Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀರಿನಲ್ಲಿ ಕೊಚ್ಚಿ ಹೋದ ಮಗು

ನೀರಿನಲ್ಲಿ ಕೊಚ್ಚಿ ಹೋದ ಮಗು

ಮುನ್ನೆಚ್ಚರಿಕೆ ನೀಡದೆ ನಾಲೆಗಳಿಗೆ ನೀರು ಹರಿಸಿದ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ29 July 2016 10:23 PM IST
share

ಕುಶಾಲನಗರ,ಜು.29: ಅಣೆಕಟ್ಟಿನ ಅಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಹಾರಂಗಿ ಜಲಾಶಯದಿಂದ ನಾಲೆಗಳಿಗೆ ನೀರನ್ನು ಹರಿಸಿದ ಪರಿಣಾಮವಾಗಿ ನಾಲೆಯ ಅಂಚಿನಲ್ಲಿ ಕುಳಿತಿದ್ದ ಮಗು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಹಾರಂಗಿಯ ಫಾರಂ ಬಳಿ ನಡೆದಿದೆ. ಕೂಡಿಗೆ ಗ್ರಾಪಂ ವ್ಯಾಪ್ತಿಯ ಸೀಗೆ ಹೊಸೂರು ಸಮೀಪದ ಮಾವಿನಹಳ್ಳ ಗ್ರಾಮದ ನಿವಾಸಿ ಕೈಬಲ್ಲಿರ ಭರತ್ ಮತ್ತು ಧರಣಿರವರ ಪುತ್ರ ಶಶಾಂಕ್(5) ಮೃತ ಬಾಲಕ. ಕೂಡಿಗೆಯ ಕಿಶೋರ ಕೇಂದ್ರದಲ್ಲಿ ಓದುತ್ತಿದ್ದ ಈ ಬಾಲಕ ಶಾಲೆಯಿಂದ ಅಜ್ಜಿಯ ಮನೆಗೆ ಬಂದಾಗ, ಅಜ್ಜಿ ಹಾರಂಗಿ ಎಡದಂಡೆ ನಾಲೆಯ ಬಳಿ ಬಟ್ಟೆ ತೊಳೆಯಲು ಹೋಗುವಾಗ, ಮೊಮ್ಮಗನನ್ನು ಕರೆದೊಯ್ದು ಕಾಲುವೆಯ ಮೆಟ್ಟಿಲ ಮೇಲೆ ಕೂರಿಸಿದ್ದಾಳೆ. ಈ ಸಂದರ್ಭ ಇದ್ದಕ್ಕಿದ್ದಂತೆಯೇ ನಾಲೆಯಲ್ಲಿ ನೀರು ಹರಿದು ಬಂದ ಕಾರಣ ಕೆಳಭಾಗದಲ್ಲಿ ಕುಳಿತಿದ್ದ ಮೊಮ್ಮಗ ಶಶಾಂಕ್ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ತಕ್ಷಣ ಅಜ್ಜಿ ನೆರೆಹೊರೆಯವರಿಗೆ ಸುದ್ದಿ ಮುಟ್ಟಿಸಿ ಜಲಾಶಯದ ಅಧಿಕಾರಿಗಳಿಗೆ ಕಾಲುವೆಯ ನೀರು ನಿಲ್ಲಿಸುವಂತೆ ಕೋರಿದ್ದಾರೆ. ಆ ವೇಳೆಗಾಗಲೇ ಸುಮಾರು 300 ಮೀಟರ್‌ಗಳಷ್ಟು ದೂರ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕನನ್ನು ಮೇಲೆತ್ತಿದಾಗ ಮೃತಪಟ್ಟಿದ್ದ. ರಾತ್ರಿ 9:30 ವೇಳೆಗೆ ಕಳೆಬರಹವನ್ನು ಕುಶಾಲನಗರ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ಜಿಪಂ ಮಾಜಿ ಅಧ್ಯಕ್ಷ ರಾಜಾರಾವ್, ಗ್ರಾಪಂ ಸದಸ್ಯ ಭಾಸ್ಕರ್ ನಾಯಕ್ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.

ಅಧಿಕಾರಿಗಳ ಮೇಲೆ ಪೋಷಕರು ಮತ್ತು ಸ್ಥಳೀಯರ ಆಕ್ರೋಶ:

  ಇಂದು ಬೆಳಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಜೆ.ಇ.ಮಹೇಶ್ ಸಂಬಂಧಪಟ್ಟ ನೀರಾವರಿ ಇಲಾಖೆಯ ಇಂಜಿನಿಯರ್‌ಗಳಾದ ಧರ್ಮರಾಜ್ ಮತ್ತು ನಾಗರಾಜ್ ಅವರನ್ನು ಠಾಣೆಗೆ ಕರೆಸಿ ಮೃತ ಬಾಲಕನ ಪೋಷಕರು ಮತ್ತು ಸ್ಥಳೀಯ ಮುಖಂಡರ ಸಮಕ್ಷಮದಲ್ಲಿ ಸಭೆ ನಡೆಸಿದರು. ನೀರಾವರಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಘಟನೆ ಸಂಭವಿಸಿದೆ. ತಕ್ಷಣ ಇವರ ಮೇಲೆ ಎಫ್‌ಐಆರ್ ದಾಖಲಿಸಿ, ಪರಿಹಾರ ಕೊಡಿಸಬೇಕೆಂದು ಮೃತನ ಪೋಷಕರು ಮತ್ತು ಸ್ಥಳೀಯರು ಒತ್ತಾಯಿಸಿದರು. ಆ ವೇಳೆಗೆ ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ಟಿ.ಕುಮಾರ್, ಆಕ್ರೋಶಗೊಂಡಿದ್ದ ಪೋಷಕರು ಹಾಗೂ ಸ್ಥಳೀಯರನ್ನು ಸಮಾಧಾನಿಸಿ, ಈಗ ಸಧ್ಯಕ್ಕೆ ಮೃತನ ಕಳೆಬರಹದ ಶವಪರೀಕ್ಷೆ ನಡೆಯಲು ಅವಕಾಶ ಕೊಡಿ. ನಂತರ ಅಧಿಕಾರಿಗಳ ಮೇಲೆ ಪ್ರಕರಣವನ್ನು ದಾಖಲಿಸಿ, ಅವರ ಮೇಲಧಿಕಾರಿಗಳ ಗಮನಕ್ಕೆ ತಂದು ಮೃತನ ಕುಟುಂಬದವರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X