Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಹೊಸ ಸಾಹಿತಿಗಳ ಪ್ರೋತ್ಸಾಹಕ್ಕೆ ಸರಕಾರ...

‘ಹೊಸ ಸಾಹಿತಿಗಳ ಪ್ರೋತ್ಸಾಹಕ್ಕೆ ಸರಕಾರ ಮುಂದಾಗಲಿ: ಶ್ರೀರಾಮ್

ವಾರ್ತಾಭಾರತಿವಾರ್ತಾಭಾರತಿ30 July 2016 11:02 PM IST
share
‘ಹೊಸ ಸಾಹಿತಿಗಳ ಪ್ರೋತ್ಸಾಹಕ್ಕೆ ಸರಕಾರ ಮುಂದಾಗಲಿ: ಶ್ರೀರಾಮ್

ಮೂಡಿಗೆರೆ, ಜು.30: ಇಂದಿನ ದಿನಗಳಲ್ಲಿ ಸಾಹಿತಿಗಳು ಆರ್ಥಿಕ ಸ್ಥಿತಿಯಲ್ಲಿ ಹಿಂದಿರುವುದರಿಂದ ಅವರು ಬರೆದ ಕವನ ಸಂಕಲನಗಳನ್ನು ಹೊರ ತರಲಾಗದೆ ಸಂಕಷ್ಟಕ್ಕೆ ಸಿಲುಕಿರುವ ನಿದರ್ಶನಗಳನ್ನು ನಾವಿಂದು ಕಾಣುತ್ತಿದ್ದೇವೆ. ಸಾಹಿತಿಗಳು ಬರೆದ ಪುಸ್ತಕಗಳನ್ನು ಬಿಡುಗಡೆಗೊಳಿಸಲು ಸರಕಾರದಲ್ಲಿ 638 ಕೋಟಿ ರೂ. ಹಣವಿತ್ತು. ಆದರೆ ಅದನ್ನು ಬೇರೆ ಕೆಲಸಕ್ಕೆ ಬಳಸಿಕೊಳ್ಳಲಾಗಿದೆ ಎಂದು ಮೈಸೂರಿನ ಪುಸ್ತಕ ಪ್ರಕಾಶನದ ಮಾಲಕ ಶ್ರೀರಾಮ್ ಆರೋಪಿಸಿದರು.

ಖ್ಯಾತ ಸಾಹಿತಿ ದಿವಂಗತ ಪೂರ್ಣಚಂದ್ರ ತೇಜಸ್ವಿ ಅವರ ಮನೆ ಸಭಾಂಗಣದಲ್ಲಿ ಸಾಹಿತಿ ಪ್ರಸಾದ್ ರಕ್ಷಿದಿ ಬರೆದಿರುವ ‘ನಮ್ಮ ನಡುವಿನ ತೇಜಸ್ವಿನಿ’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಅನೇಕ ಜನರು ಸಾಹಿತ್ಯ ಲೋಕಕ್ಕೆ ಕಾಲಿಡಲು ಬಯಸುತ್ತಿದ್ದರೂ,ಅದಕ್ಕೆ ಬೇಕಾದ ಪೂರಕ ಸಹಕಾರ ಸರಕಾರದಿಂದಾಗಲೀ ಜನರಿಂದಾಗಲೀ ಸಿಗುತ್ತಿಲ್ಲ. ಹೊಸ ಸಾಹಿತಿಗಳು ಮುಂದೆ ಬರಬೇಕೆಂದರೆ ಜನರ ಹಾಗೂ ಸರಕಾರದ ಸಹಕಾರ ಅತ್ಯಗತ್ಯವಾಗಿದೆ. ಪ್ರಸಾದ್ ರಕ್ಷಿದಿ ಬರೆದಿರುವ ಪುಸ್ತಕದಲ್ಲಿ ತೇಜಸ್ವಿಯವರನ್ನು ಮರು ಪರಿಚಯ ಮಾಡಿಕೊಟ್ಟಂತಾಗಿದೆ ಎಂದು ಹೇಳಿದರು.

ನಮ್ಮ ನಡುವಿನ ತೇಜಸ್ವಿನಿ ಲೇಖಕ ಪ್ರಸಾದ್ ರಕ್ಷಿದಿ ಮಾತನಾಡಿ, ತೇಜಸ್ವಿಯವರನ್ನು ನೋಡಿದರೆ ಒಂದು ರೀತಿಯಲ್ಲಿ ಸ್ಫೂರ್ತಿ ಸಿಕ್ಕಿದಂತಾಗುತ್ತದೆ. ಅವರ ಯೋಚನೆಯ ದಿಕ್ಕುಗಳೇ ಬೇರೆ ರಿತಿಯಲ್ಲಿ ಇರುತ್ತಿದ್ದವು. ನಾವು ಮಾಡುವ ಕೆಲ ಸಣ್ಣ ಸಣ್ಣ ತಪ್ಪುಗಳನ್ನು ಬದಲಾಯಿಸಿಕೊಳ್ಳುವಂತೆ ನಮ್ಮ ದೃಷ್ಟಿಯನ್ನೇ ವಿಸ್ತರಿಸಿಕೊಳ್ಳುವಂತಹ ಮಾತುಗಳನ್ನು ಆಡುತ್ತಿದ್ದರು. ತಾನು ಬರೆದ ‘ನಮ್ಮ ನಡುವಿನ ತೇಜಸ್ವಿನಿ’ ಎಂಬ ಪುಸ್ತಕ ಈಗಾಗಲೇ ತೇಜಸ್ವಿಯಿಂದಲೇ ಹೆಸರು ಮಾಡುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜೇಶ್ವರಿ ತೇಜಸ್ವಿ ಮಾತನಾಡಿ, ತೇಜಸ್ವಿಯವರ 1964ರ ಅಂದಿನ ದಿನಗಳಲ್ಲಿ ವಿಮರ್ಶಾತ್ಮಕ ಕವನಗಳು ಹೆಚ್ಚಾಗಿ ಮೂಡಿಬರುತ್ತಿತ್ತು. 90 ದಶಕ ಬಂದಾಗ ಕನ್ನಡ ನಾಡಿನ ಚರಿತ್ರೆಯೇ ಬೇರೆ ರೀತಿಯಲ್ಲಿ ಬದಲಾಗತೊಡಗಿತ್ತು. ಆದರೆ ತೇಜಸ್ವಿಯವರು ತನ್ನದೇ ಆದ ಶೈಲಿಯಲ್ಲಿ ವಿಜ್ಞ್ಞಾನ, ಸೃಷ್ಟಿಯ ಮೂಲ, ಹಾಸ್ಯ, ಜಾಗತೀಕರಣ ಸೇರಿದಂತೆ ಹಲವಾರು ರೀತಿಯ ಬರವಣಿಗೆಗಳನ್ನು ಬರೆದು ಕೊಳ್ಳುವವರಿಗೆ ಹಾಗೂ ಓದುವವರಿಗೆ ಮನಪರಿವರ್ತನೆಗೊಳ್ಳುವಂತೆ ಸಾಹಿತ್ಯ ಲೋಕವನ್ನೇ ಎತ್ತಿ ಹಿಡಿದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸರಕಾರಿಶಾಲಾ ಶಿಕ್ಷಕ ಅರವಿಂದ್ ಚಿಕ್ಕೋಡಿ, ಗಣೇಶ್, ರಘು, ಸೇರಿದಂತೆ ಪೂರ್ಣ ಚಂದ್ರ ತೇಜಸ್ವಿಯವರ ಸಹಚರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X