Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧ ಗೆಲ್ಲಲು ಕಠಿಣ ತರಬೇತಿ...

ಯುದ್ಧ ಗೆಲ್ಲಲು ಕಠಿಣ ತರಬೇತಿ ಪಡೆಯುತ್ತಿರುವ ಚೀನಾ ಸೇನೆ

ದಕ್ಷಿಣ ಚೀನಾ ಸಮುದ್ರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಉದ್ವಿಗ್ನತೆ

ವಾರ್ತಾಭಾರತಿವಾರ್ತಾಭಾರತಿ30 July 2016 8:56 PM IST
share
ಯುದ್ಧ ಗೆಲ್ಲಲು ಕಠಿಣ ತರಬೇತಿ ಪಡೆಯುತ್ತಿರುವ ಚೀನಾ ಸೇನೆ

ಬೀಜಿಂಗ್, ಜು. 30: ವಿವಾದಾಸ್ಪದ ದಕ್ಷಿಣ ಚೀನಾ ಸಮುದ್ರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಚೀನಾ ಸೇನೆಯು ತನ್ನ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಮೂಲಭೂತ ಪರಿವರ್ತನೆಯಲ್ಲಿ ತೊಡಗಿದೆ. ಅದೇ ವೇಳೆ, ಯುದ್ಧಗಳನ್ನು ಜಯಿಸಲು ಕಠಿಣ ತರಬೇತಿ ಪಡೆಯುವಂತೆ ರವಿವಾರ 89ನೆ ವರ್ಷಕ್ಕೆ ಕಾಲಿಡುವ 23 ಲಕ್ಷ ಬಲದ ಪೀಪಲ್ಸ್ ಲಿಬರೇಶನ್ ಆರ್ಮಿಯನ್ನು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒತ್ತಾಯಿಸಿದ್ದಾರೆ.
ಸಂಪನ್ಮೂಲ ಸಂಪದ್ಭರಿತ ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾಕ್ಕೆ ಐತಿಹಾಸಿಕ ಹಕ್ಕಿಲ್ಲ ಎಂಬುದಾಗಿ ಈ ತಿಂಗಳ ಆರಂಭದಲ್ಲಿ ಹೇಗ್‌ನ ಅಂತಾರಾಷ್ಟ್ರೀಯ ಪಂಚಾಯಿತಿ ನ್ಯಾಯಮಂಡಳಿಯೊಂದು ತೀರ್ಪು ನೀಡಿದ ಬಳಿಕ ಸಮುದ್ರದಲ್ಲಿ ಉದ್ವಿಗ್ನತೆ ದಿನೇ ದಿನೇ ಹೆಚ್ಚುತ್ತಿದೆ. ಒಂದು ವೇಳೆ ಯಾವುದೇ ಕ್ಷಣದಲ್ಲಿ ಯುದ್ಧ ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸುವುದಕ್ಕಾಗಿ ಚೀನಾ ಸೇನೆ ತರಬೇತಿ ಪಡೆಯುತ್ತಿದೆ.
ಅದೂ ಅಲ್ಲದೆ, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪೀಪಲ್ಸ್ ಲಿಬರೇಶನ್ ಆರ್ಮಿಯನ್ನು ಮೇಲಿನಿಂದ ಕೆಳಗೆ ಅಧ್ಯಕ್ಷ ಜಿನ್‌ಪಿಂಗ್ ಸಮಗ್ರವಾಗಿ ಪುನರ್ರಚಿಸಿದ್ದಾರೆ.
