Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ದಲಿತರ ಮೇಲಿನ...

ಬೆಳ್ತಂಗಡಿ: ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ29 July 2016 9:09 PM IST
share
ಬೆಳ್ತಂಗಡಿ: ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಧರಣಿ

ಬೆಳ್ತಂಗಡಿ, ಜು.29: ದಲಿತರ ಮೇಲಿನ ದಾಳಿಯು ಸಂಘಪರಿವಾರದ ಪ್ರಾಯೋಜಕತ್ವದಲ್ಲಿ ನಡೆಯುತ್ತಿದ್ದು ಅವರ ಸಂಚಿಗೆ ಬಲಿಯಾದ ಯುವಕರು ಕ್ರಿಮಿನಲ್‌ಗಳಾಗಿ ಇಂತಹ ಹೇಯ ಕೃತ್ಯವೆಸಗುತ್ತಾರೆ. ಇದನ್ನು ವಿರೋಧಿಸಬೇಕಾಗಿದೆ ಎಂದು ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್ ಹೇಳಿದ್ದಾರೆ.

ಶುಕ್ರವಾರ ದಲಿತ ಹಕ್ಕು ಸಮಿತಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಡಿವೈಎಫ್‌ಐ ಸಂಘಟನೆಗಳ ಬೆಳ್ತಂಗಡಿ ತಾಲೂಕು ಸಮಿತಿಗಳ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ನಡೆಸಿದ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತಾಡುತ್ತಿದ್ದರು.

ಸತ್ತ ದನಗಳ ಚರ್ಮ ತೆಗೆಯುವ ವೃತ್ತಿಯನ್ನೇ ಮಾಡುವ ದಲಿತರ ಚರ್ಮ ಸುಲಿದ ಸಂಘಪರಿವಾರದ ಹೇಯಕೃತ್ಯಗಳನ್ನು ಮಾನವೀಯತೆ ಇರುವ ನಾವು ಖಂಡಿಸಲೇಬೇಕು. ಜಾತಿ ಪದ್ದತಿ ನಾಶ ಆಗುವ ವರೆಗೆ ಹೋರಾಟಕ್ಕೆ ಸಿದ್ದರಾಗಬೇಕು. ಇಲ್ಲವೆಂದರೆ ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ನಾಶ ಮಾಡಲು ಈ ಕೋಮುವಾದಿಗಳು ಮುಂದಾಗುತ್ತಾರೆ. ನಿಜವಾದ ದೇಶದ್ರೋಹಿಗಳಾದ ಈ ಕೋಮುವಾದಿ ಶತ್ರುಗಳಾಗಿದ್ದಾರೆ ಎಂದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂದೇಶದಂತೆ ಭೂಮಿಯ ರಾಷ್ಟ್ರೀಕರಣಕ್ಕಾಗಿ, ನೈಜ ಸ್ವಾತಂತ್ರ್ಯಕ್ಕಾಗಿ ಹೋರಾಡೋಣ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ದಲಿತರಾದ ವಿಠಲ ಮಲೆಕುಡಿಯ, ಸುಂದರ ಮಲೆಕುಡಿಯರ ಮೇಲೆ ನಡೆದ ದಾಳಿ ಈ ತಾಲೂಕಿನಲ್ಲಿ ಪ್ರತ್ಯಕ್ಷವಾಗಿ ಇದೆ. ಸುಂದರ ಮಲೆಕುಡಿಯರಿಗೆ ಒಂದು ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ಭೂಮಿಯ ಹಕ್ಕುಗಳನ್ನು ದಲಿತರಿಗೆ ನೀಡುವಲ್ಲಿ ವಿಫಲವಾದ ಸರಕಾರಗಳು, ದಲಿತರ ಮೇಲಿನ ದಾಳಿಯನ್ನು ನಗಣ್ಯ ಮಾಡುತ್ತಿದೆ ಎಂದರು. ಮುಸ್ಲಿಮರನ್ನು ಶತ್ರುವಾಗಿಸಿ ದಾಳಿ ನಡೆಸುತ್ತಾ, ಸಂಘಟಿತಗೊಂಡ ಕೋಮುವಾದಿಗಳು ಆರೆಸ್ಸೆಸ್. ಸಿದ್ದಾಂತದ ಜಾರಿಗಾಗಿ ಭಾರತದ ಮೂಲನಿವಾಸಿಗಳಾದ ದಲಿತರನ್ನು ಓಡಿಸಲು ಈ ರೀತಿಯ ದೌರ್ಜನ್ಯ ಮಾಡುತ್ತಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಬೇಕು ಎಂದರು.

