Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಡಿಒಗಳು ಮಾದರಿ ಗ್ರಾ.ಪಂ ಮಾಡುವ...

ಪಿಡಿಒಗಳು ಮಾದರಿ ಗ್ರಾ.ಪಂ ಮಾಡುವ ಗುರಿಯಾಗಿರಿಸಿ: ಕೋಟ ಶ್ರೀನಿವಾಸ್ ಪೂಜಾರಿ

ಗ್ರಾ.ಪಂ ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ30 July 2016 5:50 PM IST
share
ಪಿಡಿಒಗಳು ಮಾದರಿ ಗ್ರಾ.ಪಂ ಮಾಡುವ ಗುರಿಯಾಗಿರಿಸಿ: ಕೋಟ ಶ್ರೀನಿವಾಸ್ ಪೂಜಾರಿ

ಪುತ್ತೂರು, ಜು.30: ಗ್ರಾ.ಪಂನಲ್ಲಿ ಮಾಡಿದಷ್ಟು ಮುಗಿಯದ ಕೆಲಸಗಳಿವೆ. ಕಳೆದ 20 ವರ್ಷಗಳಲ್ಲಿ ಗ್ರಾ.ಪಂ.ಗಳು ತುಂಬಾ ಅಭಿವೃದ್ಧಿ ಕಂಡಿವೆ. ತಂತ್ರಜ್ಞಾನಗಳ ಬಳಕೆಯಾಗಿದೆ. ಪಿಡಿಒಗಳು ತಮ್ಮ ಗ್ರಾಮ ಪಂಚಾಯತ್‌ಗಳನ್ನು ಮಾದರಿಯಾಗಿಸುವ ಗುರಿ ಹೊಂದಿರಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ತಾ.ಪಂ ಸಭಾಂಗಣದಲ್ಲಿ ಜು.30ರಂದು ನಡೆದ ತಾಲೂಕು ಗ್ರಾ.ಪಂಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಹೆಚ್ಚಿನ ಪಂಚಾಯತ್‌ಗಳಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳನ್ನು ನಿಭಾಯಿಸಿಕೊಂಡು ಉತ್ತಮ ಆಡಳಿತ ತರುವಲ್ಲಿ ಪಿಡಿಒಗಳು ಯಶಸ್ವಿಯಾಗಬೇಕೆಂದು ಹೇಳಿದ ಅವರು ಸಮಸ್ಯೆಗಳ ಕುರಿತು ವಿಚಾರಿಸಿದರು.

ಗ್ರಾ.ಪಂಗಳಲ್ಲಿ ಸರಕಾರದ ಹೊಸ ಯೋಜನೆಗಳು ರೂಪುಗೊಂಡಿವೆ. ಇದರಿಂದ ಕೆಲಸ ಜಾಸ್ತಿ ಆಗಿದೆ. ಸಿಬ್ಬಂದಿಯ ಕೊರತೆಯನ್ನು ಪರಿಹರಿಸಬೇಕು. ಕಂಪ್ಯೂಟರ್ ಮತ್ತು ಸ್ಕ್ಯಾನರ್ ಖರೀದಿಗೆ ಅನುಮತಿ ನೀಡಬೇಕು ಮತ್ತು ಪಂಚತಂತ್ರ ಮತ್ತು ಇ-ತಂತ್ರಾಂಶದಲ್ಲಿನ ಸಾಪ್ಟ್‌ವೇರ್‌ನಲ್ಲಿರುವ ದೋಷಗಳ ಕುರಿತು ಪಿಡಿಒಗಳು ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಉತ್ತರಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಹೊಸ ಕಂಪ್ಯೂಟರ್ ಮತ್ತು ಸ್ಕ್ಯಾನರ್ ಖರೀದಿ ಕುರಿತು ಪ್ರಸ್ತಾವನೆ ಮಾಡಿದ್ದೇನೆ. ಈ ನಡುವೆ ಪಂಚಾಯತ್ ಮಟ್ಟದಲ್ಲೇ ಖರೀದಿಗೂ ಅನುಮತಿ ನೀಡುವಂತೆ ಮಾತುಕತೆ ನಡೆಸುತ್ತೇನೆ ಎಂದು ಭರವಸೆ ನೀಡಿದರು. ಒಎಫ್‌ಸಿ ಕೇಬಲ್ ಅಳವಡಿಸಿದರೂ ಇಂಟರ್‌ನೆಟ್ ಸರಿಯಾಗಿ ವರ್ಕ್ ಆಗುತ್ತಿಲ್ಲ ಮತ್ತು ದೂರವಾಣಿ ಬಿಲ್ 1 ಸಾವಿರ ರೂ. ಪಾವತಿ ಮಾಡಲು ಅವಕಾಶವಿದೆ. ಇಂಟರ್‌ನೆಟ್ ಬಂದ ಬಳಿಕ ಬಿಲ್ ಮೊತ್ತ ಜಾಸ್ತಿಯಾಗಿದೆ ಎಂದು ಸಭೆಯಲ್ಲಿ ಪಿಡಿಒಗಳು ಪ್ರಸ್ತಾಪ ಮಾಡಿದರು. ಈ ಎಲ್ಲಾ ಸಮಸ್ಯೆಗಳ ಕುರಿತು ಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು.

ಸಭೆಯಲ್ಲಿ ತಾ.ಪಂ ಅಧ್ಯಕ್ಷೆ ಭವಾನಿ ಚಿದಾನಂದ, ಉಪಾಧ್ಯಕ್ಷ ಮುಕುಂದ, ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X