‘‘ಸುಧಾರಣೆ ಎನ್ನುವುದು ಸಮಗ್ರ ಹಾಗೂ ಕ್ರಾಂತಿಕಾರಿ ಬದಲಾವಣೆ. ಚೀನಾದ ಅಂತಾರಾಷ್ಟ್ರೀಯ ಸ್ಥಾನಮಾನಕ್ಕೆ ತಕ್ಕಂತೆ ಬಲಿಷ್ಠ ಸಶಸ್ತ್ರ ಪಡೆಗಳನ್ನು ನಿರ್ಮಿಸುವುದಕ್ಕಾಗಿ ಸುಧಾರಣಾ ಪ್ರಕ್ರಿಯೆಗೆ ತಡೆಯಾಗಬಹುದಾದ ಯಾವುದೇ ವಿಷಯಗಳು ಹಾಗೂ ನೀತಿಗಳನ್ನು ಸರಿಯಾಗಿ ನಿಭಾಯಿಸಬೇಕಾಗುತ್ತದೆ’’ ಎಂದು ಜಿನ್‌ಪಿಂಗ್ ಹೇಳಿದ್ದಾರೆ.
ಸೇನೆಯ ಮೇಲಿನ ತನ್ನ ಹಿಡಿತವನ್ನು ಬಲಪಡಿಸಿಕೊಂಡಿರುವ ಅವರು, ಇತ್ತೀಚಿನ ಸಮಯದ ಅತ್ಯಂತ ಬಲಿಷ್ಠ ಚೀನಿ ನಾಯಕನಾಗಿ ಹೊರಹೊಮ್ಮಿದ್ದಾರೆ.
ಚೀನಾ ವಿಶ್ವದಲ್ಲೇ ಅತ್ಯಂತ ದೊಡ್ಡ ಸೇನೆಯನ್ನು ಹೊಂದಿದೆ.
ಇತರ ದೇಶಗಳ ಸೇನೆಗಳು ಆಯಾಯ ಸರಕಾರಗಳ ಅಡಿಯಲ್ಲಿ ಕಾರ್ಯನಿರ್ವಹಿಸಿದರೆ, ಚೀನಾದಲ್ಲಿ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾದ ಅಡಿಯಲ್ಲಿ ಸೇನೆ ಕೆಲಸ ಮಾಡುತ್ತದೆ. ಚೀನಾದ ಸೇನೆಗೆ ಈಗ ಬೃಹತ್ 14,500 ಕೋಟಿ ಡಾಲರ್ ವಾರ್ಷಿಕ ಬಜೆಟ್ ನೀಡಲಾಗುತ್ತಿದೆ. ಬಜೆಟ್ ಗಾತ್ರಕ್ಕೆ ಸಂಬಂಧಿಸಿದಂತೆ ಅಮೆರಿಕದ ನಂತರದ ಸ್ಥಾನದಲ್ಲಿ ಚೀನಾ ಇದೆ.
 2013ರಲ್ಲಿ ಅಧಿಕಾರಕ್ಕೆ ಏರಿದ ಜಿನ್‌ಪಿಂಗ್ ಸೇನೆಯ ಮೇಲೆ ಹೆಚ್ಚಿನ ಗಮನ ಹರಿಸಿದರು. ಪಕ್ಷದ ಅಡಿಯಲ್ಲಿ ಸೇನೆ ಇರಬೇಕು ಹಾಗೂ ಯುದ್ಧಗಳನ್ನು ಗೆಲ್ಲುವುದಕ್ಕಾಗಿ ಸೇನೆಯ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎನ್ನುವ ಬಯಕೆಯನ್ನು ಅವರು ಹೊಂದಿದ್ದರು. ಭ್ರಷ್ಟಾಚಾರವನ್ನು ತೊಲಗಿಸಿ ವೃತ್ತಿಪರ ರೀತಿಯಲ್ಲಿ ಸೇನೆ ಕಾರ್ಯನಿರ್ವಹಿಸುವಂತೆ ಅವರು ಮಾಡಿದರು.
ಭ್ರಷ್ಟಾಚಾರ ಆರೋಪದಲ್ಲಿ, ಇಬ್ಬರು ನಿವೃತ್ತ ಸೇನಾ ಮುಖ್ಯಸ್ಥರು ಸೇರಿದಂತೆ 40ಕ್ಕೂ ಅಧಿಕ ಉನ್ನತ ಕಮಾಂಡರ್‌ಗಳು ವಿಚಾರಣೆ ಎದುರಿಸಿದರು. ಸೇನೆಯಲ್ಲಿ ಭ್ರಷ್ಟಾಚಾರ ತಾಂಡವವಾಡಿತ್ತು. ಭಾರೀ ಮೊತ್ತದ ಲಂಚ ಪಡೆದು ಜನರಲ್‌ಗಳು ಹುದ್ದೆಗಳನ್ನು ಮಾರಾಟ ಮಾಡುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X