ಸಮಾಜ ಪರಿವರ್ತನಾ ವೇದಿಕೆಯ ಮುಖಂಡ ಡೀಕಯ್ಯ ಅವರು ಮಾತನಾಡಿ ಮನುವಾದಿ ಬ್ರಾಹ್ಮಣಶಾಹಿಗಳಿಂದ ದಲಿತ ಹಾಗೂ ಶೂದ್ರ ಜನಾಂಗ ಬಿಡುಗಡೆಯಾಗದೆ ನಮ್ಮ ಸಂವಿಧಾನದ ಉಳಿಸಲು ಅಸಾಧ್ಯ ಎಂದರು. ಮಹಿಳೆಯರನ್ನು ಮಾತೆ, ದೇವತೆ ಎಂದು ಗೌರವಿಸುವ ಭಾರತೀಯ ಸಂಸ್ಕೃತಿಯನ್ನೇ ಮರೆತ ಬಿಜೆಪಿ ಮುಖಂಡರೋರ್ವರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದಂತಹ ದಲಿತ ಮಹಿಳಾ ನಾಯಕಿ ಮಾಯಾವತಿ ಅವರನ್ನು ಕೆಟ್ಟ ಶಬ್ದಗಳಿಂದ ನಿಂದಿಸುತ್ತಾರೆಂದರೆ ಈ ಸಂಘಪರಿವಾರಗಳಿಗಿಂತ ಸಂಸ್ಕೃತಿಹೀನರು ಬೇರೆ ಯಾರಾದರೂ ಇದ್ದಾರೆಯೇ ಎಂದರು .

ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಹ ಸಂಚಾಲಕ ವಿಠಲ ಮಲೆಕುಡಿಯ, ಪಟ್ರಮೆ ಗ್ರಾಮ ಪಂಚಾಯತ್ ಸದಸ್ಯ ಶ್ಯಾಮರಾಜ್ ಪಟ್ರಮೆ ಮಾತಾಡಿದರು.

ಸಿಪಿಐ(ಎಂ) ತಾಲೂಕು ಮುಖಂಡರಾದ ಜಯರಾಮ ಮಯ್ಯ, ನೆಬಿಸಾ, ದಲಿತ ಹಕ್ಕುಗಳ ಸಮಿತಿಯ ತಾಲೂಕು ಮುಖಂಡರಾದ ಬಾಬು ಕೊಯ್ಯೂರು, ಈಶ್ವರಿ ಶೇಖರ ವೇಣೂರು, ಕರ್ತ, ಬಾಬು ಕೊಕ್ಕಡ, ಡಿವೈಎಫ್‌ಐ ಮುಖಂಡರುಗಳಾದ ಧನಂಜಯ ಗೌಡ, ವಸಂತ ಟೈಲರ್, ಮುಹಮ್ಮದ್ ಅನಸ್, ಯಮುನಾ, ರಾಮಚಂದ್ರ, ಸಿಐಟಿಯು ಮುಖಂಡರುಗಳಾದ ಜಯಶ್ರೀ, ಇಂದಿರಾ, ಪುಷ್ಪಾ, ಮೀನಾಕ್ಷಿ, ಕುಸುಮಾವತಿ, ಗಿರಿಜ, ಲಾರೆನ್ಸ್, ರೋಹಿಣಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X