದ್ಯೋಗಗಳು ಶೇ.7ಕ್ಕಿಂತ ಕಡಿಮೆ. ಶೇ.93ರಷ್ಟು ಉದ್ಯೋಗಗಳು ಅಸಂಘಟಿತ ವಲಯದ ಉದ್ಯೋಗಗಳಾಗಿವೆಯೆಂದು ತಿಳಿಸಿದರು.
ಇದೊಂದು ಗಂಭೀರ ವಿಷಯವಾಗಿದೆ. ದೇಶದಲ್ಲಿ ಯುವಜನತೆ ನಿರಾಸೆಗೊಳ್ಳುವ ಪರಿಸ್ಥಿತಿ ಇದೆ. ಅವರಿಗೆ ಉದ್ಯೋಗ ಸಿಗುತ್ತಿಲ್ಲ. ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕು. ಕೇವಲ ಸ್ಟಾರ್ಟಪ್ ಹಾಗೂ ಮೇಕಿನ್ ಇಂಡಿಯಾಗಳ ಬಗ್ಗೆ ಮಾತನಾಡುವುದರಿಂದ ಏನೂ ಪ್ರಯೋಜನವಾಗದೆಂದು ಕಾಂಗ್ರೆಸ್‌ನ ಆನಂದ ಶರ್ಮ ಹೇಳಿದರು.
ಅದಕ್ಕುತ್ತರಿಸಿದ ಸಂಸದೀಯ ವ್ಯವಹಾರಗಳ ಸಹಾಯಕ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ, ದೇಶದಲ್ಲಿ ವಿಶ್ವಾಸ ಹಾಗೂ ಅಭಿವೃದ್ಧಿಯ ವಾತಾವರಣವಿದೆ. ಪ್ರತಿ ಕ್ಷೇತ್ರದಲ್ಲೂ ಉದ್ಯೋಗಾವಕಾಶ ವೃದ್ಧಿಯಾಗಿದೆ. ದೇಶದಲ್ಲಿ ನಿರಾಸೆ ತುಂಬಿದೆಯೆಂದು ಆನಂದ್ ಶರ್ಮ ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಮಿತ್ರರೊಳಗೇ ನಿರಾಸೆಯಿದ್ದರೆ ಅದಕ್ಕೆ ತಾವೇನೂ ಮಾಡಲಾಗುವುದಿಲ್ಲವೆಂದು ಛೇಡಿಸಿದರು.
ತಮ್ಮ ಪಕ್ಷದ ಹೆಸರು ಉಲ್ಲೇಖಿಸುವುದು ಹಾಗೂ ಅದು ನಿರಾಸೆಯಲ್ಲಿವೆಯೆಂದು ಹೇಳುವುದು ಅಸಾಂಸದೀಯವೆಂದು ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದರು. ಅದಕ್ಕೆ ಪ್ರತಿ ಬಾಣ ಪ್ರಯೋಗಿಸಿದ ನಕ್ವಿ, ದೇಶದಲ್ಲಿ ನಿರಾಸೆಯ ವಾತಾವರಣವಿದೆಯೆನ್ನುವುದೂ ಅಷ್ಟೇ ಅಸಾಂಸದೀಯ ಎಂದರು.
ಅಸಾಂಸದೀಯ ಹೇಳಿಕೆಗಳನ್ನು ಕಡತದಿಂದ ಅಳಿಸಲಾಗುವುದೆಂದು ಉಪಸಭಾಪತಿ ಪಿ.ಜೆ. ಕುರಿಯನ್ ಎರಡೂ ಪಕ್ಷಗಳಿಗೆ ಭರವಸೆ ನೀಡಿದರು.
ಆದಾಗ್ಯೂ, ಕಾಂಗ್ರೆಸ್ ಸದಸ್ಯರು ಸದನದ ಅಂಗಳಕ್ಕಿಳಿದು ಘೋಷಣೆ ಕೂಗತೊಡಗಿದುದರಿಂದ ಕಲಾಪವನ್ನು ಮಧ್ಯಾಹ್ನ 12ರವರೆಗೆ ಮುಂದೂಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X