Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಂಧೀ ಹಂತಕರ ಕಾನೂನು ನೆರವಿಗೆ ನಿಧಿ...

ಗಾಂಧೀ ಹಂತಕರ ಕಾನೂನು ನೆರವಿಗೆ ನಿಧಿ ಸಂಗ್ರಹದಲ್ಲಿ ಬಿಜೆಪಿ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಪಾತ್ರ

catch news ಎಕ್ಸ್ ಕ್ಲೂಸಿವ್

ವಾರ್ತಾಭಾರತಿವಾರ್ತಾಭಾರತಿ30 July 2016 1:26 PM IST
share
ಗಾಂಧೀ ಹಂತಕರ ಕಾನೂನು ನೆರವಿಗೆ ನಿಧಿ ಸಂಗ್ರಹದಲ್ಲಿ ಬಿಜೆಪಿ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಪಾತ್ರ

ಹೊಸದಿಲ್ಲಿ, ಜು.30: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರದ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಒಂದು ಹೇಳಿಕೆ ಇತ್ತೀಚೆಗೆ ಸಾಕಷ್ಟು ಚರ್ಚೆಗೆ ಆಸ್ಪದ ನೀಡಿತ್ತು. ಗಾಂಧೀಜಿ ಹತ್ಯೆಯಲ್ಲಿ ಹಿಂದೂ ಮಹಾಸಭಾ ಕಾರ್ಯಕರ್ತರು ದೋಷಿಗಳೆಂದು ಪರಿಗಣಿತರಾಗಿದ್ದರೂ, ಆರೆಸ್ಸೆಸ್ ಹಾಗೂ ಹಿಂದೂ ಮಹಾಸಭಾ ನಡುವಿನ ಸಂಬಂಧದ ಬಗ್ಗೆ ಹಲವು ಪ್ರಶ್ನೆಗಳಿವೆ. ತಾನು ಮಹಾಸಭಾಗಿಂತ ಸೈದ್ಧಾಂತಿಕವಾಗಿ ಭಿನ್ನವೆಂದು ಆರೆಸ್ಸೆಸ್ ಹೇಳಿಕೊಳ್ಳುತ್ತಿದೆಯಾದರೂ ಎರಡು ಸಂಘಟನೆಗಳೂ ಆತ್ಮೀಯವಾಗಿದ್ದವೆಂದು ಇತಿಹಾಸದ ದಾಖಲೆಗಳು ತಿಳಿಸುತ್ತವೆ.

 ಹಿರಿಯ ಬಿಜೆಪಿ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿಯವರು ಗಾಂಧಿ ಹತ್ಯೆ ಆರೋಪಿಗಳಿಗೆ ಕಾನೂನು ನೆರವು ನೀಡಲು, ನಿಧಿ ಸಂಗ್ರಹಿಸಲು ತಮ್ಮ ಪಕ್ಷದ ಮೂಲಕ ಪ್ರಯತ್ನಿಸಿದ್ದರು ಎಂದು ತಿಳಿದು ಬರುತ್ತದೆ. ಈ ಬಗ್ಗೆ ಮುಖರ್ಜಿ ಮೇ 4,1948 ರಲ್ಲಿ ಸರ್ದಾರ್ ಪಟೇಲ್ ಅವರಿಗೆ ಪತ್ರವೊಂದನ್ನೂ ಬರೆದು ಗಾಂಧೀಜಿ ಹತ್ಯೆ ನಂತರ ಬಂಧಿತರಾಗಿದ್ದ ಹಿಂದೂ ಮಹಾಸಭಾ ಸದಸ್ಯರನ್ನು ಬಿಡುಗಡೆಗೊಳಿಸುವಂತೆ ವಿನಂತಿಸಿದ್ದರಲ್ಲದೆ, ಆರೆಸ್ಸೆಸ್ ಕಾರ್ಯಕರ್ತರ ಭವಿಷ್ಯದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದ್ದರು.

ಆರೆಸ್ಸೆಸ್ ಹಾಗೂ ಹಿಂದೂ ಮಹಾಸಭಾ ನಡುವೆ ಸೈದ್ಧಾಂತಿಕ ಹಾಗೂ ಸಂಘಟನಾತ್ಮಕ ಸಂಬಂಧಗಳಿರದೇ ಹೋಗಿದ್ದಲ್ಲಿ ಮುಖರ್ಜಿ ಈ ಬಗ್ಗೆ ಬರೆಯುತ್ತಿದ್ದರೇ ಎಂಬುದು ಈಗಿನ ಪ್ರಶ್ನೆಯಾಗಿದೆ ಎಂದು ಕ್ಯಾಚ್ ನ್ಯೂಸ್ ವರದಿಯೊಂದು ತಿಳಿಸಿದೆ.

ಮುಖರ್ಜಿ ಪತ್ರಕ್ಕೆ ತಮ್ಮ ಉತ್ತರದಲ್ಲಿ ಪಟೇಲ್ ಸೆಪ್ಟೆಂಬರ್ 1948 ರಲ್ಲಿ ಬರೆದ ಪತ್ರದಲ್ಲಿ ಮಹಾಸಭಾದ ಸಾಕಷ್ಟು ಸದಸ್ಯರು ದುರಂತದ ಬಗ್ಗೆ ಸಂತಸ ವ್ಯಕ್ತಪಡಿಸಿ ಸಿಹಿತಿಂಡಿ ವಿತರಿಸಿದ್ದರು ಎಂಬ ಬಗ್ಗೆ ನಾವು ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ, ಎಂದು ಬರೆದಿದ್ದರು.

ದಿಲ್ಲಿ ಪೊಲೀಸರ ನವೆಂಬರ್ 29, 1947ಸಿಐಡಿ ಇಲಾಖೆ ವರದಿಯೊಂದರಲ್ಲಿ ಬರೆದಿರುವಂತೆ ಆರೆಸ್ಸೆಸ್ ಹಾಗೂ ಮಹಾಸಭಾ ಮುಂದಿನ ಅಸೆಂಬ್ಲಿ ಚುನಾವಣೆಗಳಲ್ಲಿ ದೇಶದ ವಿವಿಧೆಡೆ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಹೇಳಲಾಗಿತ್ತು. ಈ ಮೈತ್ರಿ ನಡೆದಿತ್ತೇ ಅಥವಾ ಇಲ್ಲವೇ ಎಂಬುದು ತಿಳಿದಿಲ್ಲವಾದರೂ ಎರಡೂ ಸಂಘಟನೆಗಳೂ ಜತೆಯಾಗಿಯೇ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಯೋಚಿಸುತ್ತಿದ್ದುದು ನಿಜ, ಎಂದು ಕ್ಯಾಚ್ ನ್ಯೂಸ್ ವರದಿ ಹೇಳಿದೆ.

ಎರಡೂ ಸಂಘಟನೆಗಳ ನಡುವೆ ಇರುವ ಗೆಳೆತನದ ಬಗ್ಗೆ ಸಿಪಿಐನ ಧನ್ವಂತರಿ ಹಾಗೂ ಪಿ.ಸಿ. ಜೋಷಿಯವರು 1947 ರಲ್ಲಿ ಪ್ರಕಟಿಸಿದ್ದ ಲೇಖನ ಬ್ಲೀಡಿಂಗ್ ಪಂಜಾಬ್ ವಾರ್ನ್ಸ್ ನಲ್ಲೂ ಉಲ್ಲೇಖಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X