Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಕರ್ತ ಸರಕಾರದ ಪರ ವಹಿಸಿದರೆ ಆ ಸರಕಾರ...

ಪತ್ರಕರ್ತ ಸರಕಾರದ ಪರ ವಹಿಸಿದರೆ ಆ ಸರಕಾರ ಜನವಿರೋಧಿ ಆಗಿದೆ ಎಂದರ್ಥ : ರವೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ30 July 2016 3:11 PM IST
share
ಪತ್ರಕರ್ತ ಸರಕಾರದ ಪರ ವಹಿಸಿದರೆ ಆ ಸರಕಾರ ಜನವಿರೋಧಿ ಆಗಿದೆ ಎಂದರ್ಥ : ರವೀಶ್ ಕುಮಾರ್

ಹೊಸದಿಲ್ಲಿ, ಜು. 30 : ಟೈಮ್ಸ್ ನೌ ಚಾನಲ್ ನ ಅರ್ನಬ್ ಗೋಸ್ವಾಮಿ ವಿರುದ್ಧ ಹಿರಿಯ ಪತ್ರಕರ್ತೆ ಬರ್ಖಾ ದತ್ ವಾಗ್ದಾಳಿ ನಡೆಸಿದ ಬಳಿಕ ಪತ್ರಕರ್ತರ ನಡುವೆ ನಡೆಯುತ್ತಿರುವ ಚರ್ಚೆಯಲ್ಲಿ ಎನ್ ಡಿ ಟಿ ವಿ ಯ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಪ್ರವೇಶಿಸಿದ್ದಾರೆ.

ಈ ಬಗ್ಗೆ ತಮ್ಮ ಬ್ಲಾಗ್ ' ನಯೀ ಸಡಕ್ '  ನಲ್ಲಿ ಬರೆದಿರುವ ರವೀಶ್ , ಯಾವತ್ತು ಪತ್ರಕರ್ತ ಸರಕಾರದ ಪರ ವಹಿಸುತ್ತಾನೋ ಅವತ್ತು ಆ ಸರಕಾರ ಜನವಿರೋಧಿ ಆಗಿದೆ ಎಂದು ಅರ್ಥ ಎಂದು ವಿಶ್ಲೇಷಿಸಿದ್ದಾರೆ. ಈ ಮೂಲಕ ಹೆಸರು ಹೇಳದೆಯೇ ಅರ್ನಬ್ ಗೋಸ್ವಾಮಿಯನ್ನು ಅವರು ಕುಟುಕಿದ್ದಾರೆ. 

ಅವರ ಬರಹದ ಮುಖ್ಯಅಂಶ ಹೀಗಿದೆ 

" ನೀವು ಇಂದು ಒಬ್ಬ ವ್ಯಕ್ತಿಯ ಮಹತ್ವಾಕಾಂಕ್ಷೆಗಾಗಿ ಟಿವಿಯಲ್ಲಿ ನಡೆಯುತ್ತಿರುವ ತಮಾಷೆಯನ್ನು ಪತ್ರಿಕೋದ್ಯಮ ಎಂದು ತಿಳಿದಿದ್ದರೆ ಅದು ನಿಜವಲ್ಲ. ಪ್ರತಿದಿನ ನಿಮ್ಮನ್ನು ದೇಶಭಕ್ತಿ ಹಾಗು ದೇಶದ್ರೋಹದ ಚರ್ಚೆಯ ಮೂಲಕ ಸೆಳೆಯುತ್ತಿರುವ ಇದರ ಉದ್ದೇಶ ನೀವು ವಾಸ್ತವಗಳ ಕುರಿತು ಪ್ರಶ್ನಿಸಬಾರದು ಎಂದಾಗಿದೆ. ಬೇಳೆಯ ಬೆಳೆಯ ಬಗ್ಗೆ , ಹೆಚ್ಚ್ಚುತ್ತಿರುವ ಮಕ್ಕಳ ಫೀಸು ಇತ್ಯಾದಿಗಳ ಬಗ್ಗೆ ನೀವು ಮಾತನಾಡಬಾರದು. ಇದಕ್ಕಾಗಿ  ಮಾಧ್ಯಮಗಳಲ್ಲಿ ಇವತ್ತು ದೇಶಭಕ್ತಿಯ ಜಾಲ ಹರಡಲಾಗಿದೆ.  ಟಿವಿ ನಿರೂಪಕನೇ ಪತ್ರಕರ್ತರ ವಿರುದ್ಧ ದೇಶದ್ರೋಹದ ಮೊಕದ್ದಮೆ ದಾಖಲಿಸುವಂತೆ ಸರಕಾರಕ್ಕೆ ಹೇಳುತ್ತಿದ್ದಾನೆ. ಯಾವತ್ತು ಪತ್ರಕರ್ತ ಸರಕಾರದ ಪರ ವಹಿಸಿದನೋ, ಅವತ್ತೇ ಆ ಸರಕಾರ ಜನವಿರೋಧಿ ಆಗಿದೆ ಎಂದರ್ಥ. ಪತ್ರಕರ್ತನೇ ಪತ್ರಕರ್ತರನ್ನು ಗುರಿಯಾಗಿಸಿದರೆ ಅದು ಯಾವುದೇ ಸರಕಾರಕ್ಕೆ ಅತ್ಯಂತ ಖುಷಿಯ ವಿಷಯ. ಆಗ ಮೂಲಭೂತ ಪ್ರಶ್ನೆಗಳನ್ನು ಎತ್ತುವುದೇ ನಿಂತು ಹೋಗುತ್ತದೆ. ಪಿ ಎಫ್ ವಿಷಯದಲ್ಲಿ ಮಾಧ್ಯಮಗಳು ಗಾರ್ಮೆಂಟ್ ಕಾರ್ಮಿಕರ ಪರ ನಿಲ್ಲದಾಗ ಅವರೇ ಬೆಂಗಳೂರಿನಲ್ಲಿ ಬೀದಿಗಿಳಿದು ಸರಕಾರಕ್ಕೆ ಬಿಸಿ ಮುಟ್ಟಿಸಿದರು. ಇದನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ಜೆ ಎನ್ ಯು ವಿಷಯದಲ್ಲೂ ದೇಶಭಕ್ತಿಯ ಹೆಸರಲ್ಲಿ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡಿದರು. ಆದರೆ ಅದರಲ್ಲಿ ವಿಫಲರಾದರು. ಈಗ ಕಾಶ್ಮೀರದ ಹೆಸರಲ್ಲಿ ಅದೇ ಪ್ರಯತ್ನ ಮಾಡುತ್ತಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X