Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಗೋಮಾಳ ಜಾಗದಲ್ಲಿ...

ಸುಳ್ಯ: ಗೋಮಾಳ ಜಾಗದಲ್ಲಿ ವಾಸಿಸುತ್ತಿರುವವರಿಗೆ 94ಸಿ ಹಕ್ಕುಪತ್ರ ನೀಡುವಂತೆ ಆಗ್ರಹ

ಪರಿಶಿಷ್ಟ ಜಾತಿ - ಪಂಗಡಗಳ ಕುಂದುಕೊರತೆ ಸಬೆ

ವಾರ್ತಾಭಾರತಿವಾರ್ತಾಭಾರತಿ30 July 2016 7:29 PM IST
share

ಸುಳ್ಯ, ಜು.30: ಗೋಮಾಳದ ಜಾಗದಲ್ಲಿ ಮನೆ ಕಟ್ಟಿ ಕುಳಿತವರಿಗೆ 94 ಸಿ ಯೋಜನೆಯಲ್ಲಿ ಹಕ್ಕುಪತ್ರ ನೀಡಲು ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚಿಸಿದರೂ ತಹಶೀಲ್ದಾರ್ ಅವರ ಸೂಚನೆ ಪಾಲಿಸುತ್ತಿಲ್ಲ ಎಂದು ಆರೋಪಿಸಿ ದಲಿತ ಮುಖಂಡರು ತಹಶೀಲ್ದಾರರನ್ನು ತರಾಟೆಗೆತ್ತಿಕೊಂಡ ಘಟನೆ ಎಸ್ಸಿ -ಎಸ್ಟಿ ಕುಂದುಕೊರತೆ ಸಭೆಯಲ್ಲಿ ನಡೆದಿದೆ.

ತಹಶೀಲ್ದಾರ್ ಅನಂತ ಶಂಕರ್‌ರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ಕೃಷ್ಣಯ್ಯ, ಸಬ್‌ಇನ್‌ಸ್ಪೆಕ್ಟರ್ ಚಂದ್ರಶೇಖರ, ಸಮಾಜ ಕಲ್ಯಾಣಾಧಿಕಾರಿ ರಾಮಕೃಷ್ಣ ಭಟ್ ವೇದಿಕೆಯಲ್ಲಿದ್ದರು.

ಸಬೆಯಲ್ಲಿ ವಿಷಯ ಪ್ರಸ್ತಾಪಿಸಿದ ಆನಂದ ಬೆಳ್ಳಾರೆ ಮತ್ತು ಬಾಬು ಕೆ.ಎಂ., ಜಾಲ್ಸೂರು ಗ್ರಾಮದ ಕೋನಡ್ಕಪದವಿನಲ್ಲಿ ಹಲವು ವರ್ಷಗಳಿಂದ 37 ಕುಟುಂಬದವರು ಗೋಮಾಳದಲ್ಲಿ ಮನೆ ಕಟ್ಟಿ ಕುಳಿತಿದ್ದಾರೆ. 94 ಸಿ ಯೋಜನೆಯಲ್ಲಿ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದಾಗ ಗೋಮಾಳ ಜಾಗ ಆದ್ದರಿಂದ ಹಕ್ಕುಪತ್ರ ಕೊಡಲು ಬರುವುದಿಲ್ಲ ಎಂದು ತೋರಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಯವರ ಬಳಿಗೆ ನಿಯೋಗ ಹೋಗಿ ಈ ಕುರಿತು ಚರ್ಚಿಸಿದಾಗ ಗೋಮಾಳಕ್ಕೆ ಬದಲಿ ಜಾಗವನ್ನು ಗುರುತಿಸಿ ಈಗ ಇರುವ ಜಾಗವನ್ನು ಆ ಫಲಾನುಭವಿಗಳಿಗೆ ಕೊಡಬಹುದು. ಇದಕ್ಕೆ ಸೂಕ್ತ ಕ್ರಮ ಜರುಗಿಸುವಂತೆಯೂ, ಪ್ರಸ್ತಾವನೆಯನ್ನು ಕಳುಹಿಸಿ ಕೊಡುವಂತೆಯೂ ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚಿಸಿದರೂ ಅವರು ಕ್ರಮಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

ತಹಶೀಲ್ದಾರ್ ಅನಂತಶಂಕರ್ ಮಾತನಾಡಿ, ಅದು ಗೋಮಾಳದ ಜಾಗ ಆಗಿದೆ. ಇದನ್ನು ನೋಡುತ್ತೇವೆ ಎಂದು ಹೇಳಿದರು. ತಾಲೂಕಿನಲ್ಲಿ ಹಲವು ಕಡೆ ಗೋಮಾಳದ ಸ್ಥಳ ಇದೆ. ಕೆಲವರಿಗೆ ಗೋಮಾಳದಲ್ಲಿ ಹಕ್ಕುಪತ್ರ ನೀಡಿದ್ದೀರಿ. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಒಂದು ಕಾನೂನು ಬೇಡ. ಸುಳ್ಯದಲ್ಲಿ ಕೆಲವು ಮೇಲ್ವರ್ಗದ ಸಂಘ ಸಂಸ್ಥೆಯವರಿಗೆ ಗೋಮಾಳವನ್ನು ಕೊಟ್ಟಿದ್ದೀರಿ. ಯಾರು ನಿಮಗೆ ಹಣ ಕೊಡುತ್ತಾರೋ ಅವರಿಗೆ ಕೊಡುತ್ತೀರಿ. ಡಿ.ಸಿ.ಯವರ ಸೂಚನೆಯನ್ನೇ ನೀವು ಪಾಲಿಸುತ್ತಿಲ್ಲ ಎಂದರೆ ಏನು ಅರ್ಥ? ಎಂದು ಬಾಬು ಕೆ.ಎಂ. ಹಾಗೂ ಆನಂದರು ಪ್ರಶ್ನಿಸಿದರು. ಅವರ ಜತೆಯಲ್ಲಿ ಸಂಜಯ ಪೈಚಾರು, ನಾರಾಯಣ ಜಟ್ಟಿಪಳ್ಳ, ಶಂಕರ ಪೆರಾಜೆ, ಅಚ್ಚುತ ಮಲ್ಕಜೆ ಮೊದಲಾದವರು ಧ್ವನಿಗೂಡಿಸಿ ಮಾತನಾಡಿದರು.

ನಾವು ಬಡವರು ಶ್ರೀಮಂತರು ಎಂದು ನೋಡಿಲ್ಲ. ಕಾನೂನು ಪ್ರಕಾರ ಕೆಲಸ ಆಗಿದೆ. ಈಗಾಗಲೇ 1,532 ಹಕ್ಕು ಪತ್ರ ನೀಡಿದ್ದೇವಲ್ಲ ಎಂದು ತಹಶೀಲ್ದಾರ್ ಹೇಳಿದರು. ಡಿಸಿ ಮನ್ನಾ ಜಮೀನನ್ನು ಹೀಗೆ ಮಾಡಿದ್ದೀರಿ. ಸರ್ವೇ ಕಾರ್ಯವೂ ನಡೆಸುತ್ತಿಲ್ಲ ಎಂದು ದಲಿತ ಮುಖಂಡರು ಹೇಳಿದರು. ಕೋನಡ್ಕ ಪದವಿನ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕೆಲಸ ಶೀಘ್ರದಲ್ಲೇ ಆಗಬೇಕು. ಇಲ್ಲವಾದರೆ ತಾಲೂಕು ಕಚೇರಿ ಎದುರು ಧರಣಿ ಕುಳಿತುಕೊಳ್ಳುವುದಾಗಿ ಆನಂದ ಬೆಳ್ಳಾರೆ ಹೇಳಿದರು. ಈ ಕುರಿತು ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕ್ರಿಯೆಗೆ 4 ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ತಹಶೀಲ್ದಾರ್ ಅನಂತಶಂಕರ್ ಹೇಳಿದರು.

ಸುಳ್ಯ ನ.ಪಂ. ಚುನಾವಣೆಯ ಸಂದರ್ಭದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆಗೆ ಸ್ಪರ್ಧಿಸಿದ ನ.ಪಂ. ಸದಸ್ಯ ಗೋಕುಲ್‌ದಾಸ್‌ರ ಸದಸ್ಯತ್ವ ವಜಾಕ್ಕೆ ನ್ಯಾಯಾಲಯ ಸೂಚಿಸಿದರೂ ಕ್ರಮ ಜರುಗಿಸಿಲ್ಲ. ಹಿಂದಿನ ಸಭೆಯಲ್ಲಿಯೂ ನಾವು ಈ ಕುರಿತು ಪ್ರಸ್ತಾಪಿಸಿದ್ದೆವು ಎಂದು ಸಂಜಯ ಪೈಚಾರು ಹೇಳಿದರು. ಅವರು ಮನ್ನೆ ಜಾತಿ ಎಂದು ಉಲ್ಲೇಖಿಸಿದ್ದಾರೆ. ವಿ.ಎ.ಯವರು ಖಾಲಿ ಪತ್ರದಲ್ಲಿ ಮನ್ನೆ ಎಂದು ಬರೆದು ಸಹಿ ಹಾಕಿದ್ದಾರೆ. ಈ ಬಗ್ಗೆಯೂ ತನಿಖೆ ಯಾಗಬೇಕು. ಅಲ್ಲದೆ ನಮ್ಮಲ್ಲಿ ಆ ಹೆಸರಿನ ಜಾತಿಯಿಲ್ಲ. ಕೇರಳದಲ್ಲಿಯೂ ಈ ಜಾತಿಯ ಉಲ್ಲೇಖವಿಲ್ಲ. ಇಲ್ಲಿ ನೀವು ಕ್ರಮ ಕೈಗೊಳ್ಳದಿದ್ದರೆ ಮತ್ತೆ ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಹೇಳಿದರು.

ಹೊಸಗದ್ದೆಯಲ್ಲಿ ಬಾಬು ಕೊರಗ ಎಂಬವರ ಹೆಸರಿಗೆ ಆಗಿದ್ದ ಜಾಗದ ಆರ್‌ಟಿಸಿಯನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಮರುತನಿಖೆ ನಡೆಸುವಂತೆ ತಹಶೀಲ್ದಾರರಿಗೆ ಮನವಿ ಮಾಡಿಕೊಳ್ಳಲಾಯಿತು. ಗುತ್ತಿಗಾರು ಸೇರಿದಂತೆ ತಾಲೂಕಿನ ಕೆಲವು ಕಡೆಗಳಲ್ಲಿ ಡಿ.ಸಿ. ಮನ್ನಾ ಜಮೀನಿನ ಸರ್ವೇ ನಡೆದ ಸಂದರ್ಭದಲ್ಲಿ ಆ ಜಾಗದಲ್ಲಿರುವ ದಲಿತರನ್ನು ಎಬ್ಬಿಸಲಾಗುತ್ತದೆ ಎಂದು ಅಚ್ಚುತ ಮಲ್ಕಜೆ ಸಬೆಯ